Webdunia - Bharat's app for daily news and videos

Install App

ಬಿಬಿಎಂಪಿ ವಿಭಜನೆ ಜನತೆ ಸಹಿಸೋಲ್ಲ: ದೇವೇಗೌಡ ಕಿಡಿ

Webdunia
ಸೋಮವಾರ, 24 ಅಕ್ಟೋಬರ್ 2016 (16:53 IST)
ನಾಡಪ್ರಭು ಕೆಂಪೇಗೌಡರ ಹೆಸರು ಸಹಿಸಿಕೊಳ್ಳಲು ಆಗದವರು ಬಿಬಿಎಂಪಿಯನ್ನು ನಾಲ್ಕು ಭಾಗವಾಗಿ ವಿಭಜನೆ ಮಾಡಲು ಹೊರಟಿದ್ದಾರೆ ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಆರೋಪಿಸಿದ್ದಾರೆ.
 
ಡಾ.ಎಚ್.ಎಂ.ಮರಿಗೌಡರ ಜನ್ಮ ಶತಮಾನೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿಭಜನೆ ಮಾಡಲು ಹೊರಟಿರುವುದು ತುಂಬಾ ನೋವು ತಂದಿದೆ. ಯಾವುದೇ ಕಾರಣಕ್ಕೂ ಬಿಬಿಎಂಪಿ ವಿಭಜನೆ ಮಾಡಬಾರದು. ರಾಜಧಾನಿ ಜನರು ಇದನ್ನು ಸಹಿಸುವುದಿಲ್ಲ ಎಂದು ಹೇಳಿದರು. 
 
ರಾಜ್ಯದ ರೈತರ ಹಿತಾಸಕ್ತಿಗಾಗಿ ಎರಡೆರೆಡು ಬಾರಿ ರಾಜೀನಾಮೆ ನೀಡಿದ್ದೇನೆ. ನನ್ನ ರಾಜಕೀಯ ಜೀವನದಲ್ಲಿ ಎಂದೂ ದ್ವೇಷದ ರಾಜಕಾರಣ ಮಾಡಿಲ್ಲ. ದೆಹಲಿಗೆ ಪ್ರಧಾನಿಯಾಗಿ ಹೋಗಿದ್ದು ದುರಂತ, ನಾನು ಇಲ್ಲೆ ಮುಖ್ಯಮಂತ್ರಿಯಾಗಿ ಉಳಿಯಬೇಕಿತ್ತು ಎಂದು ಅಭಿಪ್ರಾಯಪಟ್ಟರು. 
 
ನಮ್ಮ ರೈತರ ಬೆವರಿನ ಹಣದಿಂದ ನಾವು ಜಲಾಶಯ ಕಟ್ಟಿಕೊಂಡರೆ ಇಲ್ಲಿನ ನೀರನ್ನು ಬೇರೆಯವರಿಗೆ ಕೊಡಿ ಅಂತಾರೆ. ನಾನು ಬದುಕಿರುವಾಗಲೇ ನಮ್ಮ ಜಲಾಶಯದ ನೀರು ನಮ್ಮ ರೈತರ ಹೊಲಕ್ಕೆ ಹೋಗುತ್ತಿಲ್ಲ, ಇನ್ನೆಷ್ಟು ದಿನ ಬದುಕಬೇಕು ಎಂದು ಜೆಡಿಎಸ್ ವರಿಷ್ಠ ಎಚ್.ಡಿ.ದೇವೇಗೌಡರು ಬೇಸರ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿದ್ದರಾಮಯ್ಯನವರ ಕುರ್ಚಿ ಅಲ್ಲಾಡಿದಾಗ ಸಾಧನಾ ಸಮಾವೇಶ: ವಿಜಯೇಂದ್ರ

ಭಾರತ, ಪಾಕಿಸ್ತಾನ ಕದನದಲ್ಲಿ 5 ಜೆಟ್ ಹೊಡೆದುರುಳಿಸಲಾಗಿತ್ತು: ಟ್ರಂಪ್ ಮತ್ತೆ ಕಿರಿಕ್

ವಿಪಕ್ಷದವರಿಗೂ ದುಡ್ಡು ಸಿಗುತ್ತೆ, ಕಾಯ್ಬೇಕು ಅಂದ್ರೆ ಏನು ಸ್ವಾಮಿ ಅರ್ಥ: ಆರ್ ಅಶೋಕ್

Arecanut Price: ಅಡಿಕೆ, ಕಾಳುಮೆಣಸು ಇಂದಿನ ಮಾರುಕಟ್ಟೆ ದರ ಹೇಗಿದೆ

Gold Price: ವಾರಂತ್ಯಕ್ಕೆ ಚಿನ್ನ, ಬೆಳ್ಳಿ ಬೆಲೆ ಭಾರೀ ಏರಿಕೆ

ಮುಂದಿನ ಸುದ್ದಿ
Show comments