Webdunia - Bharat's app for daily news and videos

Install App

ಗಣೇಶ ಹಬ್ಬಕ್ಕೆ ಮತ್ತೆ ಬಂತು ಕಠಿಣ ರೂಲ್ಸ್: ಗಣೇಶನನ್ನು ಕೂರಿಸುವವರು ತಪ್ಪದೇ ಗಮನಿಸಿ

Krishnaveni K
ಗುರುವಾರ, 21 ಆಗಸ್ಟ್ 2025 (09:37 IST)
ಬೆಂಗಳೂರು: ಗಣೇಶ ಹಬ್ಬಕ್ಕೆ ಈ ಬಾರಿಯೂ ಬಿಬಿಎಂಪಿ ಕಠಿಣ ನಿಯಮಗಳನ್ನು ರೂಪಿಸಿದೆ. ಗಣೇಶ ತಂದು ಕೂರಿಸುವವರು ಈ ನಿಯಮಗಳನ್ನು ತಪ್ಪದೇ ಗಮನಿಸಿ.

ಗಣೇಶ ಹಬ್ಬಕ್ಕೆ ಕೆಲವೇ ದಿನ ಬಾಕಿಯಿರುವಾಗ ಬಿಬಿಎಂಪಿ ಮಾರ್ಗಸೂಚಿ ಪ್ರಕಟಿಸಿದೆ. ಪಿಒಪಿ ಗಣೇಶನ ಮೂರ್ತಿಯನ್ನು ಮಾರಾಟ ಮಾಡುವುದು ಮನೆಗೆ ತರುವುದು ಕ್ರಿಮಿನಲ್ ಅಪರಾಧವೆಂದು ಪರಿಗಣಿಸಲಾಗುತ್ತದೆ ಎಂದು ಬಿಬಿಎಂಪಿ ಕಟ್ಟುನಿಟ್ಟಾಗಿ ಹೇಳಿದೆ.

ಬಿಬಿಎಂಪಿ ಉಪವಿಭಾಗಗಳ ನೋಡಲ್ ಅಧಿಕಾರಿಗಳು, ಪೊಲೀಸ್, ಅಗ್ನಿಶಾಮಕ ಮತ್ತು ಬೆಸ್ಕಾಂ ಅಧಿಕಾರಿಗಳು ಇದರ ಬಗ್ಗೆ ಗಮನ ಹರಿಸಲು ಸೂಚಿಸಲಾಗಿದೆ. ಪರಿಸರ ಸ್ನೇಹಿ ಗಣೇಶನನ್ನೇ ಮಾರಾಟ ಮಾಡಬೇಕು ಮತ್ತು ಖರೀದಿ ಮಾಡಬೇಕು ಎಂದು ಸೂಚಿಸಲಾಗಿದೆ. ನಿಷೇಧಿತ ವಸ್ತು ಬಳಸಿ ತಯಾರಿಸಿದ ಗಣೇಶನ ಮೂರ್ತಿಗಳನ್ನು ವಶಪಡಿಸಿಕೊಳ್ಳಲಾಗುತ್ತದೆ.

ನೈಸರ್ಗಿಕವಾಗಿ ಜೇಡಿಮಣ್ಣಿನಿಂದ ತಯಾರಿಸಿದ ಗಣೇಶನನ್ನೇ ತಯಾರು ಮಾಡಬೇಕು. ಇನ್ನು, ಗಣೇಶ ಹಬ್ಬದ ನೆಪದಲ್ಲಿ ಜೋರಾಗಿ ಡಿಜೆ ಹಾಕಿಕೊಂಡು ಶಬ್ದ ಮಾಲಿನ್ಯ ಮಾಡುವಂತಿಲ್ಲ. ಗಣೇಶನ ಮೂರ್ತಿ ಕೂರಿಸಲು ಉಪವಿಭಾಗೀಯ ಮಟ್ಟದಲ್ಲಿ ನೋಡಲ್ ಅಧಿಕಾರಿಗಳಾಗಿ ನೇಮಕಗೊಂಡ ಕಾರ್ಯನಿರ್ವಾಹಕ ಎಂಜಿನಿಯರ್ ಗಳ ಕಚೇರಿಯಲ್ಲಿ ಅನುಮತಿ ಕಡ್ಡಾಯವಾಗಿ ಪಡೆಯಬೇಕು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments