Webdunia - Bharat's app for daily news and videos

Install App

ಬೆಂಗಳೂರು ಒನ್ ಕೇಂದ್ರದಲ್ಲೂ ಇ ಖಾತಾ ಮಾಡಿಸಲು ಕಷ್ಟವೇ: ಬಿಬಿಎಂಪಿಯಿಂದ ಹೊಸ ಪ್ಲ್ಯಾನ್

Krishnaveni K
ಸೋಮವಾರ, 18 ನವೆಂಬರ್ 2024 (09:26 IST)
ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಇ ಖಾತಾ ಮಾಡಿಸಲು ಬಿಬಿಎಂಪಿ ಸಾಕಷ್ಟು ಆಯ್ಕೆಗಳನ್ನು ನೀಡಿದ್ದರೂ ತೊಂದರೆ ತಪ್ಪಿಲ್ಲ. ಇದೀಗ ಸಾರ್ವಜನಿಕರ ಅನುಕೂಲಕ್ಕೆ ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಜನ ತಮ್ಮ ಆಸ್ತಿಗಳಿಗೆ ಇ ಖಾತಾ ಮಾಡಿಸಲು ಆನ್ ಲೈನ್ ಮತ್ತು ಬಿಬಿಎಂಪಿ ಕಚೇರಿಯಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಬಿಬಿಎಂಪಿ ಕಚೇರಿಯಲ್ಲಿ ಜನ ಜಂಗುಳಿಯಿಂದ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಆನ್ ಲೈನ್ ನಲ್ಲಿ ಇ ಖಾತಾ ಮಾಡಿಸಲಾಗುತ್ತಿತ್ತು. ಆದರೆ ಸೈಬರ್ ಸೆಂಟರ್ ಗಳಲ್ಲಿ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹೀಗಾಗಿ ಬಿಬಿಎಂಪಿ ಬೆಂಗಳೂರು ಒನ್ ಸಿಬ್ಬಂದಿಗಳಿಗೆ ತರಬೇತಿ ನೀಡಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ನಿಗದಿತ ಶುಲ್ಕ ನೀಡಿ ಇ ಖಾತಾ ಮಾಡಿಸಲು ಅವಕಾಶ ನೀಡಿತ್ತು. ಅದರಂತೆ 45 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಈಗ ಬೆಂಗಳೂರು ಒನ್ ಕೇಂದ್ರದಲ್ಲೂ ಸಾಕಷ್ಟು ಜನ ಬರುತ್ತಿರುವುದರಿಂದ ಮತ್ತು ಜನರಲ್ಲಿರುವ ಗೊಂದಲಗಳಿಂದಾಗಿ ಇಲ್ಲೂ ಇ ಖಾತಾ ಮಾಡಿಸಲು ಕಷ್ಟವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ.

ಈ ಹಿನ್ನಲೆಯಲ್ಲಿ ಬಿಬಿಎಂಪಿ ಇ ಖಾತಾ ನೋಂದಾಯಿಸುವ ಹೊಣೆಯನ್ನು ಖಾಸಗಿ ಕಂಪನಿಗೆ ವಹಿಸಲು ಚಿಂತನೆ ನಡೆಸಿದೆ. ಪಾಸ್ ಪೋರ್ಟ್ ಕಚೇರಿ ಮಾದರಿಯಲ್ಲಿ ಇ ಖಾತಾವನ್ನು ಖಾಸಗಿ ಕಂಪನಿಯ ಹೊಣೆಗಾರಿಯಲ್ಲಿ ತಾತ್ಕಾಲಿಕ ಕೇಂದ್ರ ತೆರೆದು ಮಾಡಿಸಲು ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಯಿದ್ದು ಜನರ ಸಮಸ್ಯೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸೆ.1ರಂದು ಧರ್ಮಸ್ಥಳ ಚಲೋ, ಬೃಹತ್ ಸಮಾವೇಶ:ವಿಜಯೇಂದ್ರ

ಧರ್ಮಸ್ಥಳದ ವಿರುದ್ಧ ದೊಡ್ಡ ಷಡ್ಯಂತ್ರ: ಎಸ್.ಆರ್.ವಿಶ್ವನಾಥ್

ಟಿಪ್ಪು ಸುಲ್ತಾನ್ ದಸರಾ ಮಾಡಿದ್ರು: ತನ್ವೀರ್ ಸೇಠ್ ಹೇಳಿಕೆ

ಬಾನು ಮುಷ್ತಾಕ್ ಹಿಂದೂ ಸಂಸ್ಕೃತಿ ಒಪ್ಪಿ ಬರ್ತಾರಾ: ಬಿವೈ ವಿಜಯೇಂದ್ರ

ಧರ್ಮಸ್ಥಳ ಪ್ರಕರಣದಲ್ಲಿ ಎಸ್ಐಟಿಗೆ ಸೂಚಿಸಿದ ದೆಹಲಿ ನಾಯಕ ಯಾರು: ತೇಜಸ್ವಿ ಸೂರ್ಯ

ಮುಂದಿನ ಸುದ್ದಿ
Show comments