ಬೆಂಗಳೂರು ಒನ್ ಕೇಂದ್ರದಲ್ಲೂ ಇ ಖಾತಾ ಮಾಡಿಸಲು ಕಷ್ಟವೇ: ಬಿಬಿಎಂಪಿಯಿಂದ ಹೊಸ ಪ್ಲ್ಯಾನ್

Krishnaveni K
ಸೋಮವಾರ, 18 ನವೆಂಬರ್ 2024 (09:26 IST)
ಬೆಂಗಳೂರು: ಸಾರ್ವಜನಿಕರ ಅನುಕೂಲಕ್ಕಾಗಿ ಇ ಖಾತಾ ಮಾಡಿಸಲು ಬಿಬಿಎಂಪಿ ಸಾಕಷ್ಟು ಆಯ್ಕೆಗಳನ್ನು ನೀಡಿದ್ದರೂ ತೊಂದರೆ ತಪ್ಪಿಲ್ಲ. ಇದೀಗ ಸಾರ್ವಜನಿಕರ ಅನುಕೂಲಕ್ಕೆ ಮತ್ತೊಂದು ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾಗಿದೆ.

ಬೆಂಗಳೂರಿನಲ್ಲಿ ಜನ ತಮ್ಮ ಆಸ್ತಿಗಳಿಗೆ ಇ ಖಾತಾ ಮಾಡಿಸಲು ಆನ್ ಲೈನ್ ಮತ್ತು ಬಿಬಿಎಂಪಿ ಕಚೇರಿಯಲ್ಲಿ ಅವಕಾಶ ಮಾಡಿಕೊಡಲಾಗಿತ್ತು. ಆದರೆ ಬಿಬಿಎಂಪಿ ಕಚೇರಿಯಲ್ಲಿ ಜನ ಜಂಗುಳಿಯಿಂದ ಕಷ್ಟವಾಗುತ್ತಿದೆ ಎಂಬ ಕಾರಣಕ್ಕೆ ಆನ್ ಲೈನ್ ನಲ್ಲಿ ಇ ಖಾತಾ ಮಾಡಿಸಲಾಗುತ್ತಿತ್ತು. ಆದರೆ ಸೈಬರ್ ಸೆಂಟರ್ ಗಳಲ್ಲಿ ಅಧಿಕ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹೀಗಾಗಿ ಬಿಬಿಎಂಪಿ ಬೆಂಗಳೂರು ಒನ್ ಸಿಬ್ಬಂದಿಗಳಿಗೆ ತರಬೇತಿ ನೀಡಿ ಬೆಂಗಳೂರು ಒನ್ ಕೇಂದ್ರಗಳಲ್ಲಿ ನಿಗದಿತ ಶುಲ್ಕ ನೀಡಿ ಇ ಖಾತಾ ಮಾಡಿಸಲು ಅವಕಾಶ ನೀಡಿತ್ತು. ಅದರಂತೆ 45 ರೂ. ಶುಲ್ಕ ನಿಗದಿ ಮಾಡಲಾಗಿತ್ತು. ಆದರೆ ಈಗ ಬೆಂಗಳೂರು ಒನ್ ಕೇಂದ್ರದಲ್ಲೂ ಸಾಕಷ್ಟು ಜನ ಬರುತ್ತಿರುವುದರಿಂದ ಮತ್ತು ಜನರಲ್ಲಿರುವ ಗೊಂದಲಗಳಿಂದಾಗಿ ಇಲ್ಲೂ ಇ ಖಾತಾ ಮಾಡಿಸಲು ಕಷ್ಟವಾಗುತ್ತಿದೆ ಎಂಬ ಆರೋಪಗಳು ಕೇಳಿಬಂದಿದೆ.

ಈ ಹಿನ್ನಲೆಯಲ್ಲಿ ಬಿಬಿಎಂಪಿ ಇ ಖಾತಾ ನೋಂದಾಯಿಸುವ ಹೊಣೆಯನ್ನು ಖಾಸಗಿ ಕಂಪನಿಗೆ ವಹಿಸಲು ಚಿಂತನೆ ನಡೆಸಿದೆ. ಪಾಸ್ ಪೋರ್ಟ್ ಕಚೇರಿ ಮಾದರಿಯಲ್ಲಿ ಇ ಖಾತಾವನ್ನು ಖಾಸಗಿ ಕಂಪನಿಯ ಹೊಣೆಗಾರಿಯಲ್ಲಿ ತಾತ್ಕಾಲಿಕ ಕೇಂದ್ರ ತೆರೆದು ಮಾಡಿಸಲು ಅವಕಾಶ ನೀಡುವ ಬಗ್ಗೆ ಚಿಂತನೆ ನಡೆಸಿದೆ. ಸದ್ಯದಲ್ಲೇ ಈ ವ್ಯವಸ್ಥೆ ಜಾರಿಗೆ ಬರುವ ಸಾಧ್ಯತೆಯಿದ್ದು ಜನರ ಸಮಸ್ಯೆ ಸ್ವಲ್ಪ ಮಟ್ಟಿಗೆ ನಿವಾರಣೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ವಿಪರೀತ ಚಳಿ ನಡುವೆ ಈ ವಾರದ ಹವಾಮಾನ ವರದಿ ಗಮನಿಸಿ

ಸಿಡ್ನಿಯಲ್ಲಿ ನಡೆದ ಮಾರಣಾಂತಿಕ ದಾಳಿ ಬಗ್ಗೆ ಯುಕೆ ಪ್ರಧಾನಿ ಮೊದಲ ರಿಯಾಕ್ಷನ್

2 ವರ್ಷದ ಬಾಲಕಿ ರೇಪ್ ಎಸಗಿ, ಹತ್ಯೆ ಮಾಡಿದವನಿಗೆ ಕ್ಷಮದಾನಕ್ಕೆ ನಿರಾಕರಿಸಿದ ರಾಷ್ಟ್ರಪತಿ

ಆರ್‌ಎಸ್‌ಎಸ್‌, ಬಿಜೆಪಿ ಸಿದ್ಧಾಂತ ದೇಶವನ್ನು ನಾಶಪಡಿಸುತ್ತದೆ: ಮಲ್ಲಿಕಾರ್ಜುನ ಖರ್ಗೆ

ಬಿಜೆಪಿ ಸಾರ್ವಜನಿಕರ ನಂಬಿಕೆಯನ್ನು ಕಳೆದುಕೊಂಡಿದೆ: ಪ್ರಿಯಾಂಕಾ ಗಾಂಧಿ

ಮುಂದಿನ ಸುದ್ದಿ
Show comments