Webdunia - Bharat's app for daily news and videos

Install App

ಯಡಿಯೂರಪ್ಪರನ್ನು ಹಾಡಿ ಹೊಗಳಿದ ಬಿ.ಸಿ.ಪಾಟೀಲ

Webdunia
ಬುಧವಾರ, 27 ಮೇ 2020 (22:41 IST)
ಸಿಎಂ ಬಿ.ಎಸ್.ಯಡಿಯೂರಪ್ಪನವರನ್ನು ಸಚಿವ ಬಿ.ಸಿ.ಪಾಟೀಲ್ ಹಾಡಿ ಹೊಗಳಿದ್ದಾರೆ.

ಲಾಕ್ ಡೌನ್ ನಂಥ ಕಷ್ಟ ಕಾಲದಲ್ಲಿ ಮೆಕ್ಕೆಜೋಳ ಬೆಳೆದ 5 ಲಕ್ಷ ರೈತರಿಗೆ  ತಲಾ 5 ಸಾವಿರ ರೂಪಾಯಿ ನೀಡುವ ಕೆಲಸವನ್ನು ದೇಶದಲ್ಲಿ ಮೊದಲ ಬಾರಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರು ಮಾಡಿದ್ದಾರೆ.  5 ನೂರು ಕೋಟಿ ರೂಪಾಯಿ ನೀಡುವ ಕೆಲಸವನ್ನು  ಮಾಡಿರುವುದು ಸಾಮಾನ್ಯವಲ್ಲ. ಕೃಷಿ ಇಲಾಖೆಯಿಂದ ಗೈಡ್ ಲೈನ್ ಜಾರಿಗೆ ಮಾಡಿದ್ದು,  ಕಳೆದ  ವರ್ಷ ಮೆಕ್ಕೆ ಜೋಳ ಬೆಳೆದ  ಪ್ರತಿಯೊಬ್ಬ ರೈತನಿಗೆ 5 ಸಾವಿರ ರೂಪಾಯಿ ರೈತನ ಬ್ಯಾಂಕ್ ಖಾತೆಗೆ ನೇರವಾಗಿ ಜಮಾ ಮಾಡುವ ಕೆಲಸ ಶೀಘ್ರದಲ್ಲಿ ನಡೆಯಲಿದೆ ಎಂದು ಕೃಷಿ ಸಚಿವ ಮತ್ತು ಕೊಪ್ಪಳ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ. ಪಾಟೀಲ ಹೇಳಿದ್ದಾರೆ.

ಕಳೆದ ವರ್ಷ ಬೆಳೆ ಸಮೀಕ್ಷೆ ಮಾಡಲಾಗಿದೆ. ಆ ಆಧಾರದ ಮೇಲೆ ರೈತರಿಗೆ ಮೆಕ್ಕೆ ಜೋಳದ ಪರಿಹಾರ ನೀಡಲಾಗುತ್ತದೆ. ರೈತರು  ಆತಂಕ ಪಡುವ ಅವಶ್ಯಕತೆ ಇಲ್ಲ ಎಂದು ಸಚಿವರು ಹೇಳಿದ್ದಾರೆ.

ಕೊಪ್ಪಳ ಜಿಲ್ಲೆಯಲ್ಲಿ ಬೇಸಿಗೆಯ ಬೆಳೆ ಭತ್ತ ಬೆಳೆದಿರುವುದು ಅದು ಸೋನಾ ಮಸಾರಿ ಭತ್ತ. ಮಾರುಕಟ್ಟೆಯಲ್ಲಿ ಅದಕ್ಕೆ ಉತ್ತಮ ಬೆಲೆ ಇದೆ. ಸರ್ಕಾರ ತೆರೆದಿರುವ ಖರೀದಿ ಕೇಂದ್ರದಲ್ಲಿ ಈ ಸೋನಾ ಮಸಾರಿ ಭತ್ತವನ್ನು ರೈತರು ಮಾರಾಟ ಮಾಡುವುದಿಲ್ಲ.  ರೈತರು ನೀಡಿದರೆ ಖಂಡಿತಾ ಸರ್ಕಾರ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿ ಮಾಡುತ್ತದೆ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

National Herald case ನಲ್ಲಿ ಸುಮ್ ಸುಮ್ನೇ ಸೋನಿಯಾ ಗಾಂಧಿ, ರಾಹುಲ್ ಗಾಂಧಿಯವರಿಗೆ ತೊಂದರೆ ಕೊಡ್ತಿದೆ ಕೇಂದ್ರ: ಮಲ್ಲಿಕಾರ್ಜುನ ಖರ್ಗೆ

Waqf Bill:ವಕ್ಫ್ ಮಂಡಳಿಯಲ್ಲಿ ಮುಸ್ಲಿಮೇತರರಿರುವಂತೆ ಹಿಂದೂ ಟ್ರಸ್ಟ್ ಗಳಲ್ಲಿ ಮುಸ್ಲಿಮರಿಗೆ ಅವಕಾಶ ಕೊಡ್ತೀರಾ: ಸುಪ್ರೀಂಕೋರ್ಟ್

Bengaluralli ಏನಾಗುತ್ತಿದೆ, ಮಹಿಳೆಗೆ ಮರ್ಮಾಂಗ ತೋರಿಸಿ ಯುವಕನಿಂದ ಅಸಭ್ಯ ವರ್ತನೆ

ಗಣತಿ ಸುನಾಮಿಯಲ್ಲಿ ಸಿಎಂ ಸಿದ್ದರಾಮಯ್ಯ ಕೊಚ್ಚಿ ಹೋಗುತ್ತಾರೆ: ಕುಮಾರಸ್ವಾಮಿ

ಮುಂದಿನ ಸುದ್ದಿ
Show comments