Select Your Language

Notifications

webdunia
webdunia
webdunia
webdunia

ಬಿಡಿಎ ಆಯುಕ್ತ ರಾಜಕುಮಾರ್ ಖತ್ರಿ ಎತ್ತಂಗಡಿ

ಬಿಡಿಎ ಆಯುಕ್ತ ರಾಜಕುಮಾರ್ ಖತ್ರಿ ಎತ್ತಂಗಡಿ
ಬೆಂಗಳೂರು , ಗುರುವಾರ, 9 ಮಾರ್ಚ್ 2017 (20:23 IST)
ಬಿಡಿಎ ಆಯುಕ್ತರಾಗಿದ್ದ ರಾಜಕುಮಾರ್ ಖತ್ರಿಯವರನ್ನು ಎತ್ತಂಗಡಿ ಮಾಡಿ ಕ್ರೀಡಾ ಮತ್ತು ಯುವಜನ ಸೇವಾ ಇಲಾಖೆಗೆ ವರ್ಗಾಯಿಸಲಾಗಿದೆ.
 
ಬೆಂಗಳೂರು ಶಾಸಕರು ಬಿಡಿಎ ಆಯುಕ್ತ ರಾಜಕುಮಾರ್ ಖತ್ರಿ ಕೇವಲ ಎಸಿ ರೂಮ್ ಅಧಿಕಾರಿಯಾಗಿದ್ದು, ಜನತೆಯ ಸಮಸ್ಯೆಗಳಿಗೆ ಸ್ಪಂದಿಸುತ್ತಿಲ್ಲ. ಅವರನ್ನು ಕೂಡಲೇ ವರ್ಗಾವಣೆ ಮಾಡಿ ಎಂದು ಸಿಎಂ ಸಿದ್ದರಾಮಯ್ಯ ಮೇಲೆ ಒತ್ತಡ ಹೇರಿದ್ದರು ಎನ್ನಲಾಗಿದೆ.
 
ಬಿಡಿಎ ನೂತನ ಆಯುಕ್ತರಾಗಿ ಜಲಸಂಪನ್ಮೂಲ ಇಲಾಖೆಯ ಉನ್ನತ ಅಧಿಕಾರಿಯಾದ ರಾಕೇಶ್ ಸಿಂಗ್ ಅವರನ್ನು ನೇಮಕ ಮಾಡಿ ಸಿಎಂ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

Share this Story:

Follow Webdunia kannada

ಮುಂದಿನ ಸುದ್ದಿ

ಉತ್ತರಪ್ರದೇಶದಲ್ಲಿ ಅಖಿಲೇಶ್, ಮಾಯಾವತಿ ಸರಕಾರ?