ಬಿ. ಡಿ. ಎ. ಅಧಿಕಾರಿಗಳಿಗೆ ನಡುಕ ಶುರು

Webdunia
ಸೋಮವಾರ, 6 ಡಿಸೆಂಬರ್ 2021 (16:05 IST)
ಬ್ರಹ್ಮಾಂಡ ಭ್ರಷ್ಟಾಚಾರದ ಕೂಪವಾಗಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ(ಬಿಡಿಎ)ದ ಕಚೇರಿಯಲ್ಲಿ ಸುಮಾರು 10 ವರ್ಷಗಳಿಂದ ನಡೆದಿರುವ ಹಗರಣಗಳ ಕುರಿತು ಸಿಸಿಬಿ ಪೊಲೀಸರು ದಾಖಲಾತಿಗಳ ಪರಿಶೀಲನೆಯಲ್ಲಿ ತೊಡಗಿದ್ದು, ಹಿರಿಯ ಅಧಿಕಾರಿಗಳ ವಿರುದ್ಧ ವಿಚಾರಣೆಗೆ ಅನುಮತಿ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ.ಬಿಡಿಎ ಭೂಸ್ವಾೀಧಿನ ಪರಿಹಾರ ಪಾವತಿ ವೇಳೆ ಸುಳ್ಳು ಮಾಹಿತಿ ನೀಡಿ ಪರಿಹಾರವನ್ನು ಕಬಳಿಸಿರುವುದು ಬೆಂಗಳೂರು ದಕ್ಷಿಣ ತಾಲ್ಲೂಕಿನ ಉತ್ತರಹಳ್ಳಿ ಹೋಬಳಿ, ಭಾರತ್ ಎಚ್‍ಬಿಸಿಎಸ್ ಲೇಔಟ್‍ನ ನಾಗರಿಕ ನಿವೇಶನಗಳನ್ನು ಷರತ್ತು ಉಲ್ಲಂಘಿಸಿ ಹಂಚಿಕೆ ಮಾಡಿದ್ದು, ಎಚ್‍ಎಸ್‍ಆರ್ ಲೇಔಟ್ 3ನೇ ಸೆಕ್ಟರ್‍ನಲ್ಲಿ ಅನುಮೋದಿತ ನಕ್ಷೆ ರೀತ್ಯ ಕಟ್ಟಡ ನಿರ್ಮಿಸದೆ ನಿಯಮ ಉಲ್ಲಂಘಿಸಿದರೂ ಕ್ರಮ ಕೈಗೊಳ್ಳದೆ ಇರುವುದನ್ನು ಪತ್ತೆಹಚ್ಚಲಾಗಿತ್ತು.
 
ಕಡತಗಳ ಪರಿಶೀಲನೆಯಿಂದ ನಿವೇಶನದಾರರಿಗೆ ಹಂಚಿಕೆಯಾದ ಸ್ಥ¼ ಹೊರತುಪಡಿಸಿ ಬೇರೆ ಕಡೆ ಜಾಗ ನೀಡಿರುವುದು, ಹಳೆಯ ಬಡಾವಣೆಗಳಲ್ಲಿ ನಿವೇಶನಗಳನ್ನು ಯಾರಿಗೂ ಹಂಚಿಕೆ ಮಾಡದೆ ಖಾಲಿಬಿಟ್ಟು ಖಾಸಗಿ ವ್ಯಕ್ತಿಗಳು ಶೆಡ್ ನಿರ್ಮಿಸಲು ಅವಕಾಶ ನೀಡಿರುವುದು, ನಕಲಿ ದಾಖಲೆಗಳ ಮೂಲಕ ನಿವೇಶನಗಳ ಪರಭಾರೆ, ಕೆಂಪೇಗೌಡ ಬಡಾವಣೆಯಲ್ಲಿ ನೈಜ ಭೂ ಮಾಲೀಕರಿಗೆ ಪರಿಹಾರ ನೀಡದೇ ಮೂರನೇ ವ್ಯಕ್ತಿಗೆ ಹಣ ನೀಡಿರುವುದು ಸೇರಿದಂತೆ ಹಲವಾರು ಆರೋಪಗಳನ್ನು ದಾಳಿಯ ವೇಳೆ ಪತ್ತೆಹಚ್ಚಲಾಗಿತ್ತು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಿಬಿಎ ಚುನಾವಣೆಗೆ ಸುಪ್ರೀಂ ಮತ್ತೊಂದು ಗಡುವು: ಹೊಸ ವರ್ಷಕ್ಕೆ ನೂತನ ಆಡಳಿತ ಅಸ್ತಿತ್ವಕ್ಕೆ

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಹೈಕಮಾಂಡ್ ಹೊಟ್ಟೆ ತುಂಬಿಸಲು ಬಿಡದಿ ಟೌನ್ ಶಿಪ್ ಯೋಜನೆ ಮಾಡ್ತಿದ್ದಾರೆ: ವಿಜಯೇಂದ್ರ

ಕಂಪ್ಯೂಟರ್ ಗಿಂತ ಫಾಸ್ಟ್: ಈತ ಟಿಕೆಟ್ ಬುಕಿಂಗ್ ಮಾಡುವ ವೇಗಕ್ಕೆ ನೀವು ಬೆರಗಾಗುತ್ತೀರಿ Video

ಸ್ಕೂಟಿ ಬಿಡುತ್ತಿದ್ದ ಯುವತಿ ಮೇಲೇ ಹರಿಯಿತು ಬಸ್: ಸ್ಥಳದಲ್ಲೇ ಹಾರಿ ಹೋಯ್ತು ಜೀವ: ಭಯಾನಕ Video

ಮುಂದಿನ ಸುದ್ದಿ
Show comments