Webdunia - Bharat's app for daily news and videos

Install App

ಬಿಡಿಎ ಅಧ್ಯಕ್ಷರ ಕಾರ್ಯದರ್ಶಿಗೆ 3 ಲಕ್ಷ ಸಂಬಳ ಬೇಕಾ? ಎಎಪಿ ಪ್ರಶ್ನೆ

Webdunia
ಮಂಗಳವಾರ, 17 ಮೇ 2022 (14:31 IST)
ನಿಯಮಗಳನ್ನು ಗಾಳಿಗೆ ತೂರಿ ಬಿಡಿಎ ಅಧ್ಯಕ್ಷರ ಆಪ್ತ ಸಹಾಯಕ ಹುದ್ದೆಗೆ ನೇಮಕಾತಿ ಮಾಡಿದ್ದಲ್ಲದೇ, ಮೂರು ಲಕ್ಷ ರೂಪಾಯಿಗೂ ಅಧಿಕ ವೇತನ ನೀಡುತ್ತಿರುವುದಕ್ಕೆ ಆಮ್‌ ಆದ್ಮಿ ಪಾರ್ಟಿ ಮುಖಂಡ ಹಾಗೂ ಮಾಜಿ ಕೆಎಎಸ್‌ ಅಧಿಕಾರಿ ಕೆ.ಮಥಾಯಿ ವಿರೋಧ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕೆ.ಮಥಾಯಿ, “ಬಿಡಿಎ ಹಾಗೂ ಕರ್ನಾಟಕ ಸರ್ಕಾರದ ನಿಯಮಾವಳಿಯನ್ನು ಉಲಂಘಿಸಿ ಸೋಮಶೇಖರ್‌ ಎಂಬುವವರನ್ನು ಎಸ್‌.ಆರ್.ವಿಶ್ವನಾಥ್‌ರವರ ಆಪ್ತ ಸಹಾಯಕ ಹುದ್ದೆಗೆ ನೇಮಕ ಮಾಡಲಾಗಿದೆ. ಕೆಎಎಸ್‌ ಜೂನಿಯರ್‌ ಸ್ಕೇಲ್‌ ಹುದ್ದೆಗೆ ಕೆಎಎಸ್‌ ಅಲ್ಲದವರನ್ನು ನೇಮಿಸಲಾಗಿದೆ. ಈ ಹುದ್ದೆಗೆ ತಿಂಗಳಿಗೆ 50 ಸಾವಿರದಿಂದ 60 ಸಾವಿರ ರೂಪಾಯಿ ವೇತನವಿದ್ದರೂ ಬರೋಬ್ಬರಿ 3,12,002 ರೂಪಾಯಿ ಸಂಬಳವನ್ನು ಸೋಮಶೇಖರ್‌ರವರಿಗೆ ನೀಡಲಾಗುತ್ತಿದೆ. ಬಿಡಿಎ ಕಮಿಷನರ್‌ ಹಾಗೂ ಆಯುಕ್ತರಿಗೇ ಇಷ್ಟು ಸಂಬಳವಿಲ್ಲ” ಎಂದು ಹೇಳಿದರು.
ಬಿಜೆಪಿ ಶಾಸಕರೂ ಆಗಿರುವ ಬಿಡಿಎ ಅಧ್ಯಕ್ಷ ಎಸ್‌.ಆರ್.ವಿಶ್ವನಾಥ್‌, ಬಿಡಿಎ ಆಯುಕ್ತರು ಹಾಗೂ ನಗರಾಭಿವೃದ್ಧಿ ಇಲಾಖೆಯ ಹೆಚ್ಚುವರಿ ಕಾರ್ಯದರ್ಶಿ ನಿರ್ದೇಶನದಂತೆ ಸೋಮಶೇಖರ್‌ ನೇಮಕವಾಗಿದೆ. ಸಿಎಂ ಬಸವರಾಜ್‌ ಬೊಮ್ಮಾಯಿ ಹಾಗೂ ಸರ್ಕಾರದ ಮುಖ್ಯ ಕಾರ್ಯದರ್ಶಿ ಅಡಿಯಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆ (ಡಿಪಿಎಆರ್‌) ಕಾನೂನುಬಾಹಿರ ನೇಮಕಾತಿಗೆ ಅನುಮೋದನೆ ನೀಡಿದೆ. ಹಲವು ವರ್ಷಗಳಿಂದ ನಷ್ಟದಲ್ಲಿರುವ ಬಿಡಿಎಯು ಆಪ್ತ ಸಹಾಯಕ ಹುದ್ದೆಗೆ ದುಬಾರಿ ವೇತನ ನೀಡುತ್ತಿರುವುದರ ಹಿಂದಿನ ಉದ್ದೇಶವೇನು?” ಎಂದು ಕೆ.ಮಥಾಯಿ ಪ್ರಶ್ನಿಸಿದರು.
ಶೀಘ್ರವೇ ಸೋಮಶೇಖರ್‌ರವರನ್ನು ಅಮಾನತು ಮಾಡಿ, ಆ ಸ್ಥಾನಕ್ಕೆ ಸೂಕ್ತ ವ್ಯಕ್ತಿಯನ್ನು ನೇಮಕ ಮಾಡಬೇಕು. ನಿಯಮಾವಳಿ ಅನ್ವಯ ವೇತನ ನೀಡಬೇಕು. ದುಬಾರಿ ವೇತನ ನೀಡಿದ್ದರಿಂದ ಈವರೆಗೆ ಬಿಡಿಎಗೆ ಆದ ನಷ್ಟವನ್ನು ಸಂಬಂಧಪಟ್ಟ ಎಲ್ಲ ಅಧಿಕಾರಿಗಳ ಸಂಬಳದಿಂದ ಭರಿಸಿಕೊಳ್ಳಬೇಕು. ಇಲ್ಲದಿದ್ದರೆ ವಿಧಾನಸೌಧದ ಎದುರು ಆಮ್‌ ಆದ್ಮಿ ಪಾರ್ಟಿಯು ಧರಣಿ ನಡೆಸಲಿದೆ ಎಂದು ಕೆ.ಮಥಾಯಿ ಎಚ್ಚರಿಕೆ ನೀಡಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್‌- ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಇರಾನ್‌ನಲ್ಲಿ ಭಾರತೀಯರ ಸುರಕ್ಷತೆಗೆ ಸಹಾಯವಾಣಿ ಬಿಡುಗಡೆ

ತಿರುವನಂತಪುರಂನಲ್ಲಿ ತುರ್ತು ಭೂಸ್ಪರ್ಶವಾದ ಬ್ರಿಟಿಷ್ ಫೈಟರ್ ಜೆಟ್‌

ದೇಶದಲ್ಲಿ ಇದೆಂಥಾ ದುರ್ಘಟನೆಗಳು: ಇಂದ್ರಾಯಣಿ ನದಿ ಸೇತುವೆ ಮುರಿದು ಹಲವು ಪ್ರವಾಸಿಗರು ನಾಪತ್ತೆ

Karnataka Weather: ಬೆಂಗಳೂರಿಗರಿಗೂ ಎಚ್ಚರ, ರಾಜ್ಯದ ಹವಾಮಾನ ಪರಿಸ್ಥಿತಿ ಹೇಗಿದೆ ನೋಡಿ

Vijay Rupani: ಕೊನೆಗೂ ವಿಜಯ್ ರೂಪಾನಿ ಮೃತದೇಹದ ಗುರುತು ಪತ್ತೆ

ಮುಂದಿನ ಸುದ್ದಿ
Show comments