Webdunia - Bharat's app for daily news and videos

Install App

ಬಿಡಿಎ ಅಧಿಕಾರಿಗಳಿಂದ ಮನೆಗಳ ತೆರವು ಕಾರ್ಯಾಚರಣೆ

Webdunia
ಶನಿವಾರ, 7 ಆಗಸ್ಟ್ 2021 (20:53 IST)
ಶನಿವಾರ ಬೆಳಗ್ಗೆ ಧೀಡಿರ್ ಕಾರ್ಯಾಚರಣೆ ಆರಂಭಿಸಿದ ಬಿಡಿಎ ಅಧಿಕಾರಿಗಳು ಮೀಸಲು ಪೊಲೀಸ್  ಪಡೆಯ ಭದ್ರತೆಯಲ್ಲಿ ಮನೆಗಳನ್ನು ತೆರವುಗೊಳಿಸುತ್ತಿರುವ ಮನಕುಲುಕುವಂಥಹ  ದೃಶ್ಯ ಕಂಡು ಬಂದಿದ್ದು ಬೆಂಗಳೂರು ಹೊರವಲಯ ಯಲಹಂಕ ವಿಧಾನಸಭಾ ಕ್ಷೇತ್ರದ ಅಟ್ಟೂರು ಹಾಗೂ ಬೆಟ್ಟಹಳ್ಳಿ ಗ್ರಾಮದಲ್ಲಿ ಮನೆಗಳನ್ನುಹೊಡೆಯುತ್ತಿದ್ದಾರೆ. ಮನೆಗಳಲ್ಲಿದ್ದ ವಸ್ತುಗಳನ್ನು ಕೂಡ ಹೊರಗೆ ಸಾಗಿಸಲು ಬಿಡಲಿಲ್ಲ  ತೆರವು ಕಾರ್ಯಾಚರಣೆ ಮುಂದುವರೆಸಿದರು. ಮನೆಯಲ್ಲಿರುವ ವಸ್ತುಗಳನ್ನು ಹೊರಗೆ ಸಾಗಿಸುವುದಕ್ಕೆ ಅವಕಾಶ ಕೊಡಿ ಎಂದು ಅಧಿಕಾರಿಗಳ ಹತ್ತಿರ ಅಂಗಲಾಚಿದರೂ ಅವರು ಕಿವಿಗೆ ಹಾಕಿಕೊಳ್ಳಲಿಲ್ಲ . ಸುಪ್ರೀಂಕೋರ್ಟ್ ಆದೇಶ ಇರುವುದರಿಂದ ನಾವು ಅಸಹಾಯಕರು ಎಂದು ಅಧಿಕಾರಿಗಳು ಕಾರ್ಯಾಚರಣೆ ಮುಂದುವರೆಸಿದರು. ಸಾಕಷ್ಟು ಜನರು ಸಾಲ ಸೋಲ ಮಾಡಿ ಮನೆಯನ್ನು ಕಟ್ಟಿದ್ದೇವೆ ಏಕಾಏಕಿ ಅಧಿಕಾರಿಗಳು ಬಂದು ಮನೆಗಳನ್ನು ತೆರವುಗೊಳಿಸಿದ್ದಾರೆ ಎಂದು ಸ್ಥಳೀಯರು ಆಕ್ರೋಶವನ್ನು ವ್ಯಕ್ತಪಡಿಸಿದರು .ಗ್ರಾಮದ ತುಂಬಾ ಪೊಲೀಸ್ ನವರು ಬಿಡು ಬಿಟ್ಟಿದ್ದಾರೆ ಮನೆ ಹೊಡೆಯಲು ಬಂದ ಜೆಸಿಬಿ ಮೇಲೆ ನಿಂತು ಸ್ಥಳೀಯರು ಜೆಸಿಬಿಯನ್ನು ತಡೆದರು ಅಷ್ಟೇ ಅಲ್ಲದೆ ಅಧಿಕಾರಿಗಳ ವಿರುದ್ಧ ಹಾಗೂ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ವಿರುದ್ಧ ದಿಕ್ಕಾರವನ್ನು ಕೂಡ ಕೂಗಿದರು .ಈ ಹಿಂದೆ ಯಲಹಂಕ ಶಾಸಕ ಎಸ್.ಆರ್.ವಿಶ್ವನಾಥ್ ಬಿಡಿಎ ಅಧಿಕಾರಿಗಳ ವಿರುದ್ಧ ದಿಕ್ಕಾರ ಕೂಗಿ ಮನೆಗಳನ್ನು ಹೊಡೆಯುವ ಕಾರ್ಯವನ್ನು ಪಾದಯಾತ್ರೆ ಮಾಡುವುದರ ಮೂಲಕ ಅಧಿಕಾರಿಗಳಿಗೆ ಎಚ್ಚರಿಸಿ ತಡೆಹಿಡಿದಿದ್ದರು ಆದರೆ ಈಗ ಬಿಡಿಎ ಅಧ್ಯಕ್ಷ ಎಸ್. ಆರ್ .ವಿಶ್ವನಾಥ್ ಹಾಗಿದ್ದರೂ  ಇದರ ವಿರುದ್ಧ ಯಾವುದೇ ಮಾತುಗಳನ್ನು ಕೂಡ ಆಡುತಾ ಇಲ್ಲ ಎಂದು ಸ್ಥಳೀಯರು ಎಸ್.ಆರ್.ವಿಶ್ವನಾಥ್ ವಿರುದ್ಧ ಆಕ್ರೋಶವನ್ನು ಕೂಡ ವ್ಯಕ್ತಪಡಿಸಿದರು .ಒಟ್ಟಿನಲ್ಲಿ ಮನೆ ಕಳೆದುಕೊಂಡವರ ಕಥೆ ಹೇಳತೀರಲಾಗಿದೆ ಅಲ್ಲಿನ ಕೆಲವು ಸ್ಥಳಿಯಯರು ನಮಗೆ ಯಾವುದೇ ಯಾವುದೇ ರೀತಿಯ ನೋಟಿಸ್ ಅನ್ನು ಕೂಡ ನೀಡಿಲ್ಲ  ಬಂದು ಮನೆಗಳನ್ನು ಹೊಡಿದಿದ್ದಾರೆ ಎಂದು ತಿಳಿಸಿದರು .ದಲಿತರ ಮನೆಗಳನ್ನು ಕೂಡ ಹೊಡೆಯಲಾಗಿದೆ .ಮನೆಯಲ್ಲಿದ್ದ ವಸ್ತುಗಳು ಬೀದಿಯಲ್ಲಿ ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ  ಈ ಎಲ್ಲಾ ಘಟನೆ ನಡೆದಿರುವುದು ಯಲಹಂಕ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ .

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಹಿಂದೂಗಳಿಗೆ ಯಾತಕ್ಕೋಸ್ಕರ ಅಪಮಾನ ಮಾಡುತ್ತಿದ್ದೀರಿ ಸಿದ್ದರಾಮಯ್ಯನೋರೇ: ವಿಜಯೇಂದ್ರ

DK Shivakumar: ಕೇಂದ್ರ ಚಿನ್ನದ ಬೆಲೆ ಏರಿಕೆ ಮಾಡಿ ಮಹಿಳೆಯರು ಮಾಂಗಲ್ಯ ಕಟ್ಟಿಕೊಳ್ಳಲಾಗದ ಪರಿಸ್ಥಿತಿಯಾಗಿದೆ: ಡಿಕೆ ಶಿವಕುಮಾರ್

ಸಿಎಂ ಕುರ್ಚಿ ಗುದ್ದಾಟದ ನಡುವೆಯೂ ಗುಟ್ಟಾಗಿ ಮಾತುಕತೆ ನಡೆಸಿದ ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್‌

ಮುಂದಿನ ಸುದ್ದಿ
Show comments