Webdunia - Bharat's app for daily news and videos

Install App

ನಗರದಲ್ಲಿ ಒಟ್ಟು 40.57 ಕೋಟಿ ರೂ ಮೌಲ್ಯದ ಆಸ್ತಿ ಬಿಡಿಎ ವಶಕ್ಕೆ

Webdunia
ಗುರುವಾರ, 16 ಸೆಪ್ಟಂಬರ್ 2021 (21:13 IST)
ಬೆಂಗಳೂರು: ಭೂಕಬಳಿಕೆದಾರರ ವಿರುದ್ಧದ ಕಾರ್ಯಾಚರಣೆಯನ್ನು ಮುಂದುವರಿಸಿರುವ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ ಗುರುವಾರ ಎರಡು ಸ್ಥಳಗಳಲ್ಲಿ ಒಟ್ಟು 40.57 ಕೋಟಿ ರೂಪಾಯಿ ಮೌಲ್ಯದ ತನ್ನ ಆಸ್ತಿಯನ್ನು ಮರುವಶಕ್ಕೆ ಪಡೆದುಕೊಂಡಿದೆ.
 
ಬೆಂಗಳೂರು ಉತ್ತರ ತಾಲೂಕಿನ ಯಶವಂತಪುರ ಹೋಬಳಿಯ ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 156/2 ರಲ್ಲಿನ 1 ಎಕರೆ 12 ಗುಂಟೆ ಮತ್ತು ಸರ್ವೆ ಸಂಖ್ಯೆ 156/3 ರಲ್ಲಿನ 1 ಎಕರೆ 28 ಗುಂಟೆ ಪ್ರದೇಶವನ್ನು ಬಿಡಿಎ ಬಡಾವಣೆ ನಿರ್ಮಾಣಕ್ಕೆಂದು ಸ್ವಾಧೀನ ಮಾಡಿಕೊಂಡಿತ್ತು. ಈ ಬಗ್ಗೆ ಭೂಮಾಲೀಕರು ನ್ಯಾಯಾಲಯದಲ್ಲಿ ಪ್ರಕರಣ ದಾಖಲಿಸಿದ್ದರು. ವಿಚಾರಣೆ ನಡೆಸಿದ್ದ ನ್ಯಾಯಾಲಯವು ಬಿಡಿಎ ಪರವಾಗಿ ತೀರ್ಪು ನೀಡಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸ್ ವರಿಷ್ಠಾಧಿಕಾರಿ ಭಾಸ್ಕರ್ ಮತ್ತು ಕಾರ್ಯಕಾರಿ ಎಂಜಿನಿಯರ್ ಸುಷ್ಮಾ ನೇತೃತ್ವದಲ್ಲಿ ಬಿಡಿಎ ಅಧಿಕಾರಿಗಳು ಗುರುವಾರ ಜಾಗದಲ್ಲಿ ನಿರ್ಮಾಣವಾಗಿದ್ದ ತಾತ್ಕಾಲಿಕ ಶೆಡ್ ಗಳನ್ನು ತೆರವುಗೊಳಿಸಿ ಜಾಗವನ್ನು ಬಿಡಿಎ ವಶಕ್ಕೆ ಪಡೆದುಕೊಂಡರು. ಈ ಭೂಮಿಯ ಪ್ರಸ್ತುತ ಮಾರುಕಟ್ಟೆ ದರ 34.52 ಕೋಟಿ ರೂಪಾಯಿಗಳಾಗಿದೆ ಎಂದೂ ತಿಳಿಸಿದರು.
 
ಗುರುವಾರ ನೆಡೆದ ಮತ್ತೊಂದು ಕಾರ್ಯಾಚರಣೆ: 
 
ಮತ್ತೊಂದು ಕಾರ್ಯಾಚರಣೆಯಲ್ಲಿ ಸರ್ ಎಂ.ವಿಶ್ವೇಶ್ವರಯ್ಯ ಬಡಾವಣೆಯ 6 ನೇ ಬ್ಲಾಕ್ ನಲ್ಲಿ ನಿವೇಶನ ರಚನೆಗಾಗಿ ಭೂ ಸ್ವಾಧೀನಪಡಿಸಿಕೊಳ್ಳಲಾಗಿತ್ತು. ಆದರೆ, ಉಲ್ಲಾಳು ಗ್ರಾಮದ ಸರ್ವೆ ಸಂಖ್ಯೆ 202 ರಲ್ಲಿ ಸ್ವಾಧೀನಪಡಿಸಿಕೊಳ್ಳಲಾಗಿದ್ದ 30x40 ಅಳತೆಯ 7 ನಿವೇಶನಗಳಲ್ಲಿ ಅಕ್ರಮವಾಗಿ ತಾತ್ಕಾಲಿಕ ಶೆಡ್ ಗಳನ್ನು ನಿರ್ಮಾಣ ಮಾಡಲಾಗಿತ್ತು. ನ್ಯಾಯಾಲಯದ ಆದೇಶದಂತೆ ಈ ಶೆಡ್ ಗಳನ್ನು ತೆರವುಗೊಳಿಸಿದ ಅಧಿಕಾರಿಗಳು ಸ್ವತ್ತನ್ನು ಬಿಡಿಎ ವಶಕ್ಕೆ ಪಡೆದುಕೊಂಡರು. ಈ ನಿವೇಶನಗಳ ಪ್ರಸ್ತುತ ಮಾರುಕಟ್ಟೆ ಮೌಲ್ಯ 6.05 ಕೋಟಿ ರೂಪಾಯಿಗಳು ಎಂದೂ ಹೇಳಿದರು.
 
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಬಿಡಿಎ ಅಧ್ಯಕ್ಷ ಎಸ್.ಆರ್.ವಿಶ್ವನಾಥ್  ವಿವಿಧ ಬಡಾವಣೆಗಳಲ್ಲಿ ಬಿಡಿಎಗೆ ಅಪಾರ ಮೌಲ್ಯದ ಸೇರಿದ ಸ್ವತ್ತುಗಳು ಒತ್ತುವರಿಯಾಗಿವೆ. ಗಣೇಶ ಹಬ್ಬಕ್ಕೆ ಮುನ್ನ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಆರಂಭಿಸಿದ್ದೇವೆ. ಈ ಕಾರ್ಯಾಚರಣೆ ನಿರಂತರವಾಗಿ ನಡೆಯಲಿದ್ದು, ಎಷ್ಟೇ ಪ್ರಭಾವಶಾಲಿಗಳಾಗಿದ್ದರೂ ಅವರ ವಶದಲ್ಲಿರುವ ಬಿಡಿಎ ಆಸ್ತಿಯನ್ನು ವಶಪಡಿಸಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
 
ಈ ಕಾರ್ಯಾಚರಣೆಯಲ್ಲಿ ಡಿವೈಎಸ್ ಪಿ ಬಾಲಕೃಷ್ಣ, ಪೊಲೀಸ್ ಇನ್ಸ್ ಪೆಕ್ಟರ್ ಗಳಾದ ಶ್ರೀನಿವಾಸ್ ಮತ್ತು ಲಕ್ಷ್ಮಯ್ಯ, ಎಂಜಿನಿಯರ್ ಪ್ರಕಾಶ್ ಇತರ  ಪಾಲ್ಗೊಂಡಿದ್ದರು.
frad

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಕೈ ಹೈಕಮಾಂಡ್‌ ಶಾಕ್‌: ಕೆಪಿಸಿಸಿ ಅಧ್ಯಕ್ಷ ಸ್ಥಾನದ ಮೇಲೆ ಕಣ್ಣಿಟ್ಟವರಿಗೂ ನಿರಾಸೆ

ಶಾಸಕ ಗಾಲಿ ಜನಾರ್ದನ ರೆಡ್ಡಿಗೆ ಬಿಗ್‌ ರಿಲೀಫ್‌: ಜಾಮೀನು ನೀಡಿದ ತೆಲಂಗಾಣ ಹೈಕೋರ್ಟ್‌ ಹೇಳಿದ್ದೇನು ಗೊತ್ತಾ

Mallikarjun Kharge: ಕಾಲ್ತುಳಿತ ಆಕಸ್ಮಿಕವಾಗಿ ನಡೆದಿದ್ದು ನಮ್ಮವ್ರು ಕ್ಷಮೇನೂ ಕೇಳವ್ರೆ: ಮಲ

Karnataka caste census: 165 ಕೋಟಿ ರೂ. ಖರ್ಚು ಮಾಡಿದ್ದಕ್ಕೆ ಯಾರು ಹೊಣೆ: ವಿ.ಸುನೀಲ್ ಕುಮಾರ್

Arecanut price today: ಅಡಿಕೆ ಬೆಳೆಗಾರರಿಗೆ ನಿರಾಸೆ, ಕೊಬ್ಬರಿ ಬೆಳೆಗಾರರಿಗೆ ಬಂಪರ್

ಮುಂದಿನ ಸುದ್ದಿ
Show comments