Webdunia - Bharat's app for daily news and videos

Install App

ಮನೆಯ ಹೊರಗಡೆ ನಿಂತಿದ್ದ ವ್ಯಕ್ತಿ ಮೇಲೆ ಕರಡಿ ದಾಳಿ: ತಲೆಯ ಮೇಲಿನ ಚರ್ಮವೇ ಇಲ್ಲ

Sampriya
ಗುರುವಾರ, 25 ಜುಲೈ 2024 (17:20 IST)
Photo Courtesy X
ಹಾಸನ: ಕರಡಿ ದಾಳಿಗೆ ವೃದ್ಧ ರೈತರೊಬ್ಬರು ಗಂಭೀರ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಬಾಣಾವರ ಹೋಬಳಿಯ ಜನ್ನಾವರ ಗ್ರಾಮದಲ್ಲಿ ನಡೆದಿದೆ.

ಇನ್ನೂ ಕರಡಿ ದಾಳಿಗೆ ರೈತನ ತಲೆಯ ಚರ್ಮವೆಲ್ಲ ಕಿತ್ತು ಹೋಗಿವೆ. ಮುಖದ ಮೇಲೂ ಕರಡಿ ದಾಳಿ ಮಾಡಿದ್ದು, ರಕ್ತದ ಮಡುವಿನಲ್ಲಿದ್ದ ಮಹಾಲಿಂಗಪ್ಪ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮಹಾಲಿಂಗಪ್ಪ ಅವರು ತಮ್ಮ ತೋಟದ ಮನೆಯ ಬಳಿ ನಿಂತಿದ್ದ ವೇಳೆ ಅವರ ಮೇಲೆ ಏಕಾಏಕಿ ಕರಡಿ ದಾಳಿ ನಡೆಸಿದೆ. ಈ ವೇಳೆ ಅವರ ತಲೆಯ ಚರ್ಮವನ್ನೆಲ್ಲ ಕಿತ್ತು ಹಾಕಿ, ಮುಖಕ್ಕೆ ಗಂಭೀರ ಗಾಯ ಮಾಡಿದೆ. ಈ ಘಟನೆ ಬೆಳಿಗ್ಗೆ 6 ಗಂಟೆಗೆ ನಡೆದಿದೆ. ಈ ವೇಳೆ ಕರಡಿ ಜತೆ ಹೋರಾಡಿ ಮಹಾಲಿಂಗ ಅವರು ಪ್ರಾಣಪಾಯದಿಂದ ಪಾರಾಗಿದ್ದಾರೆ. ಸದ್ಯ ಅವರನ್ನು ತಾಲ್ಲೂಕು ಆಸ್ಪತ್ರೆಗೆ ದಾಖಲಿಸಿ ನಂತರ ಹೆಚ್ಚಿನ ಚಿಕಿತ್ಸೆಗೆ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments