Webdunia - Bharat's app for daily news and videos

Install App

ಯಡಿಯೂರಪ್ನವರೇ ನಿಮ್ಮ ಕೆಜೆಪಿಯಿಂದ ಕಾಂಗ್ರೆಸ್ ಅಧಿಕಾರಕ್ಕೆ ಬಂತು: ಈಶ್ವರಪ್ಪ ವಾಗ್ದಾಳಿ

Webdunia
ಗುರುವಾರ, 27 ಏಪ್ರಿಲ್ 2017 (13:19 IST)
ಸಂಘಟನೆ ಉಳಿಸಿ ಸಮಾವೇಶದಲ್ಲಿ ಯಡಿಯೂರಪ್ಪ ವಿರುದ್ಧ ಮಾಜಿ ಉಪಮುಖ್ಯಮಂತ್ರಿ ಈಶ್ವರಪ್ಪ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಯಡಿಯೂರಪ್ಪನವರೇ ಬೇಡ ಬೇಡ ಎಂದು ಬೇಡಿಕೊಂಡರೂ ಕೆಜೆಪಿ ಪಕ್ಷ ಕಟ್ಟಿದರು. ಕಜೆಪಿಯಿಂದಾಗಿ ಬಿಜೆಪಿ 40 ಸ್ಥಾನಕ್ಕಾಗಿ ಕುಸಿದು ಸಿದ್ದರಾಮಯ್ಯ ಲಾಟರಿ ಹೊಡೆದು ಅಧಿಕಾರಕ್ಕೆ ಬಂದರು ಎಂದು ಈಶ್ವರಪ್ಪ ವಾಗ್ದಾಳಿ ನಡೆಸಿದ್ದಾರೆ.
 

ನಿಷ್ಠಾವಂತ ಕಾರ್ಯಕರ್ತರನ್ನ ನೀವು ಅಮಾನತು ಮಾಡುತ್ತೀರಾ ಯಡಿಯೂರಪ್ಪನವರೇ..? ಕೆಜೆಪಿ ಕಟ್ಟಿದ್ರಲ್ಲಾ ಆಗ ಪಕ್ಷಕ್ಕೆ ದುಡಿದ ಕಾರ್ಯಕರ್ತರಿವರು. ಪಕ್ಷ ಹಾಳಾಗುತ್ತಿದ್ದರೂ ನೋಡಿಕೊಂಡು ಸುಮ್ಮನಿರಲು ಸಾಧ್ಯವಿಲ್ಲ. ಪಕ್ಷವನ್ನು ಒಡೆಯಲು ಬಿಡಲ್ಲ, ನಾವೆಲ್ಲ ಒಂದುಗೂಡಲು ಇಲ್ಲಿ ಸೇರಿದ್ದೇವೆ. ಪಕ್ಷವನ್ನ ಒಡೆಯಲು ಅಲ್ಲ ಎಂದು ಕಿಡಿ ಕಾರಿದ್ದಾರೆ.

ಯಡಿಯೂರಪ್ಪನವರೇ ನಿಮ್ಮ ಬೆಂಬಲಿಗರ ಮಾತು ಕೇಳುವುದನ್ನ ಬಿಡಿ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ನಮ್ಮ ಪಕ್ಷ 40 ಸ್ಥಾನಕ್ಕೆ ಕುಸಿದಿತ್ತು. ಲೋಕಸಭೆ ಚುನಾವಣೆಯಲ್ಲಿ ಒಟ್ಟಾಗಿ ಹೋಗಿದ್ದರಿಂದ 25 ಲೋಕಸಭಾ ಕ್ಷೇತ್ರಗಳಲ್ಲಿ ಗೆದ್ದೆವು. ನಾವೆಲ್ಲರೂ ಒಟ್ಟಾಗಿ ದುಡಿಯಬೇಕು ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments