Webdunia - Bharat's app for daily news and videos

Install App

ಅಹ್ಮದ್ ಪಟೇಲ್, ಸೋನಿಯಾ ಗಾಂಧಿ ಕರೆ ಮಾಡಿದ್ದು ಮುಗಿದ ಅಧ್ಯಾಯ: ಎಸ್.ಎಂ.ಕೃಷ್ಣ

Webdunia
ಸೋಮವಾರ, 30 ಜನವರಿ 2017 (19:25 IST)
ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುವ ಮುನ್ನ ಯಾರೊಂದಿಗೂ ಪೂರ್ವಭಾವಿ ಸಮಾಲೋಚನೆ ನಡೆಸಿಲ್ಲ. ಇನ್ನು ಮುಂದೆ ಸಮಾಲೋಚನೆ ನಡೆಸುತ್ತೇನೆ. ಬೇರೆ ಪಕ್ಷ ಸೇರುವ ಕುರಿತು ಮುಂದಿನ ದಿನಗಳಲ್ಲಿ ಉತ್ತರ ಸಿಗಲಿದೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದರು.
 
ಮಂಡ್ಯ ಜಿಲ್ಲೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಷ್ಟು ದಿನ ನನ್ನನ್ನು ಸಹಿಸಿಕೊಂಡ ಅಭಿಮಾನಿಗಳಿಗೆ ಅಭಾರಿಯಾಗಿರುತ್ತೇನೆ. ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತು ಮುಂದಿನ ದಿನಗಳಲ್ಲಿ ತಿಳಿಸುತ್ತೇನೆ ಎಂದು ಹೇಳಿದರು.
 
ಕಾಂಗ್ರೆಸ್ ನಾಯಕ ಅಹ್ಮದ್ ಪಟೇಲ್ ಹಾಗೂ ಎಐಸಿಸಿ ಅಧ್ಯಕೆ ಸೋನಿಯಾ ಗಾಂಧಿ ಕರೆ ಮಾಡಿದ್ದು ಮುಗಿದ ಅಧ್ಯಾಯ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರ ಜೊತೆ ಚರ್ಚಿಸಿದ್ದೇನೆ ಅನ್ನುವುದು ಕೇವಲ ಊಹಾಪೋಹ ಎಂದು ಸ್ಪಷ್ಟಪಡಿಸಿದರು. 
 
ಇವತ್ತು ನಾನು ರಾಜಕೀಯದಲ್ಲಿ ಎಷ್ಟೇ ಎತ್ತರಕ್ಕೆ ಬೆಳಿದಿದ್ದರು ಅಕಕ್ಕೆ ಮದ್ದೂರ ಜನರ ಬೆಂಬಲವೇ ಕಾರಣ. ಮದ್ದೂರು ಜನತೆಗೆ ನಾನು ಸದಾ ಋಣಿಗಾಗಿರುತ್ತೇನೆ ಎಂದರು. 
 
ಹೊಸ ಪಕ್ಷ ಕಟ್ಟುವಂತೆ ಮಾದೇಗೌಡರು ಸಲಹೆ ನೀಡಿದ್ದಾರೆ. ಆದರೆ, ಅದು ಅವರ ಆಲೋಚನೆ ನನ್ನದಲ್ಲ. ಕಾರ್ಯಕರ್ತರೊಂದಿಗೆ ಚರ್ಚಿಸಿ ಮುಂದಿನ ನಿರ್ಧಾರ ಕೈಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ತಿಳಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments