Webdunia - Bharat's app for daily news and videos

Install App

ದೇಶದಿಂದ ಹೊರಗೆ ಹಾಕಿದ್ದಕ್ಕೆ ಇಂದಿರಾ ಗಾಂಧಿಯನ್ನು ಜೈಲಿಗೆ ಕಳುಹಿಸಿದ್ದೆ. ರಾಮ್ ಜೇಠ್ಮಲಾನಿ

Webdunia
ಸೋಮವಾರ, 29 ಆಗಸ್ಟ್ 2016 (20:19 IST)
ನನ್ನನ್ನು ದೇಶದಿಂದ ಹೊರಗೆ ಹಾಕಿದ್ದಕ್ಕೆ ಇಂದಿರಾ ಗಾಂಧಿಯನ್ನು ಜೈಲಿಗೆ ಕಳುಹಿಸಿ ಸೇಡು ತೀರಿಸಿಕೊಂಡಿದ್ದೆ ಎಂದು ಖ್ಯಾತ ಹಿರಿಯ ವಕೀಲ ರಾಮ್ ಜೇಠ್ಮಲಾನಿ ಹೇಳಿದ್ದಾರೆ.
 
ಮಾಜಿ ಸಿಎಂ ರಾಮಕೃಷ್ಣ ಹೆಗಡೆಯವರ 90ನೇ ಜನ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ  ಜೇಠ್ಮಲಾನಿ, ಮಾಜಿ ಪ್ರಧಾನಿ ಇಂದಿರಾಗಾಂಧಿ ತುರ್ತುಪರಿಸ್ಥಿತಿ ಸಂದರ್ಭದಲ್ಲಿ ದೇಶದಿಂದ ಹೊರಗಟ್ಟಿದ್ದಕ್ಕೆ ಅವರನ್ನು 23 ದಿನಗಳ ಕಾಲ ಜೈಲಿನಲ್ಲಿರುವಂತೆ ಮಾಡಿ ಸೇಡು ತೀರಿಸಿಕೊಂಡೆ ಎಂದರು
 
ಮಾಜಿ ಮುಖ್ಯಮಂತ್ರಿ ರಾಮಕೃಷ್ಣ ಹೆಗಡೆ ಸರಳ, ಸಜ್ಜನಿಕೆಯ ವ್ಯಕ್ತಿಯಾಗಿದ್ದು, ಸದಾ ಜನತೆಯ ಏಳಿಗೆಯನ್ನು ಬಯಸುತ್ತಿದ್ದರು. ಆದರೆ, ರಾಜಕೀಯ ಜೀವನದಲ್ಲಿ ಅವರ ಮಿತ್ರರು ಶತ್ರುಗಳಾದರು ಎಂದು ಅಸಮಾಧಾನ ವ್ಯಕ್ತಪಡಿಸಿದರು.
 
ಕರ್ನಾಟಕ ರಾಜ್ಯದಲ್ಲಿ ಅತ್ಯಂತ ಜನಪ್ರಿಯ ಮುಖ್ಯಮಂತ್ರಿ ಎನಿಸಿಕೊಂಡಿದ್ದ ಹೆಗಡೆಯವರು  ದೂರವಾಣಿ ಕದ್ದಾಲಿಕೆ ಆರೋಪ ಬಂದಾಗ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೊಮ್ಮೆ ಚುನಾವಣೆ ಎದುರಿಸಿದರು. ಅವರೊಬ್ಬ ಅಪರೂಪದ ಧೀಮಂತ ರಾಜಕಾರಣಿ ಎಂದು ಹಿರಿಯ ವಕೀಲ ರಾಮ್ ಜೇಠ್ಮಲಾನಿ ಬಣ್ಣಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments