ಸಾಮಾನ್ಯ ಬಜೆಟ್ ಮಂಡನೆಗೆ ಮುನ್ನ ಸಚಿವರ ಅಭಿಪ್ರಾಯ ಪಡೆಯುವ ಮೂಲಕ ಸಿಎಂ ಸಿದ್ದರಾಮಯ್ಯ ಹೊಸ ಸಂಪ್ರದಾಯಕ್ಕೆ ನಾಂದಿ ಹಾಡಿದ್ದಾರೆ.
ಇಲಾಖಾವಾರು ಹಣ ನೀಡುವ ಬಗ್ಗೆ ಸಚಿವರ ಅಭಿಪ್ರಾಯಗಳನ್ನು ಸಂಗ್ರಹಿಸಿ ಬಜೆಟ್ನಲ್ಲಿ ಅಳವಡಿಸಲು ಸಿಎಂ ಸಿದ್ದರಾಮಯ್ಯ ಚಿಂತನೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಜಿಲ್ಲಾ ಉಸ್ತುವಾರಿ ಸಚಿವರು, ಚುನಾವಣೆ ಹತ್ತಿರ ಬರುತ್ತಿರುವುದರಿಂದ ಜನಪರ ಕಾರ್ಯಗಳಿಗೆ ಹೆಚ್ಚಿನ ಒತ್ತು ನೀಡಿ. ಬರಪರಿಸ್ಥಿತಿ ಹೊಣೆ ಹೊರಲು ಸಿದ್ದರಾಗಬೇಕು ಎಂದು ಸೂಚನೆ ನೀಡಿದ್ದಾರೆ.
ಮುಂದಿನ ವರ್ಷದಲ್ಲಿ ಚುನಾವಣೆಗಳು ನಡೆಯಲಿರುವುದರಿಂದ ಬರಪರಿಸ್ಥಿತಿಯನ್ನು ವಿಪಕ್ಷಗಳು ಅಸ್ತ್ರವನ್ನಾಗಿ ಬಳಸಿಕೊಳ್ಳುವ ಅವಕಾಶಗಳಿವೆ. ಸಚಿವರು ಪ್ರತಿಯೊಂದು ಕ್ಷೇತ್ರಕ್ಕೆ ತೆರಳಿ ಆಯಾ ಕ್ಷೇತ್ರದ ಸ್ಥಿತಿಗತಿಯನ್ನು ಪರಿಶೀಲಿಸಬೇಕು ಎಂದು ಸಚಿವರಿಗೆ ಸಿಎಂ ಸಿದ್ದರಾಮಯ್ಯ ಆದೇಶ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ.