Webdunia - Bharat's app for daily news and videos

Install App

ನೇಹಾ ಹತ್ಯೆಗೂ ಮುನ್ನಾ ತಂದೆಯಾ ಮೇಲೂ ಹಲ್ಲೆ ಮಾಡಿದ್ದ ಫಯಾಜ್

Sampriya
ಶನಿವಾರ, 20 ಏಪ್ರಿಲ್ 2024 (16:50 IST)
ಹುಬ್ಬಳ್ಳಿ: ಬಿವಿಬಿ ಕಾಲೇಜು ಆವರಣದಲ್ಲಿ ಸ್ನೇಹಿತನಿಂದಲೇ ಹತ್ಯೆಯಾದ ನೇಹಾ ಪ್ರಕರಣವು ಸದ್ಯ ದೇಶವನ್ನೇ ಬೆಚ್ಚಿಬೀಳಿಸಿದ್ದು, ಇದೀಗ ಹಂತಕ ಫಯಾಜ್‌ ಆಸ್ತಿಗಾಗಿ ತನ್ನ ತಂದೆಯ ಮೇಲು ಹಲ್ಲೆಗೆ ಯತ್ನಿಸಿದ್ದ ಎಂಬ ವಿಚಾರ ತಿಳಿದುಬಂದಿದೆ.

ಹತ್ಯೆಯಾದ ನೇಹಾ ಅವರ ತಂದೆ ನಿರಂಜನ್ ಅವರು ಮಾಧ್ಯಮದ ಮುಂದೆ ಮಾತನಾಡುವಾಗ ಹಂತಕ ಫಯಾಜ್ 3 ದಿನಗಳ ಹಿಂದೆ ಆಸ್ತಿಗಾಗಿ ತನ್ನ ತಂದೆಯಾ ಮೇಲೂ ಹಲ್ಲೆ ಮಾಡಿರುವುದು ತಿಳಿದಿದೆ.

ಪೊಲೀಸರ ಮುಂದೆಯೇ ತಂದೆಯಾ ಮೇಲೆ ಹಲ್ಲೆ ಮಾಡಿದ್ದಾನೆ.  ಪೊಲೀಸರು ಮುಚ್ಚಲಿಕೆ ಬರೆದು ಅವನನ್ನು ಕಳುಹಿಸಿದ್ದಾರೆ.
ಫಯಾಜ್ ತಂದೆ ಈ ವಿಚಾರ ನಮ್ಮ ಬಳಿ ಹೇಳಿಕೊಂಡಿದ್ದರೆ ನಾವು ಮುಂಜಾಗೃತ ಕ್ರಮ ಕೈಗೊಳ್ಳುತ್ತಿದ್ದೇವು. ನಮ್ಮ ಮಗಳನ್ನು ಕಾಪಾಡಿಕೊಳ್ಳುತ್ತಿದ್ದೆವು ಎಂದರು.

ಫಯಾಜ್ ತಂದೆ ಹೇಳಿಕೆ ಬಗ್ಗೆ ಪ್ರತಿಕ್ರಿಯಿಸಿದ ಅವರು, ಇಬ್ಬರು ಪ್ರೀತಿಯಲ್ಲಿದ್ದರು ಎಂಬುದು ಸುಳ್ಳು. ಇದೀಗ ತನಿಖೆಯ ದಿಕ್ಕನ್ನು ತಪ್ಪಿಸಲಾಗುತ್ತಿದೆ. ನಮ್ಮ ಮಗಳು ಆತನನ್ನು ಪ್ರೀತಿಸಿಲ್ಲ. ಇದು ವನ್‌ ಸೈಡ್ ಲವ್. ಫಯಾಜ್‌ನ ಮನಃಸ್ಥಿತಿ ಬಗ್ಗೆ ಅವರ ಪೋಷಕರು ನಮ್ಮ ಬಳಿ ಹೇಳಿಕೊಂಡಿದ್ದರೆ ನಮ್ಮ ಮಗಳನ್ನು ಹೇಗಾದರೂ ನಾವು ರಕ್ಷಿಸಿಕೊಳ್ಳುತ್ತಿದ್ದೆವು.

ಈಗ ಕ್ಷಮೆ ಕೇಳಿದರೆ ಏನು ಪ್ರಯೋಜನವಿಲ್ಲ. ನಮಗೆ ನಮ್ಮ ಮಗಳನ್ನು ವಾಪಾಸ್ ಪಡೆಯಕ್ಕೆ ಆಗಲ್ಲ. ಅವನಿಗೆ ಕಠಿಣ ಶಿಕ್ಷೆಯಾಗಬೇಕೆಂದು ಆಕ್ರೋಶ ಹೊರಹಾಕಿದರು.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಗಂಡನ ಕೊಲೆ ಮಾಡಿದ ಸೋನಂ ಅದೊಂದನ್ನು ಮಾತ್ರ ಬಿಟ್ಟು ಹೋಗಿದ್ದಳು

Pradeep Eshwar: ಮೋದಿ 11 ವರ್ಷದಲ್ಲಿ ಕಡಿದು ಕಟ್ಟೆ ಹಾಕಿದ್ದಾರೆ ಬಿಡ್ರಿ: ಪ್ರದೀಪ್ ಈಶ್ವರ್

ಕುರ್ಚಿ ಉಳಿಸಿಕೊಳ್ಳಲು ಭಾರತದ ಜೊತೆಗೇ ಯುದ್ಧ ಮಾಡಲು ಹೊರಟಿದ್ದರಂತೆ ಬಾಂಗ್ಲಾ ಪ್ರಧಾನಿ ಯೂನಸ್

Siddaramaiah: ಇದೆಲ್ಲಾ ಚೆನ್ನಾಗಿರಲ್ಲ, ಆಂಧ್ರಪ್ರದೇಶ ಸಿಎಂಗೆ ಖಡಕ್ ಎಚ್ಚರಿಕೆ ನೀಡಿದ ಸಿಎಂ ಸಿದ್ದರಾಮಯ್ಯ

ಟೀಕೆಗಳ ಬಳಿಕ ಕೊನೆಗೂ ಹಣಕಾಸು ಆಯೋಗದ ಸಭೆಗೆ ಹೋಗಲು ತೀರ್ಮಾನಿಸಿದ ಸಿಎಂ ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments