Webdunia - Bharat's app for daily news and videos

Install App

ಐಟಿ ದಾಳಿ ನಡೆಯುತ್ತೆಂದು ಸಚಿವ ಜಾರಕಿಹೊಳಿಗೆ ಮೊದಲೇ ಗೊತ್ತಿತ್ತಂತೆ!

Webdunia
ಮಂಗಳವಾರ, 24 ಜನವರಿ 2017 (11:31 IST)
ಐಟಿ ಅಧಿಕಾರಿಗಳು ದಾಳಿ ಮಾಡ್ತಾರೆಂದು ಮೊದಲೇ ಗೊತ್ತಿತ್ತು. ಅದರಂತೆ ಈಗ ದಾಳಿ ನಡೆದಿದೆ ಎಂದು ಸಣ್ಣ ಕೈಗಾರಿಕೆ ಖಾತೆ ಸಚಿವ ರಮೇಶ್ ಜಾರಕಿಹೊಳಿ ಕಿಡಿಕಾರಿದ್ದಾರೆ.
 
ಖಾಸಗಿ ಸುದ್ದಿ ವಾಹಿನಿಯೊಂದಿಗೆ ಮಾತನಾಡಿದ ಅವರು, ಶುಗರ್ ಫ್ಯಾಕ್ಟರಿ ಮೇಲೆ ಮಾತ್ರ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನನ್ನ ವೈಯಕ್ತಿಕ ಆಸ್ತಿ ಮೇಲೆ ಎಲ್ಲೂ ದಾಳಿಯಾಗಿಲ್ಲ. ಶುಗರ್ ಫ್ಯಾಕ್ಟರಿ ಮೇಲೆ ನಡೆದ ದಾಳಿಯಲ್ಲಿ 43 ಸಾವಿರ ರೂಪಾಯಿ ಹಣ ಪತ್ತೆಯಾಗಿದೆ. ನಾವು ಯಾವುದೇ ಅಕ್ರಮ ಆಸ್ತಿ ಸಂಪಾದನೆ ಮಾಡಿಲ್ಲ ಎಂದು ತಿಳಿಸಿದರು.
 
ಐಟಿ ದಾಳಿ ಬಳಿಕ ಸಂಬಂಧಿಸಿದ ಆಸ್ತಿ ವಿವರವನ್ನು ಅಧಿಕಾರಿಗಳು ಬಹಿರಂಗ ಪಡಿಸಬಾರದು. ಆದರೆ, ಐಟಿ ಅಧಿಕಾರಿಗಳು ಆಸ್ತಿ ವಿವರವನ್ನು ಬಹಿರಂಗ ಪಡಿಸಿ, ಸುಳ್ಳು ಮಾಹಿತಿ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
 
ಐಟಿ ದಾಳಿಯ ವೇಳೆ ಯಾವುದೇ ದಾಖಲೆ, ಚಿನ್ನಾಭರಣ ಹಾಗೂ ಆಸ್ತಿ ಪತ್ರಗಳು ಪತ್ತೆಯಾಗಿಲ್ಲ. ನನ್ನ ತೇಜೊವಧೆಗೆ ಯತ್ನಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದೇನೆ ಎಂದು ಸಣ್ಣ ಕೈಗಾರಿಕೆ ಖಾತೆ ಸಚಿವ ರಮೇಶ್ ಜಾರಕಿಹೊಳಿ ಎಚ್ಚರಿಕೆ ನೀಡಿದ್ದಾರೆ.
 
ಐಟಿ ಅಧಿಕಾರಿಗಳು ನಡೆಸಿದ ದಾಳಿ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟದ ಸಣ್ಣ ಕೈಗಾರಿಕೆ ಸಚಿವ ರಮೇಶ್ ಜಾರಕಿಹೊಳಿ ನಿವಾಸದಲ್ಲಿ 12 ಕೆಜಿ ಚಿನ್ನ ಹಾಗೂ 165 ಕೋಟಿ ರೂಪಾಯಿ ಅಘೋಷಿತ ನಗದು ಪತ್ತೆಯಾಗಿದೆ ಎಂದು ಹೇಳಲಾಗುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಿಜೆಪಿಯ ಯಾತ್ರೆಗಳ ಬಗ್ಗೆ ಸಿಎಂ ಸಿದ್ದರಾಮಯ್ಯ ಸ್ಫೋಟಕ ಹೇಳಿಕೆ

ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರನಾ, ಪ್ರಲ್ಹಾದ್ ಜೋಶಿನಾ: ಆರ್ ಅಶೋಕ್ ರಿಂದ ಎಡವಟ್ಟಾಯ್ತು

ಅಫ್ಘಾನಿಸ್ತಾನ ಭೀಕರ ಭೂಕಂಪ: ವಿದೇಶದಲ್ಲಿದ್ರೂ ಕರ್ತವ್ಯ ಮರೆಯದ ಪ್ರಧಾನಿ ನರೇಂದ್ರ ಮೋದಿ

ನಾನೂನು ಹಿಂದೂನೇ, ಮಂದಿರ ಕಟ್ಟಿಸಿದ್ದೀನಿ, ಆದ್ರೂ ಹಿಂಗೆಲ್ಲಾ ಹೇಳ್ತಾರೆ ಎಂದ್ರು ಸಿಎಂ ಸಿದ್ದರಾಮಯ್ಯ

ಚಿನ್ನಯ್ಯ ತಂದ ಬುರುಡೆ ಮೂಲ ಹುಡುಕಾಟದಲ್ಲಿ ಮಹತ್ವದ ಬೆಳವಣಿಗೆ

ಮುಂದಿನ ಸುದ್ದಿ
Show comments