ಟೆಂಡರ್ ಕರೆಯುವ ಮುನ್ನವೇ ಕಾಮಗಾರಿ ಪೂರೈಸಿದ ಬಿಬಿಎಂಪಿ!

Webdunia
ಬುಧವಾರ, 11 ಆಗಸ್ಟ್ 2021 (22:01 IST)
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ರಸ್ತೆಗಳ ಮೂಲಭೂತ ಸೌಕರ್ಯಗಳ ಇಲಾಖೆಯ ಅಂಗ ಸಂಸ್ಥೆಯಾದ Traffic Engineering Cell ನ ಮೂಲಕ ಪಾಲಿಕೆಯ ವ್ಯಾಪ್ತಿಯ ಹೊರ ವರ್ತುಲ ರಸ್ತೆ ಸೇರಿದಂತೆ ಪ್ರಮುಖ Arterial ರಸ್ತೆಗಳ ಮೇಲ್ಭಾಗದಲ್ಲಿ 10 mm ದಪ್ಪನೆಯ Micro Surfacing ಕಾರ್ಯವನ್ನು ಮಾಡುವ ಸುಮಾರು 13 ಕೋಟಿ ರೂಪಾಯಿಗಳಷ್ಟು ಮೊತ್ತದ ಕಾಮಗಾರಿಗಳನ್ನು 15ನೇ ಹಣಕಾಸು ಆಯೋಗದ ಅನುದಾನದ ಮೂಲಕ ಮಾಡುವ ಸಂಬಂಧ ನಿಯಮಾನುಸಾರ ಟೆಂಡರ್ ಅನ್ನು ಆಹ್ವಾನಿಸುವ ಮೊದಲೇ ಪೂರ್ವ ನಿಗದಿತ ಗುತ್ತಿಗೆದಾರರ ಮೂಲಕ ಈ ಕಾರ್ಯವನ್ನು ಮಾಡಿಸಿರುವ ಆಘಾತಕಾರಿ ಪ್ರಕರಣ ಬೆಳಕಿಗೆ ಬಂದಿದ್ದು, ಈಗಾಗಲೇ ನಿಯಮಬಾಹಿರವಾಗಿ Micro Surfacing ಮಾಡಿರುವ ರಸ್ತೆಗಳೆಲ್ಲಾ ಸಂಪೂರ್ಣವಾಗಿ ಹಾಳಾಗಿದ್ದು, ಕೋಟ್ಯಾಂತರ ರೂಪಾಯಿ ಭ್ರಷ್ಟಾಚಾರ ಪ್ರಕರಣ ನಡೆದಿರುತ್ತದೆಯಲ್ಲದೆ ಅನುದಾನದ ಬಹುತೇಕ ಮೊತ್ತವನ್ನು ರಸ್ತೆ ಗುಂಡಿಗಳಲ್ಲಿ ಹಾಕಿದಂತಾಗಿದೆ.
 
15ನೇ ಹಣಕಾಸು ಆಯೋಗದ ಅನುದಾನಗಳ ಬಳಕೆಯ ಸಂದರ್ಭದಲ್ಲಿ ಅಳವಡಿಸಿಕೊಳ್ಳಬೇಕಾದ ನಿಯಮಗಳನ್ನು ಪಾಲಿಸದೆಯೇ ಮತ್ತು ಇದಕ್ಕೆಂದೇ ರಚಿಸಲ್ಪಟ್ಟಿರುವ City Level Implementation Committee ಯ ಮುಂದೆ ಕ್ರಿಯಾ ಯೋಜನೆಯನ್ನು ಮಂಡಿಸಿ ಅನುಮೋದನೆ ಪಡೆಯದೆಯೇ ಏಕಾಏಕಿ ಮೊದಲೇ ನಿರ್ಧರಿತವಾಗಿದ್ದ ಗುತ್ತಿಗೆದಾರರ ಮೂಲಕ ಈ ಕಳಪೆ ಕಾಮಗಾರಿಯನ್ನು ಟೆಂಡರ್ ಕರೆಯದೆಯೇ ನಿರ್ವಹಿಸಿರುವ ಹಗರಣದ ಸಂಬಂಧ ಸರ್ಕಾರದ ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಮಾನ್ಯ ಆಡಳಿತಾಧಿಕಾರಿಗಳು ಹಾಗೂ ಮಾನ್ಯ ಮುಖ್ಯ ಆಯುಕ್ತರಿಗೆ ದಾಖಲೆಗಳ ಸಹಿತ ದೂರನ್ನು ನೀಡಲಾಗಿದೆ ಮತ್ತು ರಸ್ತೆಗಳ ಮೂಲಭೂತ ಸೌಕರ್ಯಗಳ ಇಲಾಖೆಯ ಮುಖ್ಯ ಅಭಿಯಂತರರಾದ B. S. ಪ್ರಹ್ಲಾದ್, Traffic Engineering Cell ನ ಕಾರ್ಯಪಾಲಕ ಅಭಿಯಂತರರಾದ ಶ್ರೀನಿವಾಸ್ ಮತ್ತು ಈ ಎಲ್ಲಾ ಹಗರಣಗಳ ಕಾರಣಕರ್ತರಾಗಿರುವ Traffic Engineering Cell ನ ಸಹಾಯಕ ಕಾರ್ಯಪಾಲಕ ಅಭಿಯಂತರ ಅಶೋಕ್ ಬಾಗಿ ರವರ ವಿರುದ್ಧ ಕೂಡಲೇ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ಹಾಗೂ ಈ ಹಗರಣದ ತನಿಖೆಗೆ ಆದೇಶಿಸಬೇಕೆಂದು  ಆಗ್ರಹಿಸಲಾಗಿದೆ.
 
ಈ ಸಂಬಂಧ - ನಗರಾಭಿವೃದ್ಧಿ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿಗಳು, ಪಾಲಿಕೆಯ ಮುಖ್ಯ ಆಯುಕ್ತರು ಮತ್ತು ಆಡಳಿತಾಧಿಕಾರಿಗಳಿಗೆ ದಾಖಲೆಗಳ ಸಹಿತ ದೂರುಗಳನ್ನು ಸಲ್ಲಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಹಲವು ಮಕ್ಕಳ ಕಣ್ಣಿಗೆ ಗಾಯ ಬೆನ್ನಲ್ಲೇ 59 ಕಾರ್ಬೈಡ್ ಗನ್ ವಶಕ್ಕೆ, ಇಬ್ಬರು ಅರೆಸ್ಟ್‌

ಕರ್ನೂಲ್ ಭೀಕರ ಬಸ್ ಬೆಂಕಿ ಅವಘಡ, ಡಿಸಿಎಂ ಡಿಕೆ ಶಿವಕುಮಾರ್ ನೀಡಿದ ಸಲಹೆ ಹೀಗಿದೆ

ಪೊಲೀಸ್ ಅಧಿಕಾರಿಯಿಂದ ಅತ್ಯಾಚಾರ: ಅಂಗೈಯಲ್ಲಿ ಡೆತ್‌ನೋಟ್ ಬರೆದಿಟ್ಟು ವೈದ್ಯೆ ಸೂಸೈಡ್

ನನ್ನನ್ನು ಕತ್ತಲಲ್ಲಿ ಯಾಕೆ ಹುಡುಕ್ತೀಯಾ, ನಾನು ಹಾಗಲ್ಲ: ಪ್ರದೀಪ್ ಈಶ್ವರ್

ರಾಷ್ಟ್ರ ರಾಜಧಾನಿಯಲ್ಲಿ ಗಾಳಿ ಗುಣಮಟ್ಟ ಕಳಪೆ: ದೆಹಲಿಯಲ್ಲಿ ಈ ವ್ಯಾಪಾರದಲ್ಲಿ ಭಾರೀ ಏರಿಕೆ

ಮುಂದಿನ ಸುದ್ದಿ
Show comments