Webdunia - Bharat's app for daily news and videos

Install App

ಬಿಜೆಪಿಯಿಂದ ಬರ ಅಧ್ಯಯನ ಪ್ರವಾಸ ಶುರು

Webdunia
ಭಾನುವಾರ, 2 ಡಿಸೆಂಬರ್ 2018 (15:47 IST)
ಬರ ಪೀಡಿತ ಪ್ರದೇಶಗಳತ್ತ ಬಿಜೆಪಿ ಮುಖಂಡರು ಮುಖ ಮಾಡಿದ್ದಾರೆ. ರಾಜ್ಯದಲ್ಲಿರುವ ಬರ ಪರಿಸ್ಥಿತಿ ಅರಿತು ವರದಿ ಸಿದ್ಧಪಡಿಸಲು ಕಮಲಪಾಳೆಯದಲ್ಲಿ ಆರು ತಂಡಗಲೇ ಸಿದ್ಧಗೊಂಡಿವೆ.

ವಿವಿಧ ಜಿಲ್ಲೆಗಳ ನೂರು ತಾಲ್ಲೂಕುಗಳಲ್ಲಿರುವ ಬರ ಪರಿಸ್ಥಿತಿಯನ್ನು ಅರಿಯಲು ಬಿಜೆಪಿಯ ಆರು ತಂಡಗಳು ಪ್ರವಾಸ ಕೈಗೊಂಡಿವೆ.

ಕೆಲವು ದಿನಗಳ ಹಿಂದೆ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಪಕ್ಷದ ಸಭೆಯಲ್ಲಿ ಬರಪೀಡಿತ ಪ್ರದೇಶಗಳ ಅಧ್ಯಯನ ಸಂಬಂಧ ತೀರ್ಮಾನ ತೆಗೆದುಕೊಂಡು ಬರ ಅಧ್ಯಯನಕ್ಕಾಗಿ ಪಕ್ಷದ ವಿವಿಧ ಮುಖಂಡರುಗಳ ಆರು ತಂಡಗಳನ್ನು ರಚಿಸಲಾಗಿತ್ತು. ಅದರಂತೆ ಆರು ತಂಡಗಳು 7 ದಿನಗಳ ಕಾಲ ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುತ್ತಿವೆ.
ರಾಜ್ಯದ ಬರಪೀಡಿತ ಪ್ರದೇಶಗಳಿಗೆ ಭೇಟಿ ನೀಡುವ ಬಿಜೆಪಿ ನಾಯಕರ ತಂಡ ಅಲ್ಲಿನ ಪರಿಸ್ಥಿತಿ, ಪರಿಹಾರ ಕಾಮಗಾರಿಗಳ ಪ್ರಗತಿ ಎಲ್ಲದರ ಬಗ್ಗೆಯೂ ವರದಿ ಸಿದ್ದಪಡಿಸಲಿವೆ.

ಕೆ.ಎಸ್. ಈಶ್ವರಪ್ಪ ನೇತೃತ್ವದ ತಂಡ ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಹಾಗೂ ವಿಜಯಪುರ ಮತ್ತು ಬಾಗಲಕೋಟೆ ಜಿಲ್ಲೆಗಳಿಗೆ ಭೇಟಿ ನೀಡಿ ವರದಿ ನೀಡಲಿವೆ.

ಕೇಂದ್ರ ಸಚಿವರಾದ ರಮೇಶ್ ಜಿಗಜಿಣಗಿ, ಸದಾನಂದಗೌಡ, ಮಾಜಿ ಮುಖ್ಯಮಂತ್ರಿ ಜಗದೀಶ್ಶೆಟ್ಟರ್, ಮಾಜಿ ಉಪಮುಖ್ಯಮಂತ್ರಿ ಆರ್. ಅಶೋಕ್, ವಿಧಾನಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸಪೂಜಾರಿ ನೇತೃತ್ವದಲ್ಲಿ ಆರು ತಂಡಗಳು ಬರ ಅಧ್ಯಯನಕ್ಕೆ ತೆರಳಿವೆ.

ಕೇಂದ್ರ ಸಚಿವ ಸದಾನಂದಗೌಡ ನೇತೃತ್ವದ ತಂಡ ಅತಿವೃಷ್ಠಿ ಪೀಡಿತ ಕೊಡಗು ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ನಂತರ ಕೊಡಗಿನ ಸ್ಥಿತಿಗತಿಗಳನ್ನು ಅವಲೋಕಿಸಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Stray Dog Attack: ದಾಳಿಯ ಭೀಕರತೆಗೆ ಉಳಿದಿದ್ದು ಮಗುವಿನ ಮುಖದ ಮೂಳೆಗಷ್ಟೇ

Bengaluru: ಸೂಟ್‌ಕೇಸ್‌ನಲ್ಲಿ ಬಾಲಕಿಯ ಶವ ಪತ್ತೆ ಪ್ರಕರಣ: ಬಿಹಾರದ 7ಮಂದಿಯ ಬಂಧನ

Kedarnath, ತಾಂತ್ರಿಕ ದೋಷ: ಹೆದ್ದಾರಿಯಲ್ಲೇ ಭೂಸ್ಪರ್ಶವಾದ ಹೆಲಿಕಾಪ್ಟರ್‌, Video

ನನಗೆ ಹೆಸರು ಬೇಡ, ಸಾಯುವ ಮುನ್ನಾ ನಿಮ್ಮ ಋಣ ತೀರಿಸುತ್ತೇನೆ: ಕುಮಾರಸ್ವಾಮಿ ಕಣ್ಣೀರು

Bengaluru Stampede: ಸಿಎಂ ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ವಿರುದ್ಧ ದೂರು ದಾಖಲು

ಮುಂದಿನ ಸುದ್ದಿ
Show comments