Webdunia - Bharat's app for daily news and videos

Install App

ತೆರೆಮರೆಯಲ್ಲಿ ಕೈ ಅತೃಪ್ತರ ಕಸರತ್ತು ಜೋರು!

Webdunia
ಭಾನುವಾರ, 23 ಡಿಸೆಂಬರ್ 2018 (17:19 IST)
ಮೈತ್ರಿ ಸರಕಾರದಲ್ಲಿ ಸಚಿವ ಸ್ಥಾನ ತಪ್ಪಿದ ಹಾಗೂ ಸ್ಥಾನದಿಂದ ಕೈಬಿಟ್ಟವರು ತಮ್ಮ ಮುಂದಿನ ನಡೆ ಕುರಿತು ಚಿಂತನೆ ಮಂಥನದಲ್ಲಿ ತೊಡಗಿದ್ದಾರೆ.

ರಾಜ್ಯ ಸರಕಾರದ ಮಂತ್ರಿ ಮಂಡಲದಲ್ಲಿ ಸಚಿವ ಸ್ಥಾನ ಸಿಗದಿರುವ ಅತೃಪ್ತ ಶಾಸಕರು ಮಾಜಿ ಸಚಿವ ರಮೇಶ್ ಜಾರಕಿಹೊಳಿ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ಸಭೆ ನಡೆಸಲು ನಿರ್ಧರಿಸಿದ್ದಾರೆ. ಶನಿವಾರದಂದು ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ನೇತೃತ್ವದ ಸರಕಾರದ ಸಂಪುಟ ವಿಸ್ತರಣೆಯಾದ ಬೆನ್ನಲ್ಲೆ ಅತೃಪ್ತ ಶಾಸಕರ ಬಣದಲ್ಲಿ ಅಸಮಾಧಾನ ಭುಗಿಲೆದ್ದಿದೆ.

ಇಂದು ಅಥವಾ ನಾಳೆ ಎಲ್ಲ ಅತೃಪ್ತ ಶಾಸಕರು ಸಭೆ ಸೇರಿ ಸಚಿವ ಸ್ಥಾನ ಕೈತಪ್ಪಿರುವ ಬಗ್ಗೆ ಸಮಾಲೋಚನೆ ನಡೆಸಲು ಮುಂದಾಗಿದ್ದಾರೆ. ಸಭೆಯಲ್ಲಿ ಚರ್ಚೆ ನಡೆಸಿದ ನಂತರ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಸಚಿವ ಸ್ಥಾನ ಸಿಗದಿರಲು ಕಾರಣಗಳು ಏನು? ಎಂಬ ಬಗ್ಗೆ ವಿವರಣೆ ಪಡೆಯಲು ತೀರ್ಮಾನಿಸಿದ್ದಾರೆ.
ಅತೃಪ್ತ ಶಾಸಕರು ಸಭೆ ಸೇರಿ ಮುಂದೆ ಕೈಗೊಳ್ಳಬೇಕಾದ ರೂಪು-ರೇಷೆಗಳ ಬಗ್ಗೆಯೂ ನಿರ್ಧಾರ ಕೈಗೊಳ್ಳುವ ನಿರೀಕ್ಷೆ ಇದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments