Webdunia - Bharat's app for daily news and videos

Install App

ಮಂತ್ರಿಯಾದಾಗ ಖುಷಿ ಆಗಿತ್ತು, ಈಗ ಕಿರಿಕಿರಿಯಾಗುತ್ತಿದೆ: ಆರಗ!

Webdunia
ಮಂಗಳವಾರ, 17 ಆಗಸ್ಟ್ 2021 (08:35 IST)
ಶಿವಮೊಗ್ಗ (ಆ.17):  ನಾನೀಗ ದೊಡ್ಡ ಮನುಷ್ಯನಾಗಿದ್ದೇನೆ. ನನಗೆ ನಿಮ್ಮ ಜೊತೆ ಮಾತನಾಡಲೂ ವ್ಯವಸ್ಥೆ ಬಿಡುತ್ತಿಲ್ಲ. ಆರಂಭದ ಒಂದೆರಡು ದಿನ ಏನೋ ಒಂಥರಾ ಖುಷಿಯಾಗಿತ್ತು. ಈಗ ಕಿರಿಕಿರಿಯಾಗುತ್ತಿದೆ. ಹಾರಾಡ್ಕೊಂಡು, ಓಡಾಡ್ಕೊಂಡು ಇದ್ದ ನನಗೀಗ ಕಬ್ಬಿಣದ ಕೋಟೆ ಕಟ್ಟಲಾಗಿದೆ ಎಂಬ ಭಾವ ಬರುತ್ತಿದೆ. ದಯವಿಟ್ಟು ಯಾರೂ ಅನ್ಯಥಾ ಭಾವಿಸಬಾರದು ಎಂದು ನೂತನ ಗೃಹ ಸಚಿವ ಆರಗ ಜ್ಞಾನೇಂದ್ರ ತಮ್ಮ ಅನುಭವನ್ನು ಹಂಚಿಕೊಂಡರು.

ಕರ್ನಾಟಕ ಅಡಕೆ ಸಹಕಾರ ಸಂಘಗಳ ಮಹಾಮಂಡಳಿ ನೀಡಿದ ಅಭಿನಂದನೆ ಸ್ವೀಕರಿಸಿ ಮಾತನಾಡಿದ ಅವರು, ಗೃಹಸಚಿವ ಹುದ್ದೆ ದೊಡ್ಡ ಸ್ಥಾನ ಎಂದುಕೊಂಡಿದ್ದೀರಿ. ನನ್ನ ಕಷ್ಟನನಗೇ ಗೊತ್ತು. ಹಾಯಾಗಿ ಇದ್ದವನಿಗೆ ಕಿರಿಕಿರಿ ಶುರುವಾಗಿದೆ. ನನ್ನ ಕಾರು ಎಷ್ಟುವೇಗವಾಗಿ ಓಡಬೇಕು ಎಂದು ನಿರ್ಧರಿಸೋದು ಕೂಡ ಪೊಲೀಸ್. ಮನೆ ಎದುರು ಅಗ್ನಿಶಾಮಕ ದಳ, ಪೊಲೀಸ್ ಪಹರೆ ಇದೆ. ಯಾರಾದ್ರೂ ಗುಂಡು ಹೊಡೆದ್ರೆ ಸಾಯೋ ಮುನ್ನವೇ ಆಸ್ಪತ್ರೆಗೆ ಕರೆದೊಯ್ಯಬೇಕೆಂಬ ಕಾರಣಕ್ಕೇನೋ ಒಂದು ಆ್ಯಂಬುಲೆನ್ಸ್ ಸಹ ಇದೆ ಎಂದು ತಮಾಷೆಯಾಗಿ ಹೇಳಿದರು.
ರಾತ್ರಿ ಸರಿಯಾಗಿ ನಿದ್ರೆ ಮಾಡೋಕೂ ಬಿಡೋದಿಲ್ಲ. ಕೆಲ ದಿನದ ಹಿಂದೆ ಬೆಳಗಿನ ಜಾವ ಸುಖದ ನಿದ್ದೆಯಲ್ಲಿ ಇದ್ದೆ. ಹಿರಿಯ ಪೊಲೀಸ್ ಅಧಿಕಾರಿ ಕರೆ ಮಾಡಿ ಗಣ್ಯ ವ್ಯಕ್ತಿಯೊಬ್ಬರ ಮನೆಯಲ್ಲಿ ನಿಂತ ಕಾರಿಗೆ ಬೆಂಕಿ ಬಿದ್ದಿದೆ. ಇದು ನಿಮ್ಮ ಮಾಹಿತಿಗಾಗಿ ಎಂದರು.
ಕೆಲ ದಿನಗಳ ಹಿಂದೆ ಶೃಂಗೇರಿ ದೇವಸ್ಥಾನಕ್ಕೆ ಹೋಗಿ ದೇವರೆದುರು ನಿಂತಾಗ ಇಷ್ಟುದೊಡ್ಡ ಖಾತೆ ಬೇಕಾ? ಬಿಟ್ಟು ಬಿಡಲಾ ಎಂದು ಮನಸ್ಸಿನಲ್ಲಿಯೇ ಅಂದುಕೊಂಡಿದ್ದೆ. ಆದರೆ ಹೋರಾಟದಿಂದ ಬಂದವನು. ಬಡತನದ ಬೆಂಕಿಯಿಂದ ಎದ್ದವನು. ಹಾಗಾಗಿ ಸವಾಲುಗಳನ್ನು ಎದುರಿಸಿ ಕೆಲಸ ಮಾಡದಿದ್ದರೆ ಜನ ಏನಂದಾರು ಎಂದು ಕೊಂಡು ಮುಂದಡಿಯಿಟ್ಟಿದ್ದೇನೆ. ಸಮರ್ಥವಾಗಿ ನಿಭಾಯಿಸಿ, ಜನರ ಸಂಕಷ್ಟವನ್ನು ದೂರ ಮಾಡುವ ಕೆಲಸ ಮಾಡುತ್ತೇನೆ ಎಂದರು

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಗಾಂಧೀಜಿ ಬಗ್ಗೆ ತಪ್ಪು ಮಾಹಿತಿ ಕೊಟ್ರಾ ರಾಹುಲ್ ಗಾಂಧಿ: ಲೆಹರ್ ಸಿಂಗ್ ಟ್ವೀಟ್ ನಲ್ಲಿ ಏನಿದೆ ನೋಡಿ

ರಕ್ತದ ಮಡುವಿನಲ್ಲಿ ನಿವೃತ್ತ ಪೊಲೀಸ್ ಓಂ ಪ್ರಕಾಶ್‌ ಮೃತದೇಹ ಪತ್ತೆ, ಮನೆಯವರೇ ಮೇಲೆ ಡೌಟ್‌

ಸಿಎಂ ಕುರ್ಚಿ ಗುದ್ದಾಟದ ನಡುವೆ ಧರ್ಮಸ್ಥಳಕ್ಕೆ ಭೇಟಿ ನೀಡಿ, ಧರ್ಮಾಧಿಕಾರಿ ಕಾಲಿಗೆ ಬಿದ್ದು ಆಶೀರ್ವಾದ ಪಡೆದ ಡಿಕೆ ಶಿವಕುಮಾರ್

Video vira: ವಿದ್ಯುತ್ ಶಾಕ್‌ನಿಂದ ಒದ್ದಾಟುತ್ತಿದ್ದ ಬಾಲಕನ ಪಾಲಿಗೆ ನಿಜವಾದ ಹೀರೋ ಆದ ಯುವಕ, ಇದಪ್ಪ ದೈರ್ಯ

ನನ್ನ ಸಾವಿಗೆ ಪತ್ನಿ, ಅತ್ತೆಯೇ ಕಾರಣ: ನ್ಯಾಯಕೊಡಿಸಲು ಸಾಧ್ಯವಾಗದಿದ್ದರೆ ಚಿತಾಭಸ್ಮ ಚರಂಡಿಗೆ ಎಸೆಯಿರಿ, ವಿಡಿಯೋ ಮಾಡಿಟ್ಟು ಟೆಕ್ಕಿ ಸಾವು

ಮುಂದಿನ ಸುದ್ದಿ
Show comments