Webdunia - Bharat's app for daily news and videos

Install App

ಸಿಟಿ ರವಿಯನ್ನು ರಾತ್ರಿಯಿಡೀ ಪೊಲೀಸರು ಸುತ್ತಾಡಿಸಿದ್ದು ಈ ಕಾರಣಕ್ಕಂತೆ

Krishnaveni K
ಮಂಗಳವಾರ, 24 ಡಿಸೆಂಬರ್ 2024 (11:06 IST)
ಬೆಂಗಳೂರು: ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡಿದ ಆರೋಪದಲ್ಲಿ ಬಂಧಿಸಿದ ಬಳಿಕ ಪೊಲೀಸರು ರಾತ್ರಿಯಿಡೀ ಶಾಸಕ ಸಿಟಿ ರವಿಯನ್ನು ಸುತ್ತಾಡಿಸಿದ್ದು ಯಾಕೆ ಎಂಬ ಕಾರಣ ಈಗ ಬಯಲಾಗಿದೆ.

ಸಿಟಿ ರವಿಯನ್ನು ರಾತ್ರಿಯಿಡೀ ಸುತ್ತಾಡಿಸಿದ್ದಕ್ಕೆ ಬೆಳಗಾವಿ ಪೊಲೀಸ್ ಆಯುಕ್ತ ಯಡಾ ಮಾರ್ಟಿನ್ ಸ್ಪಷ್ಟನೆ ನೀಡಿದ್ದಾರೆ. ಮೊದಲು ಸಿಟಿ ರವಿಯವರನ್ನು ಹಿರೇಬಾಗೇವಾಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಬಂಧಿಸುತ್ತಾರೆ. ಆದರೆ ಹೀರೇಬಾಗೇವಾಡಿಯಲ್ಲ ಅಪಾರ ಜನಸ್ತೋಮವಿದ್ದಿದ್ದರಿಂದ ಭದ್ರತಾ ದೃಷ್ಟಿಯಿಂದ ಅವರನ್ನು ಖಾನಾಪುರ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಯಿತು.

ಆದರೆ ಖಾನಾಪುರದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಸಾರ್ವಜನಿಕರು, ಮಾಧ್ಯಮ ಪ್ರತಿನಿಧಿಗಳು ಸೇರಿ ಗೊಂದಲದ ವಾತಾವರಣ ಉಂಟಾಯಿತು. ಅಲ್ಲದೆ ಬಿಜೆಪಿ ಕಾರ್ಯಕರ್ತರು ಹೆಚ್ಚು ಸಂಖ್ಯೆಯಲ್ಲಿ ಜಮಾವಣೆಗೊಳ್ಳುತ್ತಿದ್ದುದ್ದರಿಂದ ಪರಿಸ್ಥಿತಿ ಕೈತಪ್ಪಿ ಹೋಗುತ್ತಿತ್ತು.

ಹೀಗಾಗಿ ಸಿಟಿ ರವಿಯವರ ಸುರಕ್ಷತೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ರಾಮದುರ್ಗಕ್ಕೆ ಸ್ಥಳಾಂತರಿಸಲಾಯಿತು.  ಅಲ್ಲೆಲ್ಲವೂ ಮಾಧ್ಯಮಗಳು, ಕಾರ್ಯಕರ್ತರು ಸೇರಿ ಅವರಿಂದ ತಪ್ಪಿಸಿಕೊಳ್ಳಲು ಬೆಂಗಾವಲು ಪಡೆಯು ಪ್ರಯತ್ನಿಸುತ್ತದೆ. ಈ ನಡುವೆ ಸಿಟಿ ರವಿಯವರಿಗೆ ಆಹಾರ, ಚಿಕಿತ್ಸೆ ನೀಡಲಾಗಿತ್ತು.  ಮರುದಿನ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು ಎಂದು ಯಡಾ ಮಾರ್ಟಿನ್ ಸ್ಪಷ್ಟನೆ ಕೊಟ್ಟಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೃಷ್ಣನನ್ನು‌ ತೂಗಿದ ಸ್ಪೀಕರ್ ಯುಟಿ ಖಾದರ್ ಗೆ ನೆಟ್ಟಿಗರು ಹೀಗೇ ಹೇಳೋದಾ

ಕ್ರೀಡಾ ಸಾಮಾಗ್ರಿ ಖರೀದಿಸುವಾಗ ಎಚ್ಚರ ತಪ್ಪಿದ್ರೆ ಆಗುತ್ತೆ ಪಂಗನಾಮ

ಧರ್ಮಸ್ಥಳ ಬುರುಡೆ ರಹಸ್ಯ: ಯಾವಾಗ ಕೈ ಸೇರುತ್ತೆ ಗೊತ್ತಾ ಎಫ್‌ಎಸ್‌ಎಲ್ ವರದಿ

ಮೂಡುಬಿದಿರೆ, ಬಸ್‌ನಲ್ಲಿ ಯುವತಿಯೊಂದಿಗೆ ಅನುಚಿತ ವರ್ತನೆ, ವ್ಯಕ್ತಿ ಅರೆಸ್ಟ್‌

ಧರ್ಮಸ್ಥಳ ಕೇಸ್ ರಹಸ್ಯ ಬಯಲಾಗುತ್ತಿದ್ದಂತೇ ಮಹತ್ವದ ಹೇಳಿಕೆ ಕೊಟ್ಟ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ

ಮುಂದಿನ ಸುದ್ದಿ
Show comments