Webdunia - Bharat's app for daily news and videos

Install App

ವಿಜಯೇಂದ್ರ ವಿರುದ್ಧ ಆರೋಪ ಕಲಹದಲ್ಲೇ ಸದನ ಕಳೆದುಹೋಯ್ತು

Krishnaveni K
ಸೋಮವಾರ, 16 ಡಿಸೆಂಬರ್ 2024 (14:12 IST)
Photo Credit: X
ಬೆಳಗಾವಿ: ಉತ್ತರ ಕರ್ನಾಟಕದ ಸಮಸ್ಯೆ ಆಲಿಸಲೆಂದು ಬೆಳಗಾವಿಯಲ್ಲಿ ಸದನ ಮಾಡಲಾಗುತ್ತದೆ. ಆದರೆ ಬರೀ ಗಲಾಟೆ, ಆರೋಪ, ಪ್ರತ್ಯಾರೋಪಗಳಲ್ಲೇ ಸದನದ ಕಾಲಾವಧಿ ಮುಗಿದು ಹೋಗುತ್ತಿರುವುದು ವಿಪರ್ಯಾಸ.

ಇಂದಿನಿಂದ ಬೆಳಗಾವಿ ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆಯಾಗಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಆದರೆ ಅದೆಲ್ಲಾ ಕೇವಲ ಮಾತುಗಳಿಷ್ಟೇ ಸೀಮಿತವಾಗಿದೆ ಎಂಬುದು ಇಂದಿನ ಕಲಾಪ ನೋಡಿದರೇ ಸ್ಪಷ್ಟವಾಗುತ್ತಿದೆ.

ಇಂದು ಸದನದ ಆರಂಭದಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ಕೇಳಿ ಬಂದಿರುವ 150 ಕೋಟಿ ರೂ. ಆಮಿಷ ಆರೋಪದ ಬಗ್ಗೆಯೇ ಕೆಸರೆರಚಾಟ ನಡೆದಿದೆ. ಬಿಜೆಪಿ ಶಾಸಕರು ವಿಜಯೇಂದ್ರ ಬೆನ್ನಿಗೆ ನಿಂತರೆ ಇತ್ತ ಸಚಿವ ಪ್ರಿಯಾಂಕ್ ಖರ್ಗೆ, ಕೃಷ್ಣ ಭೈರೇಗೌಡ ಮುಂತಾದವರು ವಾಗ್ದಾಳಿ ನಡೆಸುತ್ತಿದ್ದರು. ಈ ಗದ್ದಲದಲ್ಲೇ ಸದಸ್ಯರು ಮುಳುಗಿ ಹೋಗಿದ್ದಾರೆ.

ಕಳೆದ ವಾರವಿಡೀ ಬಿಜೆಪಿ ಸದಸ್ಯರು ಸರ್ಕಾರದ ವಿರುದ್ಧ ಮುಡಾ, ವಕ್ಫ್ ಆಸ್ತಿ ನೋಟಿಫಿಕೇಷನ್ ವಿಚಾರ ಇತ್ಯಾದಿ ವಿಚಾರಗಳಲ್ಲಿ ತರಾಟೆಗೆ ತೆಗೆದುಕೊಂಡಿದ್ದರು. ಇದೀಗ ಸದನ ಆರಂಭವಾದರೂ ಅಸಲಿ ಉದ್ದೇಶ ಈಡೇರುತ್ತಿಲ್ಲ. ಈ ಹಿಂದೆ ಬೆಳಗಾವಿ ಅಧಿವೇಶನ ನಡೆದಿದ್ದಾಗಲೂ ಇದೇ ಕತೆಯಾಗಿತ್ತು ಎಂಬುದು ವಿಪರ್ಯಾಸ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಜಕೀಯ ನಿವೃತ್ತಿ ಬಳಿಕ ಅಮಿತ್ ಶಾ ಏನು ಮಾಡ್ತಾರೆ: ಪ್ಲ್ಯಾನ್ ರಿವೀಲ್

ರಕ್ಷಣಾ ಸಚಿವ ರಾಜನಾಥ್ ಸಿಂಗ್‌ರನ್ನು ಭೇಟಿಯಾದ ಸಿದ್ದರಾಮಯ್ಯ, ಮೈಸೂರು ದಸರಾದ ಬಗ್ಗೆ ಮುಖ್ಯ ಚರ್ಚೆ

70 ಗಂಟೆ ಕೆಲಸ ಮಾಡಲು ರೆಡಿಯಾ: ನಾರಾಯಣ ಮೂರ್ತಿ ಹೇಳಿಕೆಯಿಂದ ಟ್ರೋಲ್‌ಗೊಳಗಾದ ರಿಷಿ ಸುನಕ್‌

ನಾನು ಪಕ್ಷಾಂತರ ಮಾಡಲ್ಲ, ನನ್ನದು ತಟಸ್ಥ ನಿಲುವು: ಜಿಟಿ ದೇವೇಗೌಡ

ದೇಶಕ್ಕೆ ಮೋದಿ, ರಾಜ್ಯಕ್ಕೆ ಕುಮಾರಸ್ವಾಮಿ ಸಿಎಂ ಆಗ್ಬೇಕು: ನಿಖಿಲ್ ಕುಮಾರಸ್ವಾಮಿ

ಮುಂದಿನ ಸುದ್ದಿ
Show comments