ಬೆಳಗಾವಿಯಲ್ಲಿ ಇಂದಿನಿಂದ ಲೆಕ್ಕಕ್ಕೆ ಚಳಿಗಾಲದ ಅಧಿವೇಶನ, ಆದರೆ ನಡೆಯೋದು ಅನುಮಾನ

Krishnaveni K
ಸೋಮವಾರ, 9 ಡಿಸೆಂಬರ್ 2024 (08:47 IST)
ಬೆಳಗಾವಿ: ಬೆಳಗಾವಿಯಲ್ಲಿ ಇಂದಿನಿಂದ ವಿಧಾನಭೆಯ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಆದರೆ ಈ ಅಧಿವೇಶನದ ಕಲಾಪಗಳು ಸುಗಮವಾಗಿ ನಡೆಯುವುದು ಅನುಮಾನವಾಗಿದೆ. ಅದಕ್ಕೆ ಅನೇಕ ಕಾರಣಗಳಿವೆ.

ಉತ್ತರ ಕರ್ನಾಟಕದ ಸಮಸ್ಯೆಗಳು ಕಡೆಗಣಿಸಲ್ಪಡಬಾರದು ಎಂಬ ಕಾರಣಕ್ಕೆ ಚಳಿಗಾಲದ ಅಧಿವೇಶನವನ್ನು ಬೆಳಗಾವಿ ಸೌಧದಲ್ಲಿ ನಡೆಸಲಾಗುತ್ತದೆ. ಆದರೆ ಪ್ರತೀ ಬಾರಿಯೂ ಅಧಿವೇಶನದ ಸಂದರ್ಭದಲ್ಲಿ ಉಪಯುಕ್ತ ಚರ್ಚೆಗಳು, ನಿರ್ಧಾರಗಳಿಗಿಂತ ಗಲಭೆಗಳೇ ಹೆಚ್ಚಾಗುತ್ತವೆ.

ಈ ಅಧಿವೇಶನದಲ್ಲೂ ಗಲಭೆಯೇ ಹೆಚ್ಚಾಗುವ ಲಕ್ಷಣಗಳಿವೆ. ವಕ್ಫ್ ನೋಟಿಫಿಕೇಶನ್ ವಿವಾದ, ಬಾಣಂತಿಯರ ಸಾವು ಪ್ರತಿ ಪಕ್ಷ ಬಿಜೆಪಿಗೆ ಅಸ್ತ್ರವಾಗಿದೆ. ಇದೇ ವಿಚಾರವನ್ನಿಟ್ಟುಕೊಂಡು ಈ ಬಾರಿ ಅಧಿವೇಶನದಲ್ಲಿ ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲಿ ಬಿಜೆಪಿ ತಂತ್ರ ಹೆಣೆದಿದೆ. ಇದಕ್ಕೆ ಜೆಡಿಎಸ್ ಕೂಡಾ ಸಾಥ್ ನೀಡಲಿದೆ.

ವಿಪಕ್ಷಗಳಿಗೆ ಠಕ್ಕರ್ ಕೊಡಲು ಇತ್ತ ಕಾಂಗ್ರೆಸ್ ಕೂಡಾ ಕೊವಿಡ್ ಹಗರಣದ ತನಿಖೆಯ ಬಗ್ಗೆ ಪ್ರಸ್ತಾಪ ಮಾಡಲಿದೆ. ಇದು ಎರಡೂ ಪಕ್ಷಗಳ ನಡುವೆ ಕೋಲಾಹಲಕ್ಕೆ ಕಾರಣವಾಗುವುದಂತೂ ಖಚಿತ. ಇದರಿಂದಾಗಿ ಸುಗಮವಾಗಿ ಕಲಾಪ ನಡೆಯುವುದು ಅನುಮಾನವಾಗಿದ್ದು, ಕೈಗೊಳ್ಳಬೇಕಾದ ಎಷ್ಟೋ ನಿರ್ಣಯಗಳು, ಜನರ ಸಮಸ್ಯೆಗಳು ಸದ್ದಿಲ್ಲದೇ ತೆರೆಮರೆಗೆ ಹೋಗುವ ಸಾಧ್ಯತೆಯೇ ಹೆಚ್ಚು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕರ್ನಾಟಕ ಸಿಎಂ ಬದಲಾವಣೆಗೆ ಬಿಗ್ ಟ್ವಿಸ್ಟ್: ರಾಜೀನಾಮೆಗೆ ಸಿದ್ದರಾಮಯ್ಯ ನಿರ್ಧಾರ?

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮುಂದಿನ ಸುದ್ದಿ
Show comments