Select Your Language

Notifications

webdunia
webdunia
webdunia
webdunia

ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ: ಆರೋಪಿ ಶಾಸಕ ಸುರೇಶ್ ಬಾಬು ಬಿಡುಗಡೆ

ಬೆಲೆಕೇರಿ ಅದಿರು ನಾಪತ್ತೆ ಪ್ರಕರಣ: ಆರೋಪಿ ಶಾಸಕ ಸುರೇಶ್ ಬಾಬು ಬಿಡುಗಡೆ
ಬೆಂಗಳೂರು , ಶುಕ್ರವಾರ, 28 ನವೆಂಬರ್ 2014 (19:38 IST)
ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಆರೋಪಿಯಾಗಿ ಜೈಲುಪಾಲಾಗಿದ್ದ ಕಂಪ್ಲಿ ಶಾಸಕ ಸುರೇಶ್ ಬಾಬು ಅವರು ಇಂದು ನಗರದ ಪರಪ್ಪನ ಅಗ್ರಹಾರ ಜೈಲಿನಿಂದ ಇಂದು ಬಿಡುಗಡೆಗೊಂಡಿದ್ದಾರೆ. 
 
ಬೆಲೆಕೇರಿ ಅದಿರು ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸುರೇಶ್ ಬಾಬು ಅವರನ್ನು 2013ರ ಸೆ.19ರಂದು ಲೋಕಾಯುಕ್ತ ಪೊಲೀಸರು ಬಂಧಿಸಿದ್ದರು. ಬಳಿಕ ನ್ಯಾಯಾಂಗ ಬಂಧನದಲ್ಲಿದ್ದ ಬಾಬು ಅವರನ್ನು ಆರೋಪಿ ಎಂದು ಸಾಬೀತಾದ ಹಿನ್ನೆಲೆಯಲ್ಲಿ ಅಗ್ರಹಾರ ಜೈಲಿಗೆ ಕಳುಹಿಸಲಾಗಿತ್ತು. 
 
ಪ್ರಕರಣಕ್ಕೆ ಸಂಬಂಧಿಸಿದಂತೆ ವಾದ-ವಿವಾದಗಳನ್ನು ಆಲಿಸಿದ್ದ ಸಿಬಿಐ ವಿಶೇಷ ನ್ಯಾಯಾಲಯ, 10 ಲಕ್ಷ ಬಾಂಡ್ ನೀಡುವ ಜೊತೆಗೆ ಇಬ್ಬರ ಶ್ಯೂರುಟಿ ಒದಗಿಸುವಂತೆ ಸೂಚಿಸಿ ಗುರುವಾರ ಜಾಮೀನು ಮಂಜೂರು ಮಾಡಿತ್ತು. ಈ ಹಿನ್ನೆಲೆಯಲ್ಲಿ ಬಾಬು ಅವರನ್ನು ಇಂದು ಬಿಡುಗಡೆಗೊಳಿಸಲಾಗಿದೆ.  

Share this Story:

Follow Webdunia kannada