Webdunia - Bharat's app for daily news and videos

Install App

ಬೆಳಗಾವಿ ಎಸ್‌ಡಿಎ ಸಾವು ಆತ್ಮಹತ್ಯೆಯಲ್ಲ ಕೊಲೆ: ಎಸಿಪಿಗೆ ಬಂದ ಅನಾಮಧೇಯ ಪತ್ರದಲ್ಲಿ ಹೀಗಿದೆ

Sampriya
ಸೋಮವಾರ, 18 ನವೆಂಬರ್ 2024 (18:28 IST)
Photo Courtesy X
ಬೆಳಗಾವಿ: ಇಲ್ಲಿನ ತಹಶೀಲ್ದಾರ್ ಕಚೇರಿ ಎಸ್‌ಡಿಎ ರುದ್ರಣ್ಣ ಯಡವಣ್ಣವರ ಅವರದ್ದು ಆತ್ಮಹತ್ಯೆಯಲ್ಲ, ಕೊಲೆ ಎಂದು ಬರೆದು ಎಸಿಪಿ ಖಡೇಬಜಾರ್‌ ಅವರಿಗೆ ಅನಾಮಧೇಯ ಪತ್ರವೊಂದು ಬಂದಿದೆ.

ಪ್ರಕರಣದ ಆರೋಪಿಗಳಾದ ತಹಶೀಲ್ದಾರ್‌ ಬಸವರಾಜ ನಾಗರಾಳ, ಎಫ್‌ಡಿಎ ಅಶೋಕ ಕಬ್ಬಲಿಗೇರ ಮತ್ತು ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಆಪ್ತ ಸಹಾಯಕ ಸೋಮು ದೊಡವಾಡಿ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರಾದ ಬೆನ್ನಲ್ಲೇ, ಈ ಪತ್ರ ಬಂದಿದೆ.

ಬಿಳಿ ಹಾಳೆಯ ಮೇಲೆ ಟೈಪಿಸಿ ಪ್ರಿಂಟ್ ತೆಗೆದು, ಲಕೋಟೆಯಲ್ಲಿ ಹಾಕಿ ಖಡೇಬಜಾರ್ ಠಾಣೆಗೆ ಪೋಸ್ಟ್ ಮಾಡಲಾಗಿದೆ.

ಇನ್ನೂ ಇದರ ಪ್ರತಿಗಳನ್ನು ರಾಜ್ಯಪಾಲರು, ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷರು, ಪ್ರಾದೇಶಿಕ ಆಯುಕ್ತರು, ಜಿಲ್ಲಾಧಿಕಾರಿ, ನಗರ ಪೊಲೀಸ್ ಆಯುಕ್ತರು ಸೇರಿ ಹಲವರಿಗೆ ಪೋಸ್ಟ್ ಮಾಡಲಾಗಿದೆ ಎಂದೂ ಪತ್ರದಲ್ಲಿ ಪಟ್ಟಿ‌‌ ನೀಡಲಾಗಿದೆ.

‘ರುದ್ರಣ್ಣನದು ಆತ್ಮಹತ್ಯೆ ಎಂದು ಬಿಂಬಿಸಲಾಗುತ್ತಿದೆ. ಆದರೆ ಇದು ಕೊಲೆ.  ತಹಶೀಲ್ದಾರ್‌ ಜೀಪ್‌ನ ಚಾಲಕ ಯಲ್ಲಪ್ಪ ಬಡಸದ ಎಂಬಾತನೇ ಕೊಲೆಯ ಸೂತ್ರಧಾರ. ಆ ವಾಹನ ತಪಾಸಿಸಿದರೆ ಮತ್ತು ಯಲ್ಲಪ್ಪನ ವಿಚಾರಣೆ ಮಾಡಿದರೆ, ಕೊಲೆ ರಹಸ್ಯ ಹೊರಬರುತ್ತದೆ. ಯಲ್ಲಪ್ಪನ ಪತ್ನಿ ಅನೈತಿಕ ಸಂಬಂಧ ಇಟ್ಟುಕೊಂಡು, ಅವರ ಎಲ್ಲ ದುಡ್ಡು ಹೊಡೆದಿದ್ದಾಳೆ. ಮೃತಪಟ್ಟವರಿಗೆ ನ್ಯಾಯ ಸಿಗಬೇಕು. ಪ್ರಕರಣ ಮುಚ್ಚಿ ಹಾಕಬಾರದು’ ಎಂದು ಪತ್ರದಲ್ಲಿ ಉಲ್ಲೇಖಿಸಲಾಗಿದೆ.<>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Kukke Subramanya: ಕರ್ನಾಟಕದ ಶ್ರೀಮಂತ ದೇವಾಲಯ ಕುಕ್ಕೆ ಸುಬ್ರಹ್ಮಣ್ಯ: ಆದಾಯವೆಷ್ಟು ನೋಡಿ

Karnataka Weather: ಬೆಂಗಳೂರಿಗರಿಗೆ ಮುಂದಿನ 5 ದಿನಗಳಿಗೆ ಗುಡ್ ನ್ಯೂಸ್

Karnataka Weather: ಈ ವರ್ಷ ಮಳೆಗಾಲದಲ್ಲಿ ಹೇಗಿರಲಿದೆ ಮಳೆ, ಮುಂಗಾರು ಪ್ರವೇಶ ದಿನಾಂಕ ಪ್ರಕಟ

Karnataka caste census: ರಾಹುಲ್ ಗಾಂಧಿ ಅಂದುಕೊಂಡಷ್ಟು ಸುಲಭವಲ್ಲ ಕರ್ನಾಟಕದಲ್ಲಿ ಜಾತಿಗಣತಿ ಜಾರಿ

Mallikarjun Kharge: ಐಟಿ, ಇಡಿ ಬಿಟ್ಟು ಕಾಂಗ್ರೆಸ್ ಸರ್ಕಾರ ಬೀಳಿಸ್ತಾರೆ ಹುಷಾರ್: ಎಚ್ಚರಿಕೆ ಕೊಟ್ಟ ಖರ್ಗೆ

ಮುಂದಿನ ಸುದ್ದಿ
Show comments