Webdunia - Bharat's app for daily news and videos

Install App

ಕಾಶ್ಮೀರ ಗಡಿಯಲ್ಲಿ ಬೆಳಗಾವಿ ಯೋಧ ಹುತಾತ್ಮ: ಇಂದು ಸ್ವಗ್ರಾಮದಲ್ಲಿ ಅಂತ್ಯಕ್ರಿಯೆ!

Webdunia
ಸೋಮವಾರ, 1 ಆಗಸ್ಟ್ 2016 (12:28 IST)
ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲೂಕಿನ ನಬಾಪೂರ ಗ್ರಾಮದ ಯೋಧ ಸುಭೇದಾರ ಬಸವರಾಜ ಚನ್ನಪ್ಪ ಪಾಟೀಲ್ ಅವರು ಜಮ್ಮು ಕಾಶ್ಮೀರ ಗಡಿ ಭಾಗದಲ್ಲಿ ಕರ್ತವ್ಯ ನಿರ್ವಹಿಸುವಾಗ ನೆಲಬಾಂಬ್ ಸ್ಫೋಟಗೊಂಡು ವೀರಮರಣ ಹೊಂದಿದ್ದಾರೆ.
 
ಗೋಕಾಕ್ ತಾಲೂಕಿನ ನಬಾಪೂರ ಗ್ರಾಮದವರಾದ ಬಸವರಾಜ ಚನ್ನಪ್ಪ ಪಾಟೀಲ್‌ ಅವರು ಪೌಢ ಹಾಗೂ ಪ್ರಾಥಮಿಕ ಶಿಕ್ಷಣವನ್ನು ಖನಗಾಂವ ಗ್ರಾಮದಲ್ಲಿ ಮುಗಿಸಿದ್ದು, ಭಾರತೀಯ ಮದ್ರಾಸ್ ರೆಜಿಮೆಂಟ್ ಸೇನೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು.  
 
ಶುಕ್ರವಾರ ಜಮ್ಮು ಕಾಶ್ಮೀರದ ಗಡಿಯಲ್ಲಿ ಸೇವೆ ಸಲ್ಲಿಸುತ್ತಿರುವ ಸಮಯದಲ್ಲಿ ಆಕಸ್ಮಿಕ ನೆಲಬಾಂಬ್ ಸ್ಫೋಟಗೊಂಡು ವೀರ ಮರಣ ಹೊಂದಿದ್ದಾರೆ. ಮೃತ ಯೋಧನ ಪಾರ್ಥಿವ ಶರೀರ ಗೋವಾ ಮಾರ್ಗವಾಗಿ ಇಂದು ಬೆಳಗ್ಗೆ ಸ್ವಗ್ರಾಮ ನಬಾಪೂರಕ್ಕೆ ಬಂದು ತಲುಪಿದೆ.
 
ಸಕಲ ಸರಕಾರಿ ಗೌರವಗಳೊಂದಿಗೆ ಅಂತ್ಯ ಸಂಸ್ಕಾರ ನೆರವೇರಿಸಲಾಗುವುದು ಎಂದು ಅವರ ಕುಟುಂಬ ವರ್ಗದವರು ಮಾಹಿತಿ ನೀಡಿದ್ದಾರೆ. ಮೃತರು ತಮ್ಮ ಪತ್ನಿ, ತಂದೆ ತಾಯಿ, ಓರ್ವ ಪುತ್ರ, ಪುತ್ರಿಯನ್ನು ಅಗಲಿದ್ದಾರೆ. ವೀರ ಯೋಧನ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆಯಲು ಊರಿನ ಜನರು ಕಾಯುತ್ತಿದ್ದಾರೆ.

ತಾಜಾ ಸುದ್ದಿಗಳಿಗಾಗಿ ವೆಬ್ ದುನಿಯಾ ಮೊಬೈಲ್ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments