Webdunia - Bharat's app for daily news and videos

Install App

ಕನ್ನಡಿಗರ ಬೆಳಗಾವಿ ಪಾಲಿಕೆ ಎಂಇಎಸ್ ಪಾಲು

Webdunia
ಬುಧವಾರ, 1 ಮಾರ್ಚ್ 2017 (18:34 IST)
ಕನ್ನಡ ಸದಸ್ಯರ ಜಗಳದ ಲಾಭ ಪಡೆದ ಮಹಾರಾಷ್ಟ್ರ ಏಕೀಕರಣ ಸಮಿತಿಯ ಸಂಜೋತಾ ಬಾಂದೇಕರ್ ಮೇಯರ್ ಆಗಿ,ಉಪ ಮೇಯರ್ ಆಗಿ ನಾಗೇಶ ಮಂಡೋಳ್ಕರ್ ಆಯ್ಕೆಯಾಗಿದ್ದಾರೆ.
ಎಂಇಎಸ್ ಭಿನ್ನಮತದ ಲಾಭ ಪಡೆಯುವಲ್ಲಿ ಕೂಡಾ ವಿಫಲವಾದ ಕನ್ನಡ ಪರ ಸದಸ್ಯರು, ಒಬ್ಬ ಅಭ್ಯರ್ಥಿಯನ್ನು ಕಣಕ್ಕಿಳಿಸಬೇಕಾಗಿತ್ತು. ಆದರೆ, ಇಬ್ಬರು ಅಭ್ಯರ್ಥಿಗಳು ಕಣಕ್ಕಿಳಿದಿದ್ದರಿಂದ ಸೋಲನುಭವಿಸಬೇಕಾಯಿತು.
 
ಮತದಾನದ ನಂತರ ಮಾತನಾಡಿದ ಸತೀಶ್ ಜಾರಕಿಹೊಳಿ, ನಮ್ಮಲ್ಲಿ ಬಹುಮತವಿಲ್ಲವಾದ್ದರಿಂದ ಮೇಯರ್ ಸ್ಥಾನ ಪಡೆಯುವ ಬಗ್ಗೆ ಹೆಚ್ಚಿನ ಪ್ರಯತ್ನ ಮಾಡಲಿಲ್ಲ ಎಂದು ತಿಳಿಸಿದ್ದಾರೆ.
 
ಮೇಯರ್ ಸ್ಥಾನಕ್ಕೆ ಸಚಿವ ರಮೇಶ್ ಜಾರಕಿಹೊಳಿ ಬಣದಿಂದ ಜಯಶ್ರೀ ಪುಷ್ಪಾ ಹಾಗೂ ಶಾಸಕ ಫಿರೋಜ್ ಸೇಠ್ ಬಣದಿಂದ ಪುಷ್ಪಾ ಪರ್ವತಾರಾವ್ ಸ್ಪರ್ಧಿಸಿದ್ದರು. 
 
ಕನ್ನಡಿಗರಲ್ಲಿ ಭಿನ್ನಮತದಿಂದಾಗಿ ಎಂಇಎಸ್‌ನ ಸಂಜೋತಾ ಬಾಂದೇಕರ್ 32 ಮತ ಪಡೆದು ಮೇಯರ್ ಸ್ಥಾನ ಅಲಂಕರಿಸಿದ್ದರೆ, ಕನ್ನಡ ಪರ ಅಭ್ಯರ್ಥಿಯಾದ ಜಯಶ್ರೀ ಮಾಳಗಿ 17 ಮತ ಪಡೆದಿದ್ದು, ಪುಷ್ಪಾ 10 ಮತ ಗಳಿಸಿ ಸೋಲನುಭವಿಸಿದರು.
 
ಕನ್ನಡ ಪರ ಸದಸ್ಯರ ರಾಜಕೀಯ ತಿಕ್ಕಾಟದಿಂದ ಆಕ್ರೋಶಗೊಂಡ ಕನ್ನಡ ಪರ ಸಂಘಟನೆಗಳು ಪಾಲಿಕೆಯ ಮುಂದೆ ತೀವ್ರ ಪ್ರತಿಭಟನೆ ನಡೆಸಿದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಜಾತಿ ಧರ್ಮ ಯಾವುದೂ ನೋಡಲ್ಲ, ಇದೊಂದು ಮಾತು ಸುಳ್ಳಾದ್ರೆ ವೇದಿಕೆ ಹತ್ತಲ್ಲ: ಸಿದ್ದರಾಮಯ್ಯ

ವಿಮಾನ ದುರಂತವಾದ ಕ್ಷಣದಲ್ಲೇ ನಾಪತ್ತೆಯಾದ ನಿರ್ಮಾಪಕ ಮಹೇಶ್ ಕಲಾವಾಡಿಯಾ ಇನ್ನೂ ಪತ್ತೆಯಾಗಿಲ್ಲ

DC ಅಪಾಯಕಾರಿ ಎಂದು ಘೋಷಿಸಿದ್ದರು,ಇಂದ್ರಾಯಣಿ ನದಿ ಸೇತುವೆ ದುರಂತ ನಡೆದಿದೆ: ಸಿಎಂ ಫಡಣವೀಸ್‌

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ಮುಂದಿನ ಸುದ್ದಿ
Show comments