Webdunia - Bharat's app for daily news and videos

Install App

Belgavi: ಈ ಗ್ಯಾಂಗ್ ರೇಪ್‌ ಕರ್ನಾಟಕದಲ್ಲಿ ನಡೆದಿದೆಯಾ ಎಂದಾಗ ಅಚ್ಚರಿಯಾಗುತ್ತದೆ

Sampriya
ಭಾನುವಾರ, 1 ಜೂನ್ 2025 (17:59 IST)
Photo Credit X
ಬೆಳಗಾವಿ: 15 ವರ್ಷದ ಬಾಲಕಿ ಮೇಲೆ ನಡೆದ ಗ್ಯಾಂಗ್ ರೇಪ್ ಸಂಬಂದ ಮೂವರು ಆರೋಪಿಗಳನ್ನು ಬಂಧಿಸಿದ್ದು, ಕಾನೂನು ಒಳಪಟ್ಟ ಇಬ್ಬರನ್ನು ವಶಕ್ಕೆ ಪಡೆಯಲಾಗಿದೆ. ಪರಾರಿಯಾದ ಮತ್ತೊಬ್ಬ ಆರೋಪಿ ಬಂಧನಕ್ಕೆ ಜಾಲ ಬೀಸಿದ್ದೇವೆ ಎಂದು ನಗರ ಪೊಲೀಸ್‌ ಕಮಿಷನರ್‌ ಭೂಷಣ್‌ ಗುಲಾಬರಾವ್‌ ಬೊರಸೆ ಹೇಳಿದರು.

ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,  ಬಾಲಕಿ ಮೇಲೆ ಅತ್ಯಾಚಾರ ಎಸಗಿದ ಆರೋಪದಡಿ ಎಪಿಎಂಸಿ ಠಾಣೆಯಲ್ಲಿ 6 ಮಂದಿ ವಿರುದ್ಧ ಶನಿವಾರ ಎಫ್‌ಐಆರ್‌ ದಾಖಲಾಗಿತ್ತು. ಪ್ರಕರಣ ದಾಖಲಾದ 24 ಗಂಟೆಯೊಳಗೆ ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಸಂತ್ರಸ್ತೆ ಮತ್ತು ಆರೋಪಿಗಳು ಬೆಳಗಾವಿ ಜಿಲ್ಲೆಯವರೇ ಆಗಿದ್ದಾರೆ’ ಎಂದರು.

ಪ್ರಕರಣ ಹಿನ್ನೆಲೆ: ಬಾಲಕಿಯನ್ನು ಪರಿಚಯಿಸಿಕೊಂಡ ಒಬ್ಬ, ಆಕೆಯ ಜತೆ ಸ್ನೇಹವನ್ನು ಬೆಳೆಸುತ್ತಾನೆ.  ಬಳಿಕ ಆತ ಮತ್ತು ಸ್ನೇಹಿತರು 2024ರ ಡಿಸೆಂಬರ್‌ನಲ್ಲಿ ಪುಸಲಾಯಿಸಿಕೊಂಡು ಹೋಗಿ ಅತ್ಯಾಚಾರ ಮಾಡಿದ್ದಾರೆ. ಅತ್ಯಾಚಾರದ ದೃಶ್ಯವನ್ನು ಆರೋಪಿಗಳು ವಿಡಿಯೊ ರೆಕಾರ್ಡ್ ಮಾಡಿದ್ದಾರೆ. ಅದನ್ನೇ ತೋರಿಸಿ ಬ್ಲ್ಯಾಕ್‌ಮೇಲ್‌ ಮಾಡಿ, 2025ರ ಜನವರಿಯಲ್ಲಿ ಮತ್ತೆ ಮೂವರು ಅತ್ಯಾಚಾರ ಮಾಡಿದ್ದಾರೆ. ಬೇರೆ ಬೇರೆ ಸ್ಥಳಗಳಲ್ಲಿ ಅತ್ಯಾಚಾರ ಮಾಡಲಾಗಿದ್ದು, ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.

‘ಬೆಳಗಾವಿ ತಾಲ್ಲೂಕಿನ ಸಂತಿಬಸ್ತವಾಡದಲ್ಲಿ ಕುರ್‌ಆನ್‌ ಸುಟ್ಟ ಪ್ರಕರಣದ ಸೂಕ್ಷ್ಮತೆ ಅರಿತು, ಅದನ್ನು ಸಿಐಡಿಗೆ ವರ್ಗಾಯಿಸಲಾಗಿದೆ. ಅವರಿಗೆ ತನಿಖೆಗೆ ಸ್ಥಳೀಯ ಪೊಲೀಸರು ಸಹಕಾರ ನೀಡುತ್ತಿದ್ದಾರೆ. ಆರೋಪಿಗಳನ್ನು ಶೀಘ್ರ ಬಂಧಿಸುವ ನಿಟ್ಟಿನಲ್ಲಿ ಪ್ರಯತ್ನ ನಡೆದಿವೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments