Webdunia - Bharat's app for daily news and videos

Install App

ಉದ್ಯೋಗ ಖಾಲಿಯಿದೆ ಎಂದು ನಂಬಿಸಿ ಮೋಸ

Webdunia
ಭಾನುವಾರ, 12 ಸೆಪ್ಟಂಬರ್ 2021 (20:01 IST)
ಮನೆಯಿಂದ ಆನ್‍ಲೈನ್‍ನಲ್ಲೇ ಕಾರ್ಯನಿರ್ವಹಿಸುವುದಾಗಿ (ವರ್ಕ್‍ಫ್ರಂ ಹೋಮ್) ನಂಬಿಸಿ ನಿರುದ್ಯೋಗಿಗಳಿಂದ ದಾಖಲೆ ಪಡೆದು ಅವರದ್ದೇ ಹೆಸರಿನಲ್ಲಿ ಕಂಪನಿ ತೆರೆದು ದುರುಪಯೋಗಪಡಿಸಿಕೊಳ್ಳುತ್ತಿದ್ದ ಇಬ್ಬರು ವಂಚಕರನ್ನು ಉತ್ತರ ವಿಭಾಗದ ಪೆÇಲೀಸರು ಬಂಧಿಸಿದ್ದಾರೆ. 
ತಮಿಳುನಾಡಿನ ಸಂಜೀವ್, ಸೆನ್ನಪ್ಪನ್ ಬಂಧಿತರು. ಆರೋಪಿಗಳ ನಾನಾ ಬ್ಯಾಂಕ್ ಖಾತೆಗಳಿಂದ 3.5 ಕೋಟಿ ರೂ. ವಶಪಡಿಸಿಕೊಳ್ಳಲಾಗಿದೆ ಎಂದು ಪೆÇಲೀಸರು ತಿಳಿಸಿದರು. ಕೃತ್ಯದಲ್ಲಿ ಭಾಗಿಯಾಗಿ ತಲೆ ಮರೆಸಿಕೊಂಡಿರುವ ಚೀನಾ ಮೂಲದ ಹರ್ಮನ್ ಹಾಗೂ ತಮಿಳುನಾಡಿನ ಚಿತ್ರವೇಲು ಎಂಬ ವಂಚಕರ ಪತ್ತೆಗೆ ಪೆÇಲೀಸರು ತೀವ್ರ ಶೋಧ ನಡೆಸುತ್ತಿದ್ದಾರೆ. 
ಡಿಜಿಟಲ್ ಮಾರ್ಕೆಟಿಂಗ್ ನಲ್ಲಿ ಉದ್ಯೋಗ ಖಾಲಿಯಿದೆ. ಮನೆಯಲ್ಲೇ ಕುಳಿತು ಲಕ್ಷ ಲಕ್ಷ ಎಣಿಸುವ ಅದೃಷ್ಟ ನಿಮ್ಮದಾಗಲಿದೆ ಎಂದು ಆರೋಪಿಗಳು ಸಾಮಾಜಿಕ ಜಾಲತಾಣಗಳಲ್ಲಿ ಜಾಹೀರಾತು ನೀಡುತ್ತಿದ್ದರು. ನಿರುದ್ಯೋಗಿಗಳಿಂದ ಆಧಾರ್, ಪಾನ್ ಕಾರ್ಡ್ ಸೇರಿದಂತೆ ಇನ್ನಿತರ ದಾಖಲೆಗಳನ್ನು ಪಡೆದು ನಿರುದ್ಯೋಗಿಗಳ ಹೆಸರಿನಲ್ಲೇ ಕಂಪನಿ ತೆರೆದು ನೂರಾರು ಗ್ರಾಹಕರಿಂದ ಲಕ್ಷಾಂತರ ರೂಪಾಯಿ ಪಡೆದು ವಂಚಿಸುತ್ತಿದ್ದರು ಎಂಬ ಸಂಗತಿ ಪೆÇಲೀಸರಿಂದ ಬೆಳಕಿಗೆ ಬಂದಿದೆ.
ಗ್ರಾಹಕರು ಹಣ ನೀಡುವಂತೆ ತ್ತಾಯಿಸಿದಾಗ ಆರೋಪಿಗಳು ಕಂಪನಿಯನ್ನು ಬಂದ್ ಮಾಡಿದ್ದಾರೆ. ತಮ್ಮ ಮೊಬೈಲ್‍ಗಳನ್ನು ಕೂಡ ಸ್ವಿಚ್‍ಆಫ್ ಮಾಡಿಕೊಂಡಿದ್ದಾರೆ. ಅಷ್ಟೇ ಅಲ್ಲದೇ, ಆರೋಪಿಗಳ ಹೆಸರಿನಲ್ಲಿದ್ದ 11 ಕಂಪನಿಯ ಖಾತೆಗಳಲ್ಲಿನ ಹಣವನ್ನು ವಶಕ್ಕೆ ಪಡೆಯಲಾಗಿದೆ.  ನಾಲ್ಕು ಸಾವಿರ ಮುಗ್ದ ಜನರ ಹೆಸರಿನಲ್ಲಿ ಚೀನಾ ವಂಚಕರು ಕಂಪನಿ ತೆರೆದಿದ್ದಾರೆ ಎನ್ನುವ ಅಂಶ ತನಿಖೆ ವೇಳೆ ಬೆಳಕಿಗೆ ಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments