ಮಾನಸಿಕ ಅಸ್ವಸ್ಥೆಯಾದ್ರೆ ಮುಖ ಮುಚ್ಚಿ, ಗಣೇಶನನ್ನೇ ಅಪವಿತ್ರಗೊಳಿಸುವಷ್ಟು ಬುದ್ಧಿ ಇರುತ್ತಾ

Sampriya
ಭಾನುವಾರ, 21 ಸೆಪ್ಟಂಬರ್ 2025 (15:03 IST)
ಹಾಸನ ಜಿಲ್ಲೆಯ ಬೇಲೂರು ಪಟ್ಟಣದ ಹೃದಯಭಾಗವಾದ ಪುರಸಭೆ ಆವರಣದಲ್ಲಿ ಸ್ಥಾಪಿತವಾದ ಶ್ರೀ ವರಸಿದ್ಧಿ ವಿನಾಯಕ ದೇವಾಲಯದ ಗಣೇಶ ವಿಗ್ರಹಕ್ಕೆ ಮಹಿಳೆಯೊಬ್ಬರು ಚಪ್ಪಲಿ ಹಾರ ಹಾಕಿ, ಹಿಂದೂ ಭಕ್ತರ ಭಾವನೆಗೆ ಧಕ್ಕೆ ತಂದ ಘಟನೆ ವರದಿಯಾಗಿದೆ. 

ಈ ಸಂಬಂಧ ಬಿಜೆಪಿ ನಾಯಕ ಸಿಟಿ ರವಿ ಅವರು ಆಕ್ರೋಶ ಹೊರಹಾಕಿ,  ನಮ್ಮ ಹಿಂದೂ ಸಮಾಜವನ್ನು ಕೆರಳಿಸುವ, ಕೆಣಕಿಸುವ ರೀತಿಯಲ್ಲಿ ಅಪವಿತ್ರಗೊಳಿಸುತ್ತಿರುವುದನ್ನು ನಾವು ಖಂಡಿಸುತ್ತೇವೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.  

ಯಾಕೆಂದರೆ ಹಿಂದೂ ಸಮಾಜವನ್ನೇ ಕೆಣಕುವ ಕೆಲಸವಾಗುತ್ತಿದೆ. ಹಸುವಿನ ಕೆಚ್ಚಲನ್ನು ಕೊಯ್ದು, ಆತ ಮಾನಸಿಕ ಅಸ್ವಸ್ಥ ಎಂದು ಕಥೆ ಕಟ್ಟಲಾಗುತ್ತದೆ. ಅವರ ಮಾನಸಿಕ ಅಸ್ವಸ್ಥನಾ, ಅಥವಾ ನಾಟಕವಾಡುತ್ತಿದ್ದಾನಾ ಎಂದು ಪ್ರಶ್ನೆ ಮಾಡಿದರು. 

ಗಣೇಶೋತ್ಸವದ ಮೆರವಣಿಗೆ ಮೇಲೆ ಕಲ್ಲು ಹೊಡೀತಾರೆ ಆಮೇಲೆ ತಪ್ಪಾಯ್ತು ಕ್ಷಮಿಸಿ ಎಂದು ಕೇಳುತ್ತಾರೆ. ತಮ್ಮ ಮಸೀದಿ ಮುಂದೆ ಬರ್ಬಾದು ಎಂದು ಪೆಟ್ರೋಲ್ ಬಾಂಬ್ ಹಾಕಿ ಕಿಡಿಗೇಡಿಗಳು ಮಾಡಿದ್ದು, ನಾವೆಲ್ಲ ಹಂಗಿಲ್ಲ ಎಂದು ಹೇಳುತ್ತಾರೆ. 

ಇದೀಗ ಈ ವಿಚಾರಕ್ಕೆ ಕಥೆ ಕಟ್ಟುವ ಕೆಲಸವಾಗಬಾರದು. ಈ ಸಂಬಂಧ ಸಮಗ್ರ ತನಿಖೆ ನಡೆಸಲಿ. ಇದೀಗ ಚಪ್ಪಲಿ ಹಾರ ಹಾಕಿರುವವಳು ಮಾನಸಿಕ ಅಸ್ವಸ್ಥೆ ಎಂದು ಹೇಳುತ್ತಾರೆ. ಮಾನಸಿಕ ಅಸ್ವಸ್ಥೆಯಾದ್ರೆ ಆಕೆಗೆ ಮುಖ ಮುಚ್ಚಿಕೊಂಡು ಬರ್ಬೇಕು ಅಂತಾ ಗೊತ್ತಾಗುತ್ತಾ. 

ಗಣೇಶ ವಿಗ್ರಹವನ್ನೇ ಅಪವಿತ್ರ ಗೊಳಿಸಬೇಕೆಂದು ಆಕೆಗೆ ಗೊತ್ತಿದ್ಯಾ. ಇದರ ಉದ್ದೇಶ, ಅಶಾಂತಿ, ಹಿಂದೂ ಮುಸ್ಲಿಂ ನಡುವೆ ಜಗಳ ತರುವುದು, ಈ ಷಡ್ಯಂತ್ರದ ಹಿಂದೆ ರಾಷ್ಟ್ರ ವಿರೋಧಿ ಶಕ್ತಿಗಳು ಕೈಜೋಡಿಸಿದೆ. ನಮ್ಮ ತಾಳ್ಮೆಗೂ ಒಂದು ಮಿತಿಯಿದೆ. ಈ ಸಂಬಂಧ ಸಮಗ್ರ ತನಿಖೆಯಾಗಬೇಕೆಂದು. 



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಲಸ ಮಾಡುವವರಿಗಿಂತ, ಚಾಡಿ ಹೇಳುವವರೆ ಕುಮಾರಸ್ವಾಮಿಗೆ ಪ್ರಿಯ: ಜಿಟಿ ದೇವೇಗೌಡ

ಹಿಂದೂ ವಿರೋಧಿ ಹೇಳಿಕೆ, ಇದೆಲ್ಲ ಅವರುಗಳ ಸೃಷ್ಟಿ: ಮಾಜಿ ಸಚಿವ ಆಂಜನೇಯ ಸ್ಪಷ್ಟನೆ

ದೆಹಲಿ ಸ್ಪೋಟ ಪ್ರಕರಣ: ರೈಲು, ವಿಮಾನ ಪ್ರಯಾಣಿಕರಿಗೆ ಸಲಹೆ ಕೊಟ್ಟ ದೆಹಲಿ ಪೊಲೀಸರು

Delhi Blast: ಪುಲ್ವಾಮಾ ದಾಳಿಯ ಮಾಸ್ಟರ್‌ಮೈಂಡ್‌ನ ಪತ್ನಿಯೊಂದಿಗೆ ಶಾಹೀನ ಲಿಂಕ್

ಕಾಂಗ್ರೆಸ್‌ನ ಗ್ಯಾರಂಟಿ ಯೋಜನೆ ರೈತರ ಬದುಕನ್ನು ಕಷ್ಟವಾಗಿಸಿದೆ: ಪ್ರಹ್ಲಾದ್ ಜೋಶಿ

ಮುಂದಿನ ಸುದ್ದಿ
Show comments