Publish Date: Wed, 20 Jun 2018 (12:25 IST)
Updated Date: Wed, 20 Jun 2018 (12:27 IST)
ಬೆಂಗಳೂರು: ಕಾಂಗ್ರೆಸ್ ನಾಯಕ, ಸಚಿವ ಡಿಕೆ ಶಿವಕುಮಾರ್ ಮೇಲೆ ಐಟಿ ಪ್ರಕರಣ ಭಾರೀ ಸುದ್ದಿಯಾಗುತ್ತಿದ್ದಂತೇ ಪ್ರತಿಕ್ರಿಯಿಸಿರುವ ಬಿಜೆಪಿ ಮಾಜಿ ನಾಯಕ, ಇದೀಗ ಕಾಂಗ್ರೆಸ್ ಸೇರಿಕೊಂಡಿರುವ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.
ಪದೇ ಪದೇ ಕಾಂಗ್ರೆಸ್ ನಾಯಕರನ್ನೇ ಯಾಕೆ ಟಾರ್ಗೆಟ್ ಮಾಡಲಾಗುತ್ತಿದೆ? ಬಿಜೆಪಿ ನಾಯಕರ ಮೇಲೂ ದಾಳಿಗಳು ನಡೆಯಲಿ ಎಂದು ಅವರು ಆಗ್ರಹಿಸಿದ್ದಾರೆ.
‘ಸಂಸದೆ ಶೋಭಾ ಕರಂದ್ಲಾಜೆ ಮನೆ ಮೇಲೆ ಐಟಿ ದಾಳಿ ನಡೆದರೆ ಬಿಎಸ್ ಯಡಿಯೂರಪ್ಪ ಅಕ್ರಮಗಳೆಲ್ಲಾ ಬಯಲಿಗೆ ಬರುತ್ತದೆ’ ಎಂಬ ಇಂಟರೆಸ್ಟಿಂಗ್ ಹೇಳಿಕೆಯನ್ನೂ ಅವರು ಈ ಸಂದರ್ಭದಲ್ಲಿ ನೀಡಿದ್ದಾರೆ.
ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.