Webdunia - Bharat's app for daily news and videos

Install App

ವಯಸ್ಸಾಯ್ತು ಅಂತ ಬಿಎಸ್ ವೈ ಕೆಳಕ್ಕಿಳಿಸಿದ್ರು, ಮೋದಿಗೆ ಸ್ಪೆಷಲ್ಲಾ: ಬೇಳೂರು ಗೋಪಾಲಕೃಷ್ಣ

Krishnaveni K
ಶನಿವಾರ, 12 ಜುಲೈ 2025 (17:01 IST)
ಬೆಂಗಳೂರು: ವಯಸ್ಸಾಯ್ತು ಎಂದು ಬಿಎಸ್ ಯಡಿಯೂರಪ್ಪ ಅವರನ್ನು ಕಣ್ಣೀರು ಹಾಕಿ ಇಳಿಸಿ ಕಳಿಸಿಕೊಟ್ರು. ಆದರೆ ಮೋದಿಜಿಗೆ ಮಾತ್ರ 75 ವರ್ಷ ಆದ್ರೂ ನೀವು ಇಳಿಯಿರಿ ಎಂದು ಯಾರು ಹೇಳೋರಿಲ್ಲ ಎಂದು ಕಾಂಗ್ರೆಸ್ ಶಾಸಕ ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಮಾಡಿದ್ದಾರೆ.

ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಈ ದೇಶದಲ್ಲಿ 75 ವರ್ಷ ಮೇಲ್ಪಟ್ಟವರಿಗೆ ಅಧಿಕಾರ ಇರಬಾರದು ಎಂದಿದ್ದಾರೆ. ಹೀಗಾಗಿ ಮೋದಿಜಿ ಸ್ವಯಂ ಪ್ರೇರಿತವಾಗಿ ತಮ್ಮ ಸ್ಥಾನ ಬಿಟ್ಟು ಹೋಗಬೇಕು. ನಿತಿನ್ ಗಡ್ಕರಿ ಮುಂದಿನ ಪ್ರಧಾನಿಯಾಗಬೇಕು ಎಂದಿದ್ದಾರೆ.

ನಿತಿನ್ ಗಡ್ಕರಿಯವರು ಒಬ್ಬ ಒಳ್ಳೆಯ ವ್ಯಕ್ತಿ. ಎಲ್ಲರೊಂದಿಗೆ ಬೆರೆಯುವ ಸಾಮಾನ್ಯ  ವ್ಯಕ್ತಿ. ಮೊನ್ನೆ ಅವರೇ ಹೇಳಿದ್ದಾರಲ್ವಾ? ಈ ದೇಶದಲ್ಲಿ ಬಡವರು ಬಡವರಾಗಿಯೇ ಇದ್ದಾರೆ, ಶ್ರೀಮಂತರು ಶ್ರೀಮಂತರಾಗಿದ್ದಾರೆ ಎಂದು. ನಿಜವನ್ನೇ ಹೇಳಿದ್ದಾರೆ. ಅಂತಹ ವ್ಯಕ್ತಿ ದೇಶದ ಪ್ರಧಾನಿಯಾಗಬೇಕು ಎಂಬುದು ನಮ್ಮ ಆಸೆ ಎಂದರು.

ಈ ಹಿಂದೆ ಬಿಎಸ್ ವೈಗೆ 75 ವರ್ಷ ವಯಸ್ಸಾಯ್ತು ಎಂದು ಅವರನ್ನು ಬಿಟ್ಟೋಗಿ ಎಂದು ಕಣ್ಣೀರು ಹಾಕಿಸಿ ಇಳಿಸಿದ್ರು. ಈಗ ಮೋದಿಗೆ 75 ಆದಾಗ ಯಾರೂ ಮಾತಾಡಲ್ಲ ಯಾಕೆ? ಅವರೂ ಅಧಿಕಾರ ಬಿಟ್ಟು ಹೋಗ್ಲಿ. ಈ ಹಿಂದೆ ಯಡಿಯೂರಪ್ಪನವರಿಗೆ ಬಿಟ್ಟುಕೊಡಲು ಹೇಳಿದ್ದು ಇದೇ ಮೋದಿ ಅಲ್ವಾ? ಅವರಿಗೆ ಈ ನಿಯಮ ಅನ್ವಯವಾಗಲ್ವಾ ಎಂದು ಬೇಳೂರು ಗೋಪಾಲಕೃಷ್ಣ ವ್ಯಂಗ್ಯ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

2029 ರಲ್ಲಿ ಕೇಂದ್ರದಲ್ಲಿ ನಾವು ಬಂದಾಗ ಬಿಜೆಪಿಯವರನ್ನು ತಿಹಾರ್ ಜೈಲಿಗೆ ಹಾಕ್ತೀವಿ: ಪ್ರದೀಪ್ ಈಶ್ವರ್

ಸಂವಿಧಾನಕ್ಕೆ ಅಪಚಾರ ಮಾಡಿದ ಪಕ್ಷ ಎಂದರೆ ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ

5 ವರ್ಷ ನಾನೇ ಸಿಎಂ ಎಂದ ಸಿದ್ದರಾಮಯ್ಯ: ಲೈಫ್ ಟೈಂ ನಾನೇ ಎನ್ನಿ ಎಂದ ಡಿಕೆಶಿ ಫ್ಯಾನ್ಸ್

ರಾಹುಲ್ ಗಾಂಧಿ ಭೇಟಿಗೆ ಮುನ್ನ ನಾನೇ ಸಿಎಂ ಎಂದು ಘರ್ಜಿಸಿದ ಸಿದ್ದರಾಮಯ್ಯ

ಆ್ಯಪ್ ಮೂಲಕ ಆನ್‌-ಡಿಮ್ಯಾಂಡ್ ಇಂಟ್ರಾಸಿಟಿ ಶಿಪ್ಪಿಂಗ್ ಸೇವೆ ಆರಂಭಿಸಿದ ಡೆಲಿವರಿ

ಮುಂದಿನ ಸುದ್ದಿ
Show comments