Webdunia - Bharat's app for daily news and videos

Install App

ಸಿಗಂದೂರು ಸೇತುವೆ ಜಾಗ ಏನು ಇವರ ಅಪ್ಪಂದಾ, ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡ್ಬೇಕು: ಬೇಳೂರು ಗೋಪಾಲಕೃಷ್ಣ

Krishnaveni K
ಮಂಗಳವಾರ, 15 ಜುಲೈ 2025 (12:24 IST)
ಶಿವಮೊಗ್ಗ: ಸಿಗಂದೂರು ಸೇತುವೆ ಉದ್ಘಾಟನೆಗೆ ಸಿಎಂ ಸಿದ್ದರಾಮಯ್ಯನವರನ್ನು ಮುಂಚಿತವಾಗಿ ಆಹ್ವಾನಿಸಿಲ್ಲ ಎಂಬ ವಿಚಾರ ಈಗ ಕೇಂದ್ರ ಮತ್ತು ರಾಜ್ಯದ ನಡುವಿನ ತಿಕ್ಕಾಟವಾಗಿ ಮಾರ್ಪಟ್ಟಿದೆ.

ಸಿಎಂ ಸಿದ್ದರಾಮಯ್ಯಗೆ ಕೇವಲ ಮೂರು ದಿನ ಮುಂಚಿತವಾಗಿ ಆಹ್ವಾನ ನೀಡಲಾಗಿತ್ತು. ಆದರೆ ಅದಾಗಲೇ ಸಿಎಂ ಸಿದ್ದರಾಮಯ್ಯಗೆ ಇಂಡಿ ತಾಲೂಕಿನಲ್ಲಿ ಒಂದು ಕಾರ್ಯಕ್ರಮ ನಿಗದಿಯಾಗಿತ್ತು. ಹೀಗಾಗಿ ಅವರು ಕಾರ್ಯಕ್ರಮ ಮುಂದೂಡಲು ಮನವಿ ಮಾಡಿದ್ದರು. ಆದರೆ ಇದಕ್ಕೆ ಸೊಪ್ಪು ಹಾಕದೇ ನಿನ್ನೆಯೇ ಸೇತುವೆ ಉದ್ಘಾಟನೆಯಾಗಿತ್ತು. ಹೀಗಾಗಿ ರಾಜ್ಯ ಸರ್ಕಾರದ ಯಾವುದೇ ಸಚಿವರೂ, ಶಾಸಕರೂ ಭಾಗಿಯಾಗದೇ ವಿರೋಧ ವ್ಯಕ್ತಪಡಿಸಿದ್ದಾರೆ.

ಇಂದು ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿರುವ ಶಾಸಕ ಬೇಳೂರು ಗೋಪಾಲಕೃಷ್ಣ, ‘ಈ ಸೇತುವೆಗೆ ಜಾಗ ಕೊಟ್ಟಿದ್ದು ಏನು ಇವರ ಅಪ್ಪಂದಾ? ಸಿಎಂ ಸಿದ್ದರಾಮಯ್ಯಗೆ ಕೇವಲ ಮೂರು ದಿನ ಮುಂಚಿತವಾಗಿ ಕರೆದರೆ ಸಾಕಾ? ಅವರು ಹೇಗ್ರೀ ಬರಕ್ಕಾಗುತ್ತೆ? ನಿಮಗೆ ಜಾಗ ಕೊಡಿಸಲು ನಾವು ಬೇಕು. ಆದರೆ ಉದ್ಘಾಟನೆಗೆ ನಮಗೆ ಸರಿಯಾಗಿ ಆಹ್ವಾನ ಕೊಡಕ್ಕಾಗಲ್ವಾ? ಯಾರೆಲ್ಲಾ ಈ ಸೇತುವೆ ಉದ್ಘಾಟನೆಯಲ್ಲಿ ಭಾಗಿಯಾಗಿದ್ದಾರೆ ಆ ಅಧಿಕಾರಿಗಳನ್ನೂ ಸಸ್ಪೆಂಡ್ ಮಾಡಬೇಕು ಎಂದು ನಾನು ಈವತ್ತು ಆಗ್ರಹಿಸುತ್ತೇನೆ’ ಎಂದಿದ್ದಾರೆ.

ನಿಮ್ಮದೇ ಜಾಗದಲ್ಲಿ ಏನೋ ನಿಮ್ಮದೇ ಕಾರ್ಯಕ್ರಮ ಅಂತಾದ್ರೆ ನೀವು ಏನಾದ್ರೂ ಮಾಡ್ಕೊಳ್ಳಿ. ನಾವು ಕೇಳಲ್ಲ. ನಮ್ಮ ಜಾಗದಲ್ಲಿ ಮಾಡುವಾಗ ನಮಗೆ ಆಹ್ವಾನ ಕೊಡೋದು ಬೇಡ್ವಾ? ಎಂದು ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಗಂದೂರು ಸೇತುವೆ ಉದ್ಘಾಟನೆಗೆ ಕರೆದಿಲ್ಲ: ಮೋದಿಗೆ ಸಿದ್ದರಾಮಯ್ಯ ಬರೆದ ಪತ್ರದಲ್ಲಿ ಏನಿದೆ

ನೀವು ನಂ1 ಮಿನಿಸ್ಟರ್ ಅಂತ ಸುರ್ಜೇವಾಲ ನನ್ನ ಹೊಗಳಿದ್ದಾರೆ: ಜಮೀರ್ ಅಹ್ಮದ್

Gold price: ದಾಖಲೆ ಬರೆದ ಬೆಳ್ಳಿ ಬೆಲೆ, ಚಿನ್ನದ ಬೆಲೆ ಎಷ್ಟಾಗಿದೆ ನೋಡಿ

2003 ರಲ್ಲಿ ನಡೆದಿದ್ದ ಟೆಕಿ ಗಿರೀಶ್ ಹತ್ಯೆ ಕೇಸ್: ಭಾವೀ ಪತಿ ಹತ್ಯೆಗೈದಿದ್ದ ಶುಭಾ ಕೇಸ್ ಗೆ ಟ್ವಿಸ್ಟ್

ಲೋ ಬಿಪಿಯಿಂದ ಹೃದಯಾಘಾತವಾಗುವುದು ನಿಜಾನಾ: ಡಾ ಸಿಎನ್ ಮಂಜುನಾಥ್ ಹೇಳುವುದೇನು

ಮುಂದಿನ ಸುದ್ದಿ
Show comments