Webdunia - Bharat's app for daily news and videos

Install App

ನೆರೆ ಸಂತ್ರಸ್ತರಿಗೆ ಬಿಇಎಲ್ ಉ.ಕ ಬಳಗದಿಂದ ವಿಭಿನ್ನ ರೀತಿಯ ನೆರವು

Webdunia
ಗುರುವಾರ, 22 ಆಗಸ್ಟ್ 2019 (14:19 IST)
ಉತ್ತರ ಕರ್ನಾಟಕದಲ್ಲಿ ತಲೆದೂರಿರುವ ಭೀಕರ ಜಲಪ್ರಳಯ ಹಾಗೂ ನಿರಂತರ ಮಳೆಯಿಂದಾಗಿ ಮನೆ, ಆಸ್ತಿ ಕಳೆದುಕೊಂಡು ನಿರಾಶ್ರಿತರಾದ ಜನತೆಗೆ ಬಿಇಎಲ್ ಉತ್ತರ ಕರ್ನಾಟಕ ಬಳಗ ವಿಭಿನ್ನ ರೀತಿಯಲ್ಲಿ ನೆರವು ನೀಡಲು ಮುಂದಾಗಿದೆ.
ಸುಮಾರು 750 ಬಾಕ್ಸ್‌ಗಳಲ್ಲಿ ದಿನಬಳಕೆಯ ಪದಾರ್ಥ ಸೇರಿದಂತೆ ಒಟ್ಟು 20 ಬಗೆಯ ಆಹಾರ ಸಾಮಗ್ರಿಗಳನ್ನು ಒದಗಿಸುವುದರ ಜೊತೆಗೆ ಮನೆ ಕಳೆದು ಕೊಂಡವರಿಗೆ ಹಣ ನೀಡುವುದರ ಬದಲಾಗಿ ಮನೆ ಪುನರ್ ನಿರ್ಮಾಣಕ್ಕೆ ಅಗತ್ಯವಿರುವ ಇಟ್ಟಿಗೆ ಸಿಮೆಂಟ್, ಕಬ್ಬಿಣ ಇತ್ಯಾದಿ ವಸ್ತುಗಳನ್ನು ನೇರವಾಗಿ ಸಂತ್ರಸ್ತರಿಗೆ ಖರೀದಿಸಿ ಕೊಡುವ ಕಾರ್ಯಕ್ಕೆ ಮುಂದಾಗಿದೆ.
ನೆರೆ ಪೀಡಿತ ಪ್ರದೇಶಗಳಾದ ಬಾಗಲಕೋಟ ಜಿಲ್ಲೆಯ ಮುತ್ತೂರು, ಕಂಕಣವಾಡಿ, ಕಳಕೋಡ, ತಮದಡ್ಡಿ, ಹಿಪ್ಪರಗಿ, ಹಳಿಂಗಳಿ ಜಂಬಗಿ, ರೂಗಿ, ಒಂಟಗೋಡಿ ಹಾಗೂ ಅಥಣಿ ತಾಲೂಕಿನ ಸೇಗುಣಸಿ ಗ್ರಾಮಗಳಲ್ಲಿನ ನೆರೆ ಸಂತ್ರಸ್ತರಿಗೆ “ನೇರ ನೆರವು” ಎನ್ನುವ ಕಾರ್ಯಕ್ರಮದ ಅಡಿಯಲ್ಲಿ ಸಹಾಯ ಹಸ್ತವನ್ನು ಜಾಲಹಳ್ಳಿಯ ಬಿಇಎಲ್‌ನ ಉತ್ತರ ಕರ್ನಾಟಕ ಬಳಗ ಕೈಗೊಂಡಿದೆ.
 ಬಾಕ್ಸ್ ಐಟಂ :
ಸರಿಸುಮಾರು ಒಂದು ತಿಂಗಳಿಗಾಗುವಷ್ಟು  (ಅಕ್ಕಿ, ಗೋದಿ ಹಿಟ್ಟು, ಸಕ್ಕರೆ, ಎಣ್ಣೆ, ಬೆಳೆ, ರವೆ, ಅವಲಕ್ಕಿ, ಚಹಾಪುಡಿ, ಉಪ್ಪು, ಬಿಸ್ಕತ್, ಬ್ಮಾಂಕೆಟ್, ಸಾಬೂನು, ಟೂತ್ ಪೇಸ್ಟ್ ಹಾಗೂ ಬ್ರಷ್, ಮೇಣದ ಬತ್ತಿ, ಬೆಂಕಿ ಕೊಟ್ಟಣ, ಟಾರ್ಚ್, ಬ್ಯಾಟರಿ, ಸ್ಯಾನಿಟರಿ ಪ್ಯಾಡ್, ತಟ್ಟೆ ಮತ್ತು ಬುಟ್ಟಿ) ಪ್ರತಿ ಕುಟುಂಬಕ್ಕೆ 2೦ ಆಹಾರ ಸಾಮಗ್ರಿಗಳನ್ನು ಒದಗಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

‌ಮುಂದಿನ ಒಂದು ವಾರ ರಾಜ್ಯದಲ್ಲಿ ಗುಡುಗು ಸಹಿತ ಮಳೆ: 24 ಜಿಲ್ಲೆಗಳಲ್ಲಿ ಯೆಲ್ಲೊ ಅಲರ್ಟ್‌ ಘೋಷಣೆ

ಐ ಬ್ರೊ ಮಾಡಿಸಿಕೊಳ್ಳಲು ಪಾರ್ಲರ್‌ಗೆ ಹೋಗಿದ್ದ ಪತ್ನಿಯ ಜಡೆಯನ್ನೇ ಕತ್ತರಿಸಿದ ಪಾಪಿ ಪತಿ

ಮಾಜಿ ಸಂಸದ ಪ್ರಜ್ವಲ್ ರೇವಣ್ಣಗೆ ಪರಪ್ಪನ ಅಗ್ರಹಾರ ಫಿಕ್ಸ್‌: ಜಾಮೀನು ಮತ್ತೆ ಅರ್ಜಿ ವಜಾ

Rahul Gandhi: ನೆಹರೂ ತಾತ ನಮ್ಗೆ ರಾಜಕೀಯವೇ ಹೇಳಿ ಕೊಟ್ಟಿಲ್ಲ

ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಗನಸಖಿ ಮೇಲೆ ಅತ್ಯಾಚಾರ, ರೇಪಿಸ್ಟ್‌ ಕೊನೆಗೂ ಅರೆಸ್ಟ್‌

ಮುಂದಿನ ಸುದ್ದಿ
Show comments