ಬೇನಾಮಿ ಆಸ್ತಿ ವಾಸ್ತು ಗುರೂಜಿ ಹತ್ಯೆ

Webdunia
ಗುರುವಾರ, 7 ಜುಲೈ 2022 (17:14 IST)
ನಗರದ ಉಣಕಲ್‌ನ ದಿ ಪ್ರೆಸಿಡೆಂಟ್‌ ಹೋಟೆಲ್‌ನಲ್ಲಿ ಮಂಗಳವಾರ ನಡೆದ ವಾಸ್ತುತಜ್ಞ ಚಂದ್ರಶೇಖರ ಗುರೂಜಿ ಅವರ ಬರ್ಬರ ಹತ್ಯೆಗೆ, ಆರೋಪಿ ಮಹಾಂತೇಶ ಶಿರೂರ ಮಾರಾಟ ಮಾಡಿದ್ದ ಗುರೂಜಿಗೆ ಸೇರಿದ್ದ ₹5 ಕೋಟಿ ಮೌಲ್ಯದ ಆಸ್ತಿಯೇ ಕಾರಣ ಎನ್ನುವ ಅಂಶ ಪೊಲೀಸ್‌ ತನಿಖೆಯಿಂದ ತಿಳಿದುಬಂದಿದೆ.
ಸರಳ ವಾಸ್ತು ಸಂಸ್ಥೆಯಲ್ಲಿ ಕೆಲಸಕ್ಕಿದ್ದ ಇಬ್ಬರೂ, ಸಂಸ್ಥೆ ಹೆಸರಲ್ಲಿ ಹಣ ಪಡೆದು ವಂಚಿಸಿದ್ದರು ಎಂಬ ಕಾರಣಕ್ಕೆ ಗುರೂಜಿ 2016ರಲ್ಲಿ ಇಬ್ಬರನ್ನೂ ಕೆಲಸದಿಂದ ತೆಗೆದಿದ್ದರು. ಆಸ್ತಿ ಹಾಗೂ ಹಣಕಾಸಿನ ವಿಷಯದಲ್ಲಿ ಇಬ್ಬರ ನಡುವೆ ಏರ್ಪಟ್ಟ ಕಲಹವೇ ಹತ್ಯೆಗೆ ಕಾರಣವಾಗಿದೆ ಎಂದು ವಿಚಾರಣೆಯಲ್ಲಿ ತಿಳಿದು ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
 
'ಮಹಾಂತೇಶ 2008ರಿಂದ ಮುಂಬೈನಲ್ಲಿ ಸರಳವಾಸ್ತು ಸಂಸ್ಥೆ ಮುಖ್ಯಸ್ಥನಾಗಿ ಕೆಲಸ ಮಾಡುತ್ತಿದ್ದ. ಗುರೂಜಿ ಆಪ್ತನಾಗಿಯೂ ವಿಶ್ವಾಸ ಗಳಿಸಿದ್ದರಿಂದ, ಮಹಾಂತೇಶ ಮತ್ತು ಅವನ ಪತ್ನಿ ವನಜಾಕ್ಷಿ ಹೆಸರಿನಲ್ಲಿ ಹುಬ್ಬಳ್ಳಿಯ ಕೆಲವೆಡೆ ಗುರೂಜಿ ಆಸ್ತಿ ಮಾಡಿದ್ದರು. ಅಲ್ಲದೆ, ತಮ್ಮ ಹೆಸರಲ್ಲಿ ಮತ್ತು ಅವರ ಆಪ್ತವಲಯದ ಕೆಲವರ ಹೆಸರಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಬೇನಾಮಿ ಆಸ್ತಿ ಮಾಡಿದ್ದಾರೆ ಎಂದು ಆರೋಪಿಗಳು ತಿಳಿಸಿದ್ದಾರೆ. ಎಸಿಪಿ ವಿನೋದ ಮುಕ್ತೇದಾರ ನೇತೃತ್ವದ ತಂಡ ಅವುಗಳ ಪತ್ತೆಗೆ ಮುಂದಾಗಿದೆ' ಎಂದು ಪೊಲೀಸ್‌ ಮೂಲಗಳು ತಿಳಿಸಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇಂದ್ರ ಬಜೆಟ್ ರೈತರ ಆದಾಯವನ್ನು ಹೆಚ್ಚಿಸುತ್ತದೆ: ಪ್ರಧಾನಿ ಮೋದಿ ವಿಶ್ವಾಸ

ರೋಹಿತ್ ಶೆಟ್ಟಿ ಮನೆ ಮೇಲೆ ಗುಂಡಿನ ದಾಳಿ ಬೆನ್ನಲ್ಲೇ ಲಾರೆನ್ಸ್ ಬಿಷ್ಣೋಯ್ ಗ್ಯಾಂಗ್‌ನಿಂದ ಎಚ್ಚರಿಕೆ

ನೆಚ್ಚಿನ ರೆಸಾರ್ಟ್‌ನಲ್ಲೇ ಮಣ್ಣಾದ ಸಿಜೆ ರಾಯ್‌

ಇಂದೋರ್‌ ಮ್ಯಾರಥಾನ್‌ ವೇಳೆ 25 ವರ್ಷದ ಓಟಗಾರ ಹೃದಯಾಘಾತಕ್ಕೆ ಬಲಿ

ಭಾರತದ ರಕ್ಷಣಾ ಸಾಮರ್ಥ್ಯಗಳನ್ನು ಮತ್ತಷ್ಟು ಬಲಗೊಂಡಿದೆ: ರಾಜನಾಥ್ ಸಿಂಗ್

ಮುಂದಿನ ಸುದ್ದಿ
Show comments