ಬೆಂಗಳೂರಿನಲ್ಲಿ ಮುಸ್ಲಿಮರ ಸಮಾವೇಶ: ಧರ್ಮ ಪ್ರಚಾರ ಎಂದ ಬಿಜೆಪಿ, ಹಾಗೇನಿಲ್ಲ ಎಂದ ಸಿದ್ದರಾಮಯ್ಯ

Krishnaveni K
ಗುರುವಾರ, 4 ಸೆಪ್ಟಂಬರ್ 2025 (10:51 IST)

ಬೆಂಗಳೂರು: ನಗರದ ಅರಮನೆ ಮೈದಾನದಲ್ಲಿ ನಾಳೆ ಮುಸ್ಲಿಮ್ ಧರ್ಮಗುರುಗಳು ಭಾಗಿಯಾಗುವ ಮಿಲಾದುನ್ನಬಿ ಸಮಾವೇಶ ಈಗ ವಿವಾದಕ್ಕೆ ಕಾರಣವಾಗಿದೆ. ಸಮಾವೇಶ ಹೆಸರಿನಲ್ಲಿ ಧರ್ಮ ಪ್ರಚಾರ ಇದರ ಉದ್ದೇಶ ಎಂದು ಬಿಜೆಪಿ ಆರೋಪಿಸಿದರೆ ಹಾಗೇನಿಲ್ಲ ಎಂದು ಸಿಎಂ ಸಿದ್ದರಾಮಯ್ಯ ನಿರಾಕರಿಸಿದ್ದಾರೆ.

ಪ್ರವಾಸೀ ವೀಸಾದಡಿಯಲ್ಲಿ ಬರುವ ಧಾರ್ಮಿಕ ಮುಖಂಡರಿಂದ ಧಾರ್ಮಿಕ ಪ್ರಚಾರ ಭಾಷಣ ಮಾಡಿಸುವುದು ಸಮಾವೇಶದ ಉದ್ದೇಶ ಎಂದು ಬಿಜೆಪಿ ತೀವ್ರ ವಿರೋಧ ವ್ಯಕ್ತಪಡಿಸಿದೆ. ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗುತ್ತಿದ್ದಾರೆ. ಇದು ತುಷ್ಠೀಕರಣದ ಪರಮಾವಧಿ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ.

ಆದರೆ ಇದಕ್ಕೆ ಪ್ರತಿಕ್ರಿಯಿಸಿರುವ ಸಿಎಂ ಸಿದ್ದರಾಮಯ್ಯ, ಅರಮನೆ ಮೈದಾನದಲ್ಲಿ ನಡೆಯಲಿರುವ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಪ್ರವಾಸೀ ವೀಸಾ ಪಡೆದು ಧರ್ಮ ಪ್ರಚಾರ ಮಾಡುತ್ತಿದ್ದಾರೆ ಎಂಬ ಆರೋಪ ಸರಿಯಲ್ಲ. ಆ ರೀತಿ ಏನೂ ನಡೆಯುತ್ತಿಲ್ಲ. ನಾನೂ ಆಯೋಜಕರೊಂದಿಗೆ ಮಾತನಾಡಿದ್ದೇನೆ ಎಂದಿದ್ದಾರೆ.

ಇನ್ನು ಗೃಹಸಚಿವ ಜಿ ಪರಮೇಶ್ವರ್ ಕೂಡಾ ಈ ಬಗ್ಗೆ ಪ್ರತಿಕ್ರಿಯಿಸಿದ್ದು ವಿದೇಶೀಯರನ್ನು ಕರೆಯಬೇಡಿ, ಇದರಿಂದ ಕಾನೂನು ಉಲ್ಲಂಘನೆಯಾಗುತ್ತದೆ ಎಚ್ಚರಿಕೆ ನೀಡಿದ್ದೇವೆ. ಒಂದೊಮ್ಮೆ ಯಾರಾದರೂ ಬಂದರೆ ಅವಕಾಶ ಕೊಡಬೇಡಿ ಎಂದಿದ್ದೇವೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಹು ಮತದಾರರ ಗುರುತಿನ ಚೀಟಿ ಪ್ರಕರಣ: ಪ್ರಕಾಶ್ ರಾಜ್‌ ಪರ ಮಹತ್ವದ ಆದೇಶ

ವೋಟ್ ಬ್ಯಾಂಕ್ ಗಾಗಿ ಅಕ್ರಮ ಬಾಂಗ್ಲಾ ನಿವಾಸಿಗರಿಗೆಲ್ಲಾ ಶಾಶ್ವತ ನಿವಾಸಿಗರ ಸರ್ಟಿಫಿಕೇಟ್ ನೀಡಲಾಗ್ತಿದೆ: ಶೋಭಾ ಕರಂದ್ಲಾಜೆ

ಯಡಿಯೂರಪ್ಪ ಮೇಲೆ ಮಗು ಮೇಲೆ ಲೈಂಗಿಕ ದೌರ್ಜನ್ಯ ನಡೆಸಿದ್ರು, ಅವರಿಂದ ನಾವು ಪಾಠ ಕಲೀಬೇಕಾಗಿಲ್ಲ: ಬಿಕೆ ಹರಿಪ್ರಸಾದ್

ಯುದ್ಧ ಇನ್ನೂ ಮುಗಿದಿಲ್ಲ, ಇರಾನ್‌ಗೆ ವಾರ್ನಿಂಗ್ ಕೊಟ್ಟ ಪ್ರಧಾನಿ ನೆತನ್ಯಾಹು

ಕುಡಿದ ಮತ್ತಿನಲ್ಲಿ ಈ ಪಾಪಿ ತಂದೆ ಪುಟ್ಟ ಮಗುವಿನ ಮೇಲೆ ಮಾಡಿದ ಕೆಲಸಕ್ಕೆ ರಕ್ತ ಕುದಿಯುತ್ತದೆ Video

ಮುಂದಿನ ಸುದ್ದಿ
Show comments