Webdunia - Bharat's app for daily news and videos

Install App

ರಾತ್ರಿಯಿಡೀ ಸುರಿದ ಮಳೆಗೆ ಬೆಂಗಳೂರು ಒದ್ದೆ: ಮೊದಲ ಮಳೆಗೇ ಆದ ಅವಾಂತರಗಳೆಷ್ಟು

Krishnaveni K
ಮಂಗಳವಾರ, 14 ಮೇ 2024 (09:43 IST)
ಬೆಂಗಳೂರು: ಬೆಂಗಳೂರಿನಲ್ಲಿ ಮತ್ತೆ ಮಳೆಯ ಅಬ್ಬರ ಜೋರಾಗಿದೆ. ನಿನ್ನೆ ರಾತ್ರಿಯಿಡೀ ಸುರಿದ ಮಳೆಗೆ ಬೆಂಗಳೂರು ಒದ್ದೆಯಾಗಿದೆ. ಇಂದೂ ಕೂಡಾ ಮಳೆ ಮುಂದುವರಿಯುವ ನಿರೀಕ್ಷೆಯಿದೆ.

ನಿನ್ನೆ ಹಗಲು ಸುಮ್ಮನೇ ಕೂತಿದ್ದ ವರುಣ ಕತ್ತಲಾಗುತ್ತಿದ್ದಂತೇ ಸುರಿಯಲು ಆರಂಭಿಸಿದ್ದಾನೆ. ಗುಡುಗು, ಮಿಂಚಿನ ಜೊತೆಗೆ ಭಾರೀ ಮಳೆಯಾಗಿದೆ. ಸತತ ಮಳೆಯಿಂದಾಗಿ ಬೆಂಗಳೂರು ವಾತಾವರಣ ತಂಪಾಗಿದ್ದು ಇಂದು ಸರಾಸರಿ 24 ಡಿಗ್ರಿ ತಾಪಮಾನವಿದೆ. ಮಧ್ಯಾಹ್ನದ ನಂತರ ಮತ್ತೆ ಮಳೆಯಾಗುವ ಸೂಚನೆಯಿದೆ.

ಮುಂದಿನ ಒಂದು ವಾರದವರೆಗೆ ಮತ್ತೆ ಮಳೆಯಾಗುವ ಸಾಧ‍್ಯತೆಯಿದೆ. ಮೊದಲ ಮಳೆಗೇ ಬೆಂಗಳೂರಿನಲ್ಲಿ ಹಲವು ಅವಾಂತರಗಳಾಗಿವೆ. ಹಲವೆಡೆ ಮನೆಗಳಿಗೆ ನೀರು ನುಗ್ಗಿದ್ದು, ಮರ ಧರೆಗುರುಳಿದೆ. ಕೆಲವೆಡೆ ಅಂಡರ್ ಪಾಸ್ ಗಳಲ್ಲಿ ನೀರು ನಿಂತು ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ.

ಮಳೆಯ ಅವಾಂತರಗಳನ್ನು ತಪ್ಪಿಸಲು ಬಿಬಿಎಂಪಿ ಸಭೆ ನಡೆಸಿ ಮಳೆ ನೀರಿನ ನಿರ್ವಹಣೆ, ಮಳೆಗಾಲಕ್ಕೆ ಕೈಗೊಳ್ಳಬೇಕಾದ ಸಿದ್ಧತೆಗಳ ಬಗ್ಗೆ ಚರ್ಚೆ ನಡೆಸಿದೆ. ಪ್ರತೀ ಬಾರಿಯೂ ಮಳೆ ಬಂದಾಗ ನೀರು ನುಗ್ಗಿ ಬಿಬಿಎಂಪಿಗೆ ಜನ ಹಿಡಿಶಾಪ ಹಾಕುತ್ತಲೇ ಇರುತ್ತಾರೆ. ಈ ಬಾರಿಯಾದರೂ ಬಿಬಿಎಂಪಿ ಮಳೆ ನಿರ್ವಹಣೆಗೆ ತಕ್ಕ ಕ್ರಮ ಕೈಗೊಳ್ಳಲಿ ಎಂಬುದು ಜನರ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments