ನಿಮ್ಮ ಮಗನೇ ಚಿನ್ನ ಕದ್ದಿದ್ದು ಎಂದಿದ್ದಕ್ಕೆ ಜೀವನೇ ತೆಗೆದ್ಬಿಟ್ಟ

Sampriya
ಗುರುವಾರ, 30 ಅಕ್ಟೋಬರ್ 2025 (18:00 IST)
ಬೆಂಗಳೂರು: ಹೆತ್ತಮ್ಮನ ಒಡವೆಯನ್ನು ಕದ್ದಿದ್ದ ವಿಚಾರವನ್ನು ಬಾಯ್ಬಿಟ್ಟಿದ್ದಕ್ಕೆ  ಸ್ನೇಹಿತನನ್ನು ಕೊಂದಿರುವ ಆಘಾತಕಾರಿ ಘಟನೆ ಬೆಂಗಳೂರಿನ ಕೋಣನಕುಂಟೆಯಲ್ಲಿ ನಡೆದಿದೆ.

ಹತ್ಯೆಯಾದ ಸ್ನೇಹಿತನನ್ನು ರಾಹುಲ್‌ ಎಂದು ಗುರುತಿಸಲಾಗಿದೆ.  ಕೊಲೆ ಆರೋಪಿಯನ್ನು ಪ್ರೀತಂ ಎಂದು ಗುರುತಿಸಲಾಗಿದೆ. ಒಬ್ಬ ಇಂಜಿನಿಯರಿಂಗ್ ಓದುತ್ತಿದ್ರೆ, ಮತ್ತೊಬ್ಬ ಪಿಯುಸಿ ಡ್ರಾಪ್‌ಔಟ್ ಆಗಿದ್ದ. ಕೋಣನಕುಂಟೆಯ ಕೃಷ್ಷಪ್ಪ ಲೇಔಟ್‌ನಲ್ಲಿ ಪ್ರೀತಂ ಮನೆಯಿದೆ. 

ರಾಹುಲ್, ಪ್ರೀತಂ ಮನೆಗೆ ಬಂದು ಊಟ ಮಾಡಿ ಸಮಯವನ್ನು ಕಳೆಯುತ್ತಿದ್ದ. 25 ರಂದು ಮನೆಯಲ್ಲಿ ಪ್ರೀತಂನ ತಾಯಿಯ ಚಿನ್ನದ ಒಡವೆಗಳು ಕಳ್ಳತನವಾಗಿದೆ. ಮನೆಯಲ್ಲಿ ಎಷ್ಟೇ ಹುಡುಕಿದರೂ ಸಿಕ್ಕಿರಲಿಲ್ಲ. 

ಈ ಸಂದರ್ಭದಲ್ಲಿ ಒಬ್ಬರು ಮತ್ತೊಬ್ಬರ ಮೇಲೆ ಆರೋಪ ಮಾಡಿದ್ದಾರೆ. ಪ್ರೀತಂನ ಬ್ಯಾಗ್‌ನಲ್ಲಿ ಒಡವೆಗಳನ್ನು ನೋಡಿದ ರಾಹುಲ್‌, ಆತನ ತಾಯಿಗೆ ಹೇಳಿದ್ದಾನೆ. ಇದರಿಂದ ಕೋಪಗೊಂಡ ಪ್ರೀತಂ ನಿನ್ನ ಬಳಿ ಮಾತನಾಡಬೇಕು ಎಂದು ರಾಹುಲ್‌ನ ಕರೆಸಿಕೊಂಡು ಜಗಳ ಮಾಡಿ ಚಾಕುವಿನಿಂದ ಇರಿದಿದ್ದಾನೆ. 

ಜೊತೆಯಲ್ಲಿ ಬಂದಿದ್ದ ಸ್ನೇಹಿತರು ಗಾಯಾಳುವನ್ನು ಮಣಿಪಾಲ ಆಸ್ಪತ್ರೆಗೆ ಸೇರಿಸಿದ್ದಾರೆ. ಚಿಕಿತ್ಸೆ ಫಲಕಾರಿಯಾಗದೆ ರಾಹುಲ್ ಮೃತಪಟ್ಟಿದ್ದಾನೆ. ಘಟನೆ ಸಂಬಂಧ ಕೋಣನಕುಂಟೆ ಠಾಣೆಯಲ್ಲಿ ‌ದೂರು ದಾಖಲಾಗಿದ್ದು, ಆರೋಪಿಯನ್ನು ವಶಕ್ಕೆ ‌ಪಡದಿದ್ದಾರೆ.

ತನ್ನ ಮನೆಯಲ್ಲಿ ತಾನೇ ಒಡವೆಗಳನ್ನು ಕಳ್ಳತನ ಮಾಡಿದ್ದ ಪ್ರೀತಂ ಸಿಕ್ಕಿ ಹಾಕಿಕೊಂಡಿದ್ದಲ್ಲದೇ, ಈ ವಿಚಾರವನ್ನು ಅಮ್ಮನ ಬಳಿ ಮತ್ತು ಸ್ನೇಹಿತರ ಬಳಿ ಹೇಳಿ ಮರ್ಯಾದೆ ತೆಗೆದಿದ್ದಾನೆ ಎಂದು ಕೋಪಗೊಂಡು ರಾಹುಲ್‌ನ ಕೊಲೆ ಮಾಡಿದ್ದಾನೆ. <>

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಗಳ ಶವ ಮುಂದಿಟ್ಟು ಲಂಚಕ್ಕೆ ಬೇಡಿಕೆ: ತಂದೆಯ ಭಾವುಕ ಪೋಸ್ಟ್ ಬೆನ್ನಲ್ಲೇ ಪೊಲೀಸರಿಗೆ ಶಾಕ್‌

ಡೆಹ್ರಾಡೂನ್‌ನಲ್ಲಿ ಮೂರು ಆಭರಣ ಬಿಟ್ಟು ಬೇರೆ ಧರಿಸಿದ್ರೆ ಬೀಳುತ್ತೆ ₹50ಸಾವಿರ ದಂಡ

ಬಿಜೆಪಿ ಶಾಸಕ ರವಿಕುಮಾರ್ ಸಿಎಂ ಕಾರಿನಲ್ಲಿ ಇದ್ದಿದ್ದು ಯಾಕೆ: ನಿಜ ಕಾರಣ ಬಯಲು

INDW vs AUSW: ಪಂದ್ಯಾಟದ ವೇಳೇ ಯಾಕೆ ಕಪ್ಪು ಪಟ್ಟಿ ಕಟ್ಟಿದ ಆಟಗಾರ್ತಿಯರು

ಅನುಭವವಿಲ್ಲದ ಆ ಹುಡುಗ ಇನ್ನೂ ಎಳಸು: ಡಿಕೆ ಶಿವಕುಮಾರ್ ಕಿಡಿ

ಮುಂದಿನ ಸುದ್ದಿ
Show comments