ಅಖಾಡಕ್ಕಿಳಿಯಲು ಸಿದ್ಧವಾದ ಕೋಣಗಳು: ಬೆಂಗಳೂರಿನಲ್ಲಿ ಕಂಬಳ ನೋಡಲು ರೆಡಿನಾ?

Webdunia
ಶುಕ್ರವಾರ, 24 ನವೆಂಬರ್ 2023 (10:40 IST)
Photo Courtesy: Twitter
ಬೆಂಗಳೂರು: ಕರಾವಳಿಯಲ್ಲಿ ಜನಪ್ರಿಯವಾಗಿರುವ ಗ್ರಾಮೀಣ ಕ್ರೀಡೆ, ಕಲೆ ಕಂಬಳ ಇದೀಗ ಬೆಂಗಳೂರಿಗೆ ಬಂದಿದೆ. ಬೆಂಗಳೂರು ಕಂಬಳ ಉತ್ಸವಕ್ಕೆ ಚಾಲನೆ ಸಿಕ್ಕಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಕರಾವಳಿಯ ವೈಭೋಗ ವೀಕ್ಷಿಸಬಹುದು.

ನಿನ್ನೆ ಕಂಬಳ ಕೋಣಗಳು ಮಂಗಳೂರು ಭಾಗದಿಂದ ಬೆಂಗಳೂರಿಗೆ ಬಂದಿದ್ದು, ಕುದಿ ಕಂಬಳಕ್ಕೆ ನಿನ್ನೆಯೇ ಚಾಲನೆ ನೀಡಲಾಗಿದೆ. ನಾಳೆ ಮತ್ತು ನಾಡಿದ್ದು ಅಧಿಕೃತವಾಗಿ ಕಂಬಳ ಉತ್ಸವ ನಡೆಯಲಿದೆ. ನಾಳೆ ಬೆಳಿಗ್ಗೆ 10.30 ಕ್ಕೆ ಕಂಬಳ ಉತ್ಸವ ಉದ್ಘಾಟನಾ ಸಮಾರಂಭ ನಡೆಯಲಿದೆ. ಅದಾದ ಬಳಿಕ ಸಂಜೆ ನಿಜವಾದ ಕಂಬಳ ಓಟ ವೀಕ್ಷಿಸಬಹುದು. ಏಕಕಾಲಕ್ಕೆ 7 ಸಾವಿರ ಮಂದಿ ಕಂಬಳ ವೀಕ್ಷಿಸಲು ಗ್ಯಾಲರಿ ವ್ಯವಸ್ಥೆ ಮಾಡಲಾಗಿದೆ.  

ಶನಿವಾರ ಸಂಜೆ 5.30 ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಆಗಮಿಸಲಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್, ಅರ್ಜುನ್ ಜನ್ಯಾ ತಂಡದಿಂದ ಸಂಗೀತ ಸಂಜೆ ಕಾರ್ಯಕ್ರಮಗಳಿವೆ. ಅವರಲ್ಲದೆ, ಸ್ಯಾಂಡಲ್ ವುಡ್ ನ ಘಟಾನುಘಟಿ ಕಲಾವಿದರು, ಕರಾವಳಿ ಮೂಲಕ ನಟಿಯರಾದ ಅನುಷ್ಕಾ ಶೆಟ್ಟಿ, ಶಿಲ್ಪಾ ಶೆಟ್ಟಿ ಮುಂತಾದವರು ಭಾಗಿಯಾಗುವ ನಿರೀಕ್ಷೆಯಿದೆ.

ನಾಳೆ ಮಧ್ಯರಾತ್ರಿಯವರೆಗೂ ಕಂಬಳ ನೋಡಬಹುದು. ಭಾನುವಾರವೂ ಕಂಬಳ ವೀಕ್ಷಿಸುವ ಯೋಗವಿದೆ. ಬೆಂಗಳೂರು ಕಂಬಳಕ್ಕೆ ಸುಮಾರು 7-8 ಲಕ್ಷ ಮಂದಿ ಆಗಮಿಸುವ ಸಾಧ‍್ಯತೆಯಿದೆ. ಕಂಬಳದ ಜೊತೆಗೆ ಕರಾವಳಿಯ ತಿಂಡಿ, ಸಾಂಸ್ಕೃತಿಕತೆ ಸವಿಯುವ ಯೋಗ ನಿಮ್ಮದಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡುವವರೆಗೂ ಹೋರಾಟ: ಬಿ.ಕೆ.ಹರಿಪ್ರಸಾದ್

ಜಂತರ್ ಮಂತರ್‌ನಲ್ಲಿನ ಕ್ರಮ ಪ್ರಜಾಪ್ರಭುತ್ವಕ್ಕೆ ಕಪ್ಪು ಚುಕ್ಕೆ: ಕೇಂದ್ರದ ವಿರುದ್ಧದ ಖರ್ಗೆ ಗರಂ

ಜೈಶ್ ಎ ಮೊಹಮ್ಮದ್ ಸಂಘಟನೆ ಜತೆ ನಂಟು, ಬಂಧಿತರ ಸಂಖ್ಯೆ 13ಕ್ಕೆ ಏರಿಕೆ

ಬಟ್ಟೆ ಬಿಚ್ಚಿ ಸಹಕಾರ ಕೊಡಿ, ಇಲ್ಲದಿದ್ದರೆ 500 ರೂ ಕೊಟ್ಟು ಹೋಗ್ತಾ ಇರಿ: ಶಿಕ್ಷಕಿಯ ಆರ್ಡರ್ ಗೆ ಬಾಲಕಿಯರು ಶಾಕ್ video

Gold Price today: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಮುಂದಿನ ಸುದ್ದಿ
Show comments