Webdunia - Bharat's app for daily news and videos

Install App

ಅಲ್‌ಕೈದಾದೊಂದಿಗೆ ಸಂಬಂಧ: ಬೆಂಗಳೂರು ಶಿಕ್ಷಕನ ಬಂಧನ

Webdunia
ಶುಕ್ರವಾರ, 8 ಜನವರಿ 2016 (15:41 IST)
ಜಾಗತಿಕ ಉಗ್ರಗಾಮಿ ಸಂಘಟನೆಯಾದ ಅಲ್‌ಕೈದಾದೊಂದಿಗೆ ಸಂಪರ್ಕ ಹೊಂದಿದ್ದಾನೆ ಎಂದು ಆರೋಪಿಸಿ ಬೆಂಗಳೂರು ಮೂಲದ ವ್ಯಕ್ತಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ.
 
ಬೆಂಗಳೂರಿನಲ್ಲಿ ಮದರಸಾದಲ್ಲಿ ಶಿಕ್ಷಕನಾಗಿರುವ ಮೌಲಾನಾ ಅನ್ಜರ್ ಶಾಹ್ ಬಾಂಗ್ಲಾ ಮೂಲದ ಉಗ್ರರಿಗೆ ನೆರವಾದ ಆರೋಪಿದ ಮೇಲೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.
 
ಪಶ್ಚಿಮ ಬಂಗಾಳದ ಮಾಲ್ಡಾದಲ್ಲಿ ನಡೆದ ಕೋಮುಗಲಭೆಯಲ್ಲಿ ಆರೋಪಿ ಭಾಗಿಯಾಗಿರುವ ಶಂಕೆಯ ಆಧಾರದ ಮೇಲೆ ಪೊಲೀಸರು ವಶಕ್ಕೆ ತೆಗೆದುಕೊಂಡಿದ್ದಾರೆ.  ಮಾಲ್ಡಾದಲ್ಲಿ ಸುಮಾರು ಒಂದು ಲಕ್ಷ ಪ್ರತಿಭಟನೆಕಾರರು ಪೊಲೀಸ್ ಠಾಣೆಯ ಮೇಲೆ ದಾಳಿ ನಡೆಸಿ ಹಲವಾರು ವಾಹನಗಳನ್ನು ಸುಟ್ಟುಹಾಕಿದ್ದರು. 
 
ಕಳೆದ ತಿಂಗಳು ಶಂಕಿತ  ಉಗ್ರ ಮೌಲಾನಾ ಅನ್ಜರ್ ಶಾಹ್ ಅಲ್‌ಕೈದಾ ಉಗ್ರರನ್ನು ಭೇಟಿ ಮಾಡಿರುವ ಬಗ್ಗೆ ಖಚಿತ ಮಾಹಿತಿಯಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
 
ಅನ್ಜರ್ ಶಾನನ್ನು ಬುಧವಾರದಂದು ರಾತ್ರಿ ಬಂಧಿಸಿ ನವದೆಹಲಿಗೆ ಕರೆ ತರಲಾಗಿದ್ದು, ಅವರನ್ನು ದೆಹಲಿಯ ವಿಶೇಷ ವಿಭಾಗಕ್ಕೆ ಒಪ್ಪಿಸಲಾಗುವುದು ಎಂದು ಮೂಲಗಳು ತಿಳಿಸಿವೆ.
 
ಆರೋಪಿ  ಮೌಲಾನಾ ಅನ್ಜರ್ ಶಾಹ್‌ನನ್ನು ನ್ಯಾಯಾಲಯ ಜನೆವರಿ 20 ರವರೆಗೆ ಪೊಲೀಸ್ ವಶಕ್ಕೆ ಒಪ್ಪಿಸಿದೆ  ಎಂದು ಮೂಲಗಳು ತಿಳಿಸಿವೆ.
 

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

Show comments