Webdunia - Bharat's app for daily news and videos

Install App

ಬೆಂಗಳೂರು-ಮೈಸೂರು ರಸ್ತೆ ‘ಪ್ರತಾಪ’ ಕೊಚ್ಚಿಕೊಳ್ಳುವುದಲ್ಲ: ಸಿಂಹಗೆ ಕುಟುಕಿದ ಹಳ್ಳಿಹಕ್ಕಿ

Webdunia
ಭಾನುವಾರ, 22 ಆಗಸ್ಟ್ 2021 (14:16 IST)
ಬೆಂಗಳೂರು ಮತ್ತು ಮೈಸೂರು 6 ಪಥ ರ ಸ್ತೆ ಅಭಿವೃದ್ಧಿ ಸಂಸದ ಪ್ರತಾಪ್ ಸಿಂಹ ಅವರ ಸಾಧನೆಯಲ್ಲ. ಇದು ಹಿಂದೆ ಇದ್ದ ಯುಪಿಎ ಮತ್ತು ಸಿದ್ದರಾಮಯ್ಯ ಅವರ ಸಾಧನೆ ಎಂದು ಎಚ್.ವಿಶ್ವನಾಥ್ ಕುಟುಕಿದ್ದಾರೆ.
ಮೈಸೂರಿನಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮ್ಮದೇ ಪಕ್ಷದ ಸಂಸದ ಪ್ರತಾಪ್ ಸಿಂಹ ವಿರುದ್ಧ ಟೀಕಾಪ್ರಹಾರ ನಡೆಸಿದರು.
ಪ್ರತಾಪ್ ಸಿಂಹ ಹೇಳಿಕೆ ಸರಿ ಅಲ್ಲ. ನಾನೇ ಮಾಡಿಬಿಟ್ಟೆ ಅನ್ನೋದು ಸರಿ ಅಲ್ಲ. ಪಾಪ ಹೆಣ್ಣು ಮಗಳು ಹೇಳಿದ್ದು ಸರಿ ಇದೆ. ಪ್ರತಾಪ್ ಸಿಂಹ ನಾನು‌ ಮಾಡಿದೆ ನಾನು ಕಡಿದು ಹಾಕಿದೆ ಅಂತ ಹೇಳುವುದು ಸರಿ ಅಲ್ಲ. ಈ ಯೋಜನೆ 10-12 ವರ್ಷದ ಹಿಂದೆ ಆಗಿದ್ದು ಎಂದು ವಿಶ್ವನಾಥ್ ವಿವರಿಸಿದರು.
ಸುಳ್ಳು ಎಷ್ಟು ದಿನ ಅಂತಾ ಹೇಳುತ್ತೀರಾ? ಸುಳ್ಳು ಹೇಳಬಾರದು. ಇದು ನಾನು ಧೃವನಾರಾಯಣ್ ಮತ್ತು ಮಾಜಿ ಸಂಸದೆ ರಮ್ಯಾ ಸಂಸದರಾಗಿದ್ದಾಗ ಆಗಿದ್ದಾಗ ಆರಂಭವಾದ ಕೆಲಸ. ನೀವು ಹೊಸದಾಗಿ ತಂದಿದ್ದರೆ ಬೇಕಾದರೆ ಹೇಳಿ ಎಂದು ವಿಶ್ವನಾಥ್ ತಿರುಗೇಟು ನೀಡಿದರು.
ಉಂಡುವಾಡಿ ಕುಡಿಯುವ ನೀರು ಯೋಜನೆ ಕೂಡಾ ಜಿಟಿ ದೇವೇಗೌಡ ಸಾಧನೆ ಅಲ್ಲ. ಅದನ್ನು ನಾನು ಮಾಡಿದ್ದು. ನೀವು ಎಲ್ಲಿದ್ದೀರಿ ಮಿಸ್ಟರ್ ಜಿಟಿ ದೇವೇಗೌಡ? ಎಂದು ವಿಶ್ವನಾಥ್ ಪ್ರಶ್ನಿಸಿದರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments