Webdunia - Bharat's app for daily news and videos

Install App

ಬೆಂಕಿಗೆ ಬೆಚ್ಚಿ ಬಿದ್ದ ಬೆಂಗಳೂರು ಅಧಿಕಾರಿಗಳು

Webdunia
ಬುಧವಾರ, 21 ಆಗಸ್ಟ್ 2019 (20:05 IST)
ಬೆಂಕಿಗೆ ಬೆಂಗಳೂರು ಅಧಿಕಾರಿಗಳು ಬೆಚ್ಚಿಬಿದ್ದು ದಿಕ್ಕಾಪಾಲಾಗಿ ಓಡಿದ ಘಟನೆ ನಡೆದಿದೆ.

ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಆಗಿ ಬಿಬಿಎಂಪಿ ಸಭಾಂಗಣದ ಕಚೇರಿಯಲ್ಲಿದ್ದ ಉಪಕರಣಗಳು ಸಂಪೂರ್ಣ ‌ಸುಟ್ಟು‌ ಭಸ್ಮವಾಗಿರುವಂತಹ ಘಟನೆ ಬೆಂಗಳೂರು ‌ಬೊಮ್ಮನಹಳ್ಳಿ ಬಿಬಿಎಂಪಿ ಕಚೇರಿಯ ಸಭಾಂಗಣದಲ್ಲಿ ನಡೆದಿದೆ.

ಸಭಾಂಗಣದಲ್ಲಿ‌ ಸತತ ಸಭೆಗಳಿದ್ದ ಕಾರಣ ಸಭೆಯಲ್ಲಿ ಮೈಕ್ ಹಾಗು‌ ಎಸಿ ಬಳಕೆಯನ್ನು ಮುಂಜಾನೆಯಿಂದ ಮಾಡುತ್ತಿದ್ದು ಪದೇ ಪದೇ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದೆ. ಇದರಿಂದಾಗಿ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡು ಸಭಾಂಗಣ ತುಂಬಾ ಬೆಂಕಿ ಆವರಿಸಿಕೊಂಡಿದೆ. ಬೆಂಕಿ ಕಾಣಿಸಿಕೊಂಡ ಕೂಡಲೇ ಸಭೆಯಲ್ಲಿದ್ದ ಅಧಿಕಾರಿಗಳು ಹಾಗು‌ ಸಿಬ್ಬಂದಿ ಗಾಬರಿಗೊಂಡು‌ ಸಭಾಂಗಣದಿಂದ ಹೊರಗೆ ಓಡಿ ಹೋದರು.

ನಂತರ ಬಿಬಿಎಂಪಿಯಲ್ಲಿನ ಸಂಪೂರ್ಣ ವಿದ್ಯುತ್ ಕಟ್ ಮಾಡಿ ಹೊತ್ತಿ ಉರಿಯುತ್ತಿದ್ದು ಬೆಂಕಿಯನ್ನು ಆರಿಸುವಂತ ಉಪಕರಣದಿಂದ ಬೆಂಕಿಯನ್ನು ನಂದಿಸಿದ್ದಾರೆ. ಇನ್ನು ಘಟನೆಯಲ್ಲಿ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಉಪಕರಣಗಳು ಹಾಗು ದಾಖಲೆಗಳು ಸಂಪೂರ್ಣ ‌ಸುಟ್ಟು ಭಸ್ಮವಾಗಿದೆ ಎಂಬ ಮಾತು‌ ಕೇಳಿ ಬರುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ‌ದಳ ಸಿಬ್ಬಂದಿ ಭೇಟಿ‌ ನೀಡಿ‌ ಪರಿಶೀಲನೆ ‌ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments