Webdunia - Bharat's app for daily news and videos

Install App

ವಿಚಾರಣೆಗೆ ಹಾಜರಾಗಲು ಯಡಿಯೂರಪ್ಪಗೆ ಪೊಲೀಸರಿಂದ ನೊಟಿಸ್ ಜಾರಿ

Webdunia
ಶುಕ್ರವಾರ, 22 ಸೆಪ್ಟಂಬರ್ 2017 (17:43 IST)
ಶಿವರಾಮ ಕಾರಂತ ಬಡಾವಣೆ ಡಿನೋಟಿಫಿಕೇಶನ್ ಪ್ರಕರಣದಲ್ಲಿ ಹೈಕೋರ್ಟ್`ನಿಂದ ಕೊಂಚ ರಿಲೀಫ್ ಪಡೆದಿದದ್ದ ಮಾಜಿ ಸಿಎಂ ಯಡಿಯೂರಪ್ಪನವರಿಗೆ ಮತ್ತೊಂದು ಸಂಕಟ ಎದುರಾಗಿದೆ. ಈಶ್ವರಪ್ಪ ಪಿಎ ವಿನಯ್ ಅಪಹರಣ ಯತ್ನ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಂದ ನೋಟಿಸ್ ಜಾರಿಯಾಗಿದೆ.

 ಮಲ್ಲೇಶ್ವರಂ ಎಸಿಪಿ ಎ.ಆರ್. ಬಡಿಗೇರ್`ರಿಂದ ಬಿ.ಎಸ್. ಯಡಿಯೂರಪ್ಪನವರಿಗೆ ನೋಟಿಸ್ ಜಾರಿಯಾಗಿದ್ದು, ಸೆಪ್ಟೆಂಬರ್ 28ರಂದು ಬೆಳಗ್ಗೆ 10.30ಕ್ಕೆ ಖುದ್ದು ವಿಚಾರಣೆಗೆ ಹಾಜರಾಗಲು ನೋಟಿಸ್`ನಲ್ಲಿ ಸೂಚಿಸಲಾಗಿದೆ. ಯಡಿಯೂರಪ್ಪನವರ ಡಾಲರ್ಸ್ ಕಾಲೋನಿ ನಿವಾಸಕ್ಕೆ ತೆರಳಿ ನೋಟಿಸ್ ನೀಡಲಾಗಿದೆ. ಬಿಎಸ್`ವೈ ನೋಟಿಸ್ ಪಡೆದಿದ್ದು, ಈ ಸಂದರ್ಭ ಪಿಎ ಸಂತೋಷ್ ಸಹ ಇದ್ದರು ಎನ್ನಲಾಗಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಎಸ್`ವೈ ಪಿಎ ಸಂತೋಷ್ ಸೇರಿ ಹಲವರನ್ನ ೀಗಾಗಲೇ ಪೊಲಿಸರು ವಿಚಾರಣೆಗೆ ಒಳಪಡಿಸಿದ್ದು, ನಿರೀಕ್ಷಣಾ ಜಾಮೀನು ಪಡೆದಿರುವ ಸಂತೋಷ್ ಜಾಮೀನು ರದ್ಧತಿಗೂ ಅರ್ಜಿ ಸಲ್ಲಿಸಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments