Webdunia - Bharat's app for daily news and videos

Install App

ಜೂನ್‌ 6ರೊಳಗೆ ರಸ್ತೆ ಗುಂಡಿ ಮುಕ್ತ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿಧರ್

Webdunia
ಬುಧವಾರ, 1 ಜೂನ್ 2022 (15:32 IST)
ಮೇ ತಿಂಗಳಲ್ಲಿ ಸತತ ಒಂದು ವಾರ ಮಳೆ ಬಂದಿದ್ದರಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ವಿಳಂಬವಾಗಿದ್ದು, ಜೂನ್‌ 6ರೊಳಗೆ ನಗರದ ಎಲ್ಲಾ ಒಳ ರಸ್ತೆ ಗುಂಡಿ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿಧರ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಭರದಿಂದ ಸಾಗಿದೆ. ನಗರದಲ್ಲಿರುವ ಗುಂಡಿಗಳ ಸರಾಸರಿ ಅಳತೆ 2 ಅಡಿ ವಿಸ್ತೀರ್ಣವಿದ್ದು, 6 ರೊಳಗೆ ಎಲ್ಲಾ ರಸ್ತೆ ಗುಂಡಿ ಮುಚ್ಚಲಾಗುವುದು ಎಂದರು.
ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಹಲ್ಲೆ ನಡೆದಿದೆ ಎಂಬ ವಿಷಯದಲ್ಲಿ ವಿಶೇಷ ಆಯುಕ್ತ ರವೀಂದ್ರ ಅವರ ನೇತೃತ್ವದಲ್ಲಿ ತ್ವರಿತ ತನಿಖೆ ನಡೆಸಲಾಗುವುದು. ಕಂಪನಿ ಹಾಗೂ ಪ್ರಹ್ಲಾದ್ ಗೆ ನೊಟೀಸ್ ನೀಡಲಾಗಿದೆ. ರಸ್ತೆ ಗುಂಡಿ ಮುಚ್ಚುವ ಪೈಥಾನ್ ನಿರ್ವಹಣೆ ಹೊಣೆಯಿಂದ ಪ್ರಹ್ಲಾದ್ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.
ಬಿಬಿಎಂಪಿಗೆ ಹೊಸದಾಗಿ ಸೇರಿದ 110 ಹಳ್ಳಿಗಳ ಅಭಿವೃದ್ಧಿಗೆ 1000 ಕೋಟಿ ಅನುದಾನ ಮೀಸಲಿಡಲಾಗಿದೆ. ಜಲಮಂಡಳಿಯಿಂದ ನೀರಿನ ಪೂರೈಕೆ ಕೆಲ್ಸ ತ್ವರಿತಗೊಳಿಸಲಾಗುತ್ತಿದೆ. ಪ್ರತಿ ವಾರ್ಡ್ ಗೆ 30 ಲಕ್ಷ ರಸ್ತೆ ಗುಂಡಿ ಮುಚ್ಚಲು ಮೀಸಲಿಡಲಾಗಿದೆ ಎಂದು ಅವರು ವಿವರಿಸಿದರು.
2011ರ ಜನಗಣತಿ ಪ್ರಕಾರ 243 ವಾರ್ಡ್ ನಿಗದಿ ಮಾಡಲಾಗಿದೆ. ಪ್ರತಿ ವಾರ್ಡ್ ನಲ್ಲಿ 28 ಸಾವಿರ ಆಸುಪಾಸಿನಲ್ಲಿ ಜನಸಂಖ್ಯೆ ಇರಲಿದೆ. ಕರಡು ಪ್ರತಿ ಕನ್ನಡ, ಇಂಗ್ಲೀಷ್ ಎರಡರಲ್ಲೂ ಪ್ರಕಟಿಸಲಾಗುವುದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ವರದಿ ಪೂರ್ಣ ವಿವರ ಸರಕಾರ ಕೇಳಿದ್ದರಿಂದ ವರದಿ ನೀಡಲು ತಡವಾಗುತ್ತಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments