ಜೂನ್‌ 6ರೊಳಗೆ ರಸ್ತೆ ಗುಂಡಿ ಮುಕ್ತ: ಬಿಬಿಎಂಪಿ ಆಯುಕ್ತ ತುಷಾರ್ ಗಿರಿಧರ್

Webdunia
ಬುಧವಾರ, 1 ಜೂನ್ 2022 (15:32 IST)
ಮೇ ತಿಂಗಳಲ್ಲಿ ಸತತ ಒಂದು ವಾರ ಮಳೆ ಬಂದಿದ್ದರಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯದಲ್ಲಿ ವಿಳಂಬವಾಗಿದ್ದು, ಜೂನ್‌ 6ರೊಳಗೆ ನಗರದ ಎಲ್ಲಾ ಒಳ ರಸ್ತೆ ಗುಂಡಿ ಮುಚ್ಚಲಾಗುವುದು ಎಂದು ಬಿಬಿಎಂಪಿ ಆಯುಕ್ತ ತುಷಾರ್‌ ಗಿರಿಧರ್‌ ಹೇಳಿದ್ದಾರೆ.
ಬೆಂಗಳೂರಿನಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಳೆದ ನಾಲ್ಕೈದು ದಿನಗಳಿಂದ ರಸ್ತೆ ಗುಂಡಿ ಮುಚ್ಚುವ ಕಾರ್ಯ ಭರದಿಂದ ಸಾಗಿದೆ. ನಗರದಲ್ಲಿರುವ ಗುಂಡಿಗಳ ಸರಾಸರಿ ಅಳತೆ 2 ಅಡಿ ವಿಸ್ತೀರ್ಣವಿದ್ದು, 6 ರೊಳಗೆ ಎಲ್ಲಾ ರಸ್ತೆ ಗುಂಡಿ ಮುಚ್ಚಲಾಗುವುದು ಎಂದರು.
ರಸ್ತೆ ಗುಂಡಿ ಮುಚ್ಚುವ ವಿಚಾರದಲ್ಲಿ ಹಲ್ಲೆ ನಡೆದಿದೆ ಎಂಬ ವಿಷಯದಲ್ಲಿ ವಿಶೇಷ ಆಯುಕ್ತ ರವೀಂದ್ರ ಅವರ ನೇತೃತ್ವದಲ್ಲಿ ತ್ವರಿತ ತನಿಖೆ ನಡೆಸಲಾಗುವುದು. ಕಂಪನಿ ಹಾಗೂ ಪ್ರಹ್ಲಾದ್ ಗೆ ನೊಟೀಸ್ ನೀಡಲಾಗಿದೆ. ರಸ್ತೆ ಗುಂಡಿ ಮುಚ್ಚುವ ಪೈಥಾನ್ ನಿರ್ವಹಣೆ ಹೊಣೆಯಿಂದ ಪ್ರಹ್ಲಾದ್ ಬಿಡುಗಡೆ ಮಾಡಲಾಗಿದೆ ಎಂದು ಅವರು ಹೇಳಿದರು.
ಬಿಬಿಎಂಪಿಗೆ ಹೊಸದಾಗಿ ಸೇರಿದ 110 ಹಳ್ಳಿಗಳ ಅಭಿವೃದ್ಧಿಗೆ 1000 ಕೋಟಿ ಅನುದಾನ ಮೀಸಲಿಡಲಾಗಿದೆ. ಜಲಮಂಡಳಿಯಿಂದ ನೀರಿನ ಪೂರೈಕೆ ಕೆಲ್ಸ ತ್ವರಿತಗೊಳಿಸಲಾಗುತ್ತಿದೆ. ಪ್ರತಿ ವಾರ್ಡ್ ಗೆ 30 ಲಕ್ಷ ರಸ್ತೆ ಗುಂಡಿ ಮುಚ್ಚಲು ಮೀಸಲಿಡಲಾಗಿದೆ ಎಂದು ಅವರು ವಿವರಿಸಿದರು.
2011ರ ಜನಗಣತಿ ಪ್ರಕಾರ 243 ವಾರ್ಡ್ ನಿಗದಿ ಮಾಡಲಾಗಿದೆ. ಪ್ರತಿ ವಾರ್ಡ್ ನಲ್ಲಿ 28 ಸಾವಿರ ಆಸುಪಾಸಿನಲ್ಲಿ ಜನಸಂಖ್ಯೆ ಇರಲಿದೆ. ಕರಡು ಪ್ರತಿ ಕನ್ನಡ, ಇಂಗ್ಲೀಷ್ ಎರಡರಲ್ಲೂ ಪ್ರಕಟಿಸಲಾಗುವುದು. ಈ ಬಗ್ಗೆ ಇನ್ನೆರಡು ದಿನಗಳಲ್ಲಿ ಸರ್ಕಾರಕ್ಕೆ ಸಲ್ಲಿಕೆ ಮಾಡಲಾಗುವುದು ವರದಿ ಪೂರ್ಣ ವಿವರ ಸರಕಾರ ಕೇಳಿದ್ದರಿಂದ ವರದಿ ನೀಡಲು ತಡವಾಗುತ್ತಿದೆ ಎಂದು ಅವರು ಹೇಳಿದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೆಎಸ್‌ಆರ್‌ಟಿಸಿ ಬಸ್‌ಗಳಲ್ಲಿ ಇನ್ಮುಂದೆ ಲಗೇಜ್ ಸಾಗಿಸುವವರು ಈ ಸುದ್ದಿ ಓದಲೇ ಬೇಕು

ಮಹಾಶಿವರಾತ್ರಿ ದಿನ ಪವರ್ ದೇವರ ಮೊರೆ ಹೋದ ಡಿಕೆ ಶಿವಕುಮಾರ್ ಪತ್ನಿ ಉಷಾ

ಪಕ್ಷದ ವಿಚಾರ ಅಂತಾ ಬಂದ್ರೆ ನಾವೆಲ್ಲರೂ ಒಂದೇ: ಪ್ರಿಯಾಂಕ್ ಖರ್ಗೆ

ಮಂಡ್ಯ: ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಸಾವು

ಮಾರ್ಚ್ 9 ರಂದು ಸ್ಪೀಕರ್ ಓಂ ಬಿರ್ಲಾಗೆ ಅಗ್ನಿ‍ಪರೀಕ್ಷೆ: ಅವಿಶ್ವಾಸ ನಿರ್ಣಯದ ಚರ್ಚೆಗೆ ವೇದಿಕೆ ಸಜ್ಜು

ಮುಂದಿನ ಸುದ್ದಿ
Show comments