Webdunia - Bharat's app for daily news and videos

Install App

ಬಿಸಿಲಿನಿಂದ ತತ್ತರಿಸಿದ ಬೆಂಗಳೂರಿಗೆ ತಂಪೆರಚಿದ ಮಳೆರಾಯ

Krishnaveni K
ಶುಕ್ರವಾರ, 3 ಮೇ 2024 (09:09 IST)
WD
ಬೆಂಗಳೂರು: ದಾಖಲೆಯ ತಾಪಮಾನದಿಂದ ತತ್ತರಿಸಿ ಹೋಗಿದ್ದ ಬೆಂಗಳೂರಿಗರಿಗೆ ನಿನ್ನೆ ರಾತ್ರಿ ಮಳೆರಾಯ ತಂಪೆರಚಿದ್ದಾನೆ. ಇದರಿಂದ ನೀರಿಲ್ಲದೇ ಬವಣೆ ಪಡುತ್ತಿದ್ದ ಬೆಂಗಳೂರಿಗರು ಸಮಾಧಾನದ ನಿಟ್ಟುಸಿರು ಬಿಡುವಂತಾಗಿದೆ.

ನಿನ್ನೆ ಜಯನಗರ, ಜೆಪಿ ನಗರ, ಮೆಜೆಸ್ಟಿಕ್, ರಾಜಾಜಿನಗರ, ರೇಸ್ ಕೋರ್ಸ್, ಕೋರಮಂಗಲ, ರಿಚ್ಮಂಡ್ ಸರ್ಕಲ್, ಕಬ್ಬನ್ ಪಾರ್ಕ್, ವಿಧಾನಸೌಧ, ಶಾಂತಿನಗರ, ಕೆಆರ್ ಪುರಂ, ಪೀಣ್ಯ, ದಾಸರಹಳ್ಳಿ, ಬಾಗಲಕುಂಟೆ, ಶೆಟ್ಟಿಹಳ್ಳಿ, ಮಲ್ಲಸಂದ್ರ ಸೇರಿದಂತೆ ಹಲವೆಡೆ ಗುಡುಗು ಸಹಿತ ಮಳೆಯಾಗಿದೆ.

ಸುಮಾರು 15 ನಿಮಿಷಗಳಷ್ಟು ಕಾಲ ಮಳೆ ಸುರಿದಿದೆ. ಕಳೆದ ಒಂದು ವಾರದಿಂದ ದಾಖಲೆಯ ಪ್ರಮಾಣದಲ್ಲಿ ತಾಪಮಾನ ಕಂಡುಬಂದಿತ್ತು. ಇದೀಗ ಮಳೆ ಬಂದಿದ್ದರಿಂದ ಕೊಂಚ ಸಮಾಧಾನವಾದಂತಾಗಿದೆ. ಸಂಜೆ ವೇಳೆ ದಿಡೀರ್ ಮಳೆಯಿಂದಾಗಿ ವಾಹನ ಸಂಚಾರ ಕೊಂಚ ಏರುಪೇರಾಗಿತ್ತು.

ಮುಂದಿನ ವಾರದವರೆಗೂ ಮಳೆಯಾಗುವ ಸೂಚನೆಯಿದೆ. ಹವಾಮಾನ ವರದಿ ಪ್ರಕಾರ ಬೆಂಗಳೂರು, ಉಡುಪಿ, ತುಮಕೂರು ಮುಂತಾದ ಕಡೆ ಮುಂದಿನ ವಾರ ಮಳೆಯಾಗುವ ಸಾಧ‍್ಯತೆಯಿದೆ. ಇನ್ನಾದರೂ ಬೆಂಗಳೂರನ ನೀರಿನ ಬವಣೆ ಮುಗಿಯಲಿ ಎನ್ನುವುದು ಜನರ ಆಶಯ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Sonia Gandhi: ಮತ್ತೇ ಆಸ್ಪತ್ರೆಗೆ ಭೇಟಿ, ಕಾಂಗ್ರೆಸ್‌ನ ಹಿರಿಯ ನಾಯಕಿಯ ಆರೋಗ್ಯ ಈಗ ಹೀಗಿದೆ

ಹಸಿವು, ನಿರುದ್ಯೋಗದಿಂದ ಬಳಲುತ್ತಿದ್ದರು ಪಾಕ್‌ ಭಯೋತ್ಪಾದನೆ ಬಿಡುತ್ತಿಲ್ಲ: ಸಚಿವ ನಿತಿನ್ ಗಡ್ಕರಿ ಆಕ್ರೋಶ

ಅಧಿಕಾರದಲ್ಲಿ ಮುಂದುವರೆಯಲು ಸಿಎಂ, ಡಿಸಿಎಂಗೆ ಯಾವುದೇ ನೈತಿಕತೆಯಿಲ್ಲ: ಪ್ರಹ್ಲಾದ್ ಜೋಶಿ ಆಕ್ರೋಶ

Bengaluru Stampede: ಈ ದುರಂತದಿಂದ ರಾಜ್ಯ ಸರ್ಕಾರ ಪಾಠ ಕಲಿತಿದೆ, ಡಿಸಿಎಂ ಡಿಕೆ ಶಿವಕುಮಾರ್‌

Bengaluru Stampede: ಅಮಾನತುಗೊಂಡ ಐಪಿಎಸ್ ಅಧಿಕಾರಿಯಿಂದ ಹೊಸ ಹೆಜ್ಜೆ

ಮುಂದಿನ ಸುದ್ದಿ
Show comments