Webdunia - Bharat's app for daily news and videos

Install App

Bengaluru Rains: ಪಾಕಿಸ್ತಾನ ಹೇಳಿದ್ದು ನಿಜವಾಯ್ತು ಬೆಂಗಳೂರಲ್ಲಿ ಬಂದರು ಮಾಡಬಹುದು

Krishnaveni K
ಸೋಮವಾರ, 19 ಮೇ 2025 (09:32 IST)
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ 10 ವರ್ಷಗಳಲ್ಲೇ ಇಲ್ಲದಷ್ಟು ದಾಖಲೆಯ ಮಳೆಯಾಗಿದ್ದು ಪಾಕಿಸ್ತಾನಿಗ ಹೇಳಿದ ಬಂದರು ಈಗ ನಿಜ ಮಾಡಬಹುದೇನೋ. ಬೆಂಗಳೂರಿನ ರಸ್ತೆ ಅವಸ್ಥೆ ಆ ಮಟ್ಟಿಗೆ ತಲುಪಿದೆ.

ಶನಿವಾರದಿಂದ ಬೆಂಗಳೂರಿನಲ್ಲಿ ಭಾರೀ ಮಳೆಯಾಗುತ್ತಿದೆ. ನಿನ್ನೆ ಹಗಲು ಮೋಡ ಕವಿದ ವಾತಾವರಣವಿತ್ತು. ಆದರೆ ರಾತ್ರಿಯಿಡೀ ಸುರಿದ ಮಳೆಗೆ ಜನ ನಿದ್ರೆಗೆಟ್ಟು ಕೂರುವಂತಾಗಿತ್ತು. ಹಲವೆಡೆ ಮನೆಗಳಿಗೆ ಮಳೆ ನೀರು ನುಗ್ಗಿದೆ. ರಸ್ತೆಗಳೂ ಜಲಾವೃತವಾಗಿದೆ. ರಸ್ತೆಯಲ್ಲಿ ನೀರು ನಿಂತಿರುವುದು ನೋಡಿ ಜನ ಬೆಂಗಳೂರಿನಲ್ಲಿ ಪಾಕಿಸ್ತಾನಿಗ ಹೇಳಿದಂತೆ ಬಂದರು ನಿರ್ಮಾಣ ಮಾಡಬಹುದು ಎಂದು ಟ್ರೋಲ್ ಮಾಡಿದ್ದಾರೆ.  ಭಾರತ ಮತ್ತು ಪಾಕಿಸ್ತಾನ ನಡುವೆ ಕದನದ ವೇಳೆ ಪಾಕಿಸ್ತಾನಿಗನೊಬ್ಬ ಸೋಷಿಯಲ್ ಮೀಡಿಯಾ ಎಕ್ಸ್ ಪುಟದಲ್ಲಿ ಬೆಂಗಳೂರು ಬಂದರನ್ನು ನಾವು ಉಡಾಯಿಸಿದ್ದೇವೆ ಎಂದು ಕೊಚ್ಚಿಕೊಂಡಿದ್ದ. ಆತನ ಹೇಳಿಕೆ ಸಾಕಷ್ಟು ನಗೆಪಾಟಲಿಗೀಡಾಗಿತ್ತು. ನಮ್ಮಲ್ಲಿ ಸಮುದ್ರವೇ ಇಲ್ಲ ಇನ್ನು ಪೋರ್ಟ್ ಎಲ್ಲಿಂದ ಬರುತ್ತದೆ ಎಂದು ಟ್ರೋಲ್ ಮಾಡಿದ್ದರು. ಇದೀಗ ಬೆಂಗಳೂರಿನ ರಸ್ತೆಗಳು ಸಮುದ್ರದಂತಾಗಿರುವುದಕ್ಕೆ ಪಾಕಿಸ್ತಾನಿಗನ ಕಾಮೆಂಟ್ ಉಲ್ಲೇಖಿಸಿ ಟ್ರೋಲ್ ಮಾಡುತ್ತಿದ್ದಾರೆ.


ವಿಶೇಷವಾಗಿ ಮಾನ್ಯತಾ ಟೆಕ್ ಪಾರ್ಕ್ ಬಳಿಯ ರಸ್ತೆ ಸಂಪೂರ್ಣವಾಗಿ ಮುಳುಗಿದ್ದು ವಾಹನ ಸಂಚಾರಕ್ಕೆ ಅಡ್ಡಿಯಾಗಿದೆ. ಸಾರ್ವಜನಿಕರಿಗೆ ಬದಲಿ ರಸ್ತೆ ಮೂಲಕ ಸಂಚರಿಸಲು ಸೂಚಿಸಲಾಗಿದೆ.

ಒಟ್ಟು 104 ಮಿ.ಮೀ. ಮಳೆಯಾಗಿದ್ದು ಕಳೆದ 10 ವರ್ಷಗಳಲ್ಲೇ ಇದೇ ಮೊದಲ ಬಾರಿಗೆ ಮೇ ತಿಂಗಳಲ್ಲಿ ಇಷ್ಟು ಮಳೆಯಾಗಿದೆ. ಇಂದೂ ಕೂಡಾ ಬೆಳಿಗ್ಗೆಯಿಂದಲೇ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ. ಮುಂದಿನ ನಾಲ್ಕು ದಿನಗಳಿಗೆ ಮಳೆಯ ಸಾಧ್ಯತೆಯಿದೆ ಎಂದು ಹವಾಮಾನ ವರದಿಗಳು ಹೇಳಿವೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪಿಲಿಕುಳ ಜೈವಿಕ ಉದ್ಯಾನವನದಲ್ಲಿ 6 ಪ್ರಾಣಿಗಳು ಸಾವು, ಪ್ರಾಣಿ ಪ್ರಿಯರಲ್ಲಿ ಆತಂಕ

ಮದುವೆಯಾಗುವುದಾಗಿ ಗರ್ಭಿಣಿ ಮಾಡಿ ವಂಚನೆ: ಮಗನ ಪರಾರಿಗೆ ಸಹಾಯ ಮಾಡಿದ ಬಿಜೆಪಿ ಮುಖಂಡ ಅರೆಸ್ಟ್‌

90ನೇ ಹುಟ್ಟುಹಬ್ಬದ ಸಂಭ್ರಮದಲ್ಲಿ ದಲೈ ಲಾಮಾ: 130 ವರ್ಷಗಳ ಕಾಲ ಬದುಕುವ ವಿಶ್ವಾಸ

ಮರಾಠಿ ಮಾತನಾಡಲ್ಲ ಎಂದ ಉದ್ಯಮಿ ಕಚೇರಿ ಮೇಲೆ ಕಲ್ಲೆಸೆದ ಎಂಎನ್‌ಎಸ್ ಕಾರ್ಯಕರ್ತರು

ಅರಣ್ಯ ಇಲಾಖೆಯ‌ಲ್ಲಿ ಉದ್ಯೋಗಾಂಕ್ಷಿಗಳಿಗೆ ಭರ್ಜರಿ ಗುಡ್‌ನ್ಯೂಸ್‌, 6000ಹುದ್ದೆಗಳು ಶೀಘ್ರದಲ್ಲೇ ಭರ್ತಿ

ಮುಂದಿನ ಸುದ್ದಿ
Show comments