Webdunia - Bharat's app for daily news and videos

Install App

ತಡರಾತ್ರಿ ಸಿಡಿಲಿಗೆ ಬೆಚ್ಚಿದ್ದ ಬೆಂಗಳೂರು: ಮಳೆ ಮುನ್ಸೂಚನೆಯ ಲೇಟೆಸ್ಟ್ ಮಾಹಿತಿ ಇಲ್ಲಿದೆ

Krishnaveni K
ಸೋಮವಾರ, 13 ಮೇ 2024 (09:55 IST)
ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಸಿಡಿಲು, ಮಿಂಚಿನ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಮುಂಗಾರು ಪೂರ್ವ ಮಳೆ ಬೆಂಗಳೂರಿನಲ್ಲಿ ನಿನ್ನೆಯೂ ಮುಂದುವರಿದಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ನಿನ್ನೆ ತಡರಾತ್ರಿ ಮಳೆಗಿಂತ ಗುಡುಗು-ಮಿಂಚಿನ ಅಬ್ಬರವೇ ಹೆಚ್ಚಾಗಿತ್ತು. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ರಾಜರಾಜೇಶ್ವರಿ ನಗರದಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಉಳಿದಂತೆ ಹಲವೆಡೆ ಸಿಡಿಲು ಮತ್ತು ಗಾಳಿಯ ಅಬ್ಬರ ಜೋರಾಗಿತ್ತು. ಮುಂಗಾರು ಪೂರ್ವ ಬಂದಿರುವ ಈ ಚಿಕ್ಕ ಮಳೆಗೇ ಕೆಲವೆಡೆ ಮನೆಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಕೇವಲ ಬೆಂಗಳೂರು ಮಾತ್ರವಲ್ಲದೆ, ನಿನ್ನೆ ರಾಜ್ಯದ ಬಹುತೇಕ ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೋಲಾರ ಸೇರಿದಂತೆ ಬಹುತೇಕ ಕಡೆ ನಿನ್ನೆ ಮಳೆಯಾಗಿದೆ. ಬಿರು ಬೇಸಿಗೆಯಿಂದ ತತ್ತರಿಸಿದ್ದ ಜನಕ್ಕೆ ಈ ಮಳೆ ಸಮಾಧಾನ ನೀಡಿದೆ.

ಇಂದು ಬೆಂಗಳೂರಿನಲ್ಲಿ ಹಗಲು ಮಳೆಯ ಸೂಚನೆ ಇಲ್ಲದಿದ್ದರೂ ರಾತ್ರಿ ಮಳೆಯಾಗುವ ಸಂಭವವಿದೆ. ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ವೀಕೆಂಡ್ ಪೂರ್ತಿ ಮಳೆಯಾಗುವ ಸೂಚನೆ ಕಂಡುಬಂದಿದೆ. ಕೆಲವು ದಿನಗಳ ಹಿಂದೆ ತಾಪಮಾನ ಕರ್ನಾಟಕದಾದ್ಯಂತ ಸರಾಸರಿ 35 ಡಿಗ್ರಿ ದಾಟಿತ್ತು. ಆದರೆ ಈಗ 31-30 ಕ್ಕೆ ಬಂದಿಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

MahakumbhMela: ನಾಪತ್ತೆಯಾಗಿದ್ದ ಚಿಕ್ಕಮಗಳೂರಿನ ಅರ್ಚಕ 6 ತಿಂಗಳ ಬಳಿಕ ಪತ್ತೆ

Bengaluru: ಇಬ್ಬರು ಮಕ್ಕಳಿದ್ದರು ಮತ್ತೇ ಪ್ರೀತಿಯಲ್ಲಿ ಬಿದ್ದ ಮಹಿಳೆ, ಬದುಕು ದುರಂತ ಅಂತ್ಯ

B Dayanand: ಬಿ ದಯಾನಂದ್ ಎಷ್ಟು ಕರ್ತವ್ಯ ನಿಷ್ಠರು ಎನ್ನುವುದಕ್ಕೆ ಈ ವಿಡಿಯೋನೇ ಸಾಕ್ಷಿ

ಬಿಜೆಪಿ ನಾಯಕರಿಗೆ ಎರಡು ನಾಲಿಗೆ, ಗಳಿಗೆಗೊಂದು ಬಣ್ಣ: ಸಿಎಂ ಸಿದ್ದರಾಮಯ್ಯ

Indore murder: ಖತರ್ನಾಕ್ ಸೋನಮ್ ರಘುವಂಶಿ ಲವ್ವರ್ ಫೋಟೋ ರಿವೀಲ್: ಇವನಿಗಾಗಿ ಇಷ್ಟೆಲ್ಲಾ ಮಾಡಿದ್ಳಾ

ಮುಂದಿನ ಸುದ್ದಿ
Show comments