Webdunia - Bharat's app for daily news and videos

Install App

ತಡರಾತ್ರಿ ಸಿಡಿಲಿಗೆ ಬೆಚ್ಚಿದ್ದ ಬೆಂಗಳೂರು: ಮಳೆ ಮುನ್ಸೂಚನೆಯ ಲೇಟೆಸ್ಟ್ ಮಾಹಿತಿ ಇಲ್ಲಿದೆ

Krishnaveni K
ಸೋಮವಾರ, 13 ಮೇ 2024 (09:55 IST)
ಬೆಂಗಳೂರು: ಬೆಂಗಳೂರಿನಲ್ಲಿ ತಡರಾತ್ರಿ ಸಿಡಿಲು, ಮಿಂಚಿನ ಅಬ್ಬರಕ್ಕೆ ಜನ ಬೆಚ್ಚಿಬಿದ್ದಿದ್ದಾರೆ. ಮುಂಗಾರು ಪೂರ್ವ ಮಳೆ ಬೆಂಗಳೂರಿನಲ್ಲಿ ನಿನ್ನೆಯೂ ಮುಂದುವರಿದಿದೆ.

ಕಳೆದ ಒಂದು ವಾರದಿಂದ ಬೆಂಗಳೂರಿನಲ್ಲಿ ಅಲ್ಲಲ್ಲಿ ಮಳೆಯಾಗುತ್ತಲೇ ಇದೆ. ನಿನ್ನೆ ತಡರಾತ್ರಿ ಮಳೆಗಿಂತ ಗುಡುಗು-ಮಿಂಚಿನ ಅಬ್ಬರವೇ ಹೆಚ್ಚಾಗಿತ್ತು. ಮೆಜೆಸ್ಟಿಕ್, ಕೆಆರ್ ಮಾರ್ಕೆಟ್, ರಾಜರಾಜೇಶ್ವರಿ ನಗರದಲ್ಲಿ ನಿನ್ನೆ ಭಾರೀ ಮಳೆಯಾಗಿದೆ. ಉಳಿದಂತೆ ಹಲವೆಡೆ ಸಿಡಿಲು ಮತ್ತು ಗಾಳಿಯ ಅಬ್ಬರ ಜೋರಾಗಿತ್ತು. ಮುಂಗಾರು ಪೂರ್ವ ಬಂದಿರುವ ಈ ಚಿಕ್ಕ ಮಳೆಗೇ ಕೆಲವೆಡೆ ಮನೆಗೆ ನೀರು ನುಗ್ಗಿ ಜನ ಪರದಾಡುವಂತಾಗಿದೆ.

ಕೇವಲ ಬೆಂಗಳೂರು ಮಾತ್ರವಲ್ಲದೆ, ನಿನ್ನೆ ರಾಜ್ಯದ ಬಹುತೇಕ ಕಡೆ ಮಳೆಯಾಗಿದೆ. ದಕ್ಷಿಣ ಕನ್ನಡ, ಚಿಕ್ಕಮಗಳೂರು, ಬೆಳಗಾವಿ, ಕೋಲಾರ ಸೇರಿದಂತೆ ಬಹುತೇಕ ಕಡೆ ನಿನ್ನೆ ಮಳೆಯಾಗಿದೆ. ಬಿರು ಬೇಸಿಗೆಯಿಂದ ತತ್ತರಿಸಿದ್ದ ಜನಕ್ಕೆ ಈ ಮಳೆ ಸಮಾಧಾನ ನೀಡಿದೆ.

ಇಂದು ಬೆಂಗಳೂರಿನಲ್ಲಿ ಹಗಲು ಮಳೆಯ ಸೂಚನೆ ಇಲ್ಲದಿದ್ದರೂ ರಾತ್ರಿ ಮಳೆಯಾಗುವ ಸಂಭವವಿದೆ. ಇನ್ನೂ ನಾಲ್ಕು ದಿನ ಮಳೆಯಾಗುವ ಸೂಚನೆ ಕಂಡುಬಂದಿದೆ. ಬೆಂಗಳೂರಿನಲ್ಲಿ ಗುರುವಾರದಿಂದ ವೀಕೆಂಡ್ ಪೂರ್ತಿ ಮಳೆಯಾಗುವ ಸೂಚನೆ ಕಂಡುಬಂದಿದೆ. ಕೆಲವು ದಿನಗಳ ಹಿಂದೆ ತಾಪಮಾನ ಕರ್ನಾಟಕದಾದ್ಯಂತ ಸರಾಸರಿ 35 ಡಿಗ್ರಿ ದಾಟಿತ್ತು. ಆದರೆ ಈಗ 31-30 ಕ್ಕೆ ಬಂದಿಳಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments